ಮುಂಬೈ, ಆ.9: ಮಹಾತ್ಮಾ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ (Tushar Gandhi) ಅವರು ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥವಾಗಿ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದಾಗ ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ತುಷಾರ್ ಗಾಂಧಿ ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು,”ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ನಾನು ಆಗಸ್ಟ್ 9ರಂದು ನಡೆದ ಕ್ವಿಟ್ ಇಂಡಿಯಾ ದಿನದ ನೆನಪಿಗಾಗಿ ಕ್ರಾಂತಿ ಮೈದಾನ ಮನೆಯಿಂದ ಹೊರಟಾಗ ಸಾಂತಾಕ್ರೂಜ್ ಪೊಲೀಸ್ ಬಂಧಿಸಿದ್ದಾರೆ. ಈ ದಿನದಂದೇ ನನ್ನನ್ನೂ ಬಂಧಿಸಿರುವುದು ನನಗೆ ಹೆಮ್ಮೆ ಇದೆ ಎಂದು ಟ್ವೀಟ್ ಮಾಡಿದ್ದಾರೆ.
ಪೊಲೀಸ ವರದಿ ಪ್ರಕಾರ ಕ್ರಾಂತಿ ಮೈದಾನದಲ್ಲಿ ಮೌನ ಮೆರವಣಿಗೆ ಮಾಡಲು ಅವಕಾಶ ಇಲ್ಲ, ಆದರೆ ಈ ಯೋಜನೆಯನ್ನು ಅವರು ಹಾಕಿಕೊಂಡಿದ್ದಾರೆ. ಇದು ‘ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆ ಎಂದು ಹೇಳಿದ್ದಾರೆ. ಇನ್ನು ತುಷಾರ್ ಗಾಂಧಿ, ಒಂದು ವೇಳೆ ನನಗೆ ಠಾಣೆಯಿಂದ ಬಿಡುಗಡೆ ನೀಡಿದರೆ ನಾನು ಖಂಡಿತ ಕ್ರಾಂತಿ ಮೈದಾನಕ್ಕೆ ಹೋಗುತ್ತೇನೆ. ಈ ದಿನವನ್ನು ಸ್ಮರಿಸುವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಇಂದೋರ್ ತಲುಪುತ್ತಿದ್ದಂತೆ ಬಾಂಬ್ ಸ್ಫೋಟಿಸುವುದಾಗಿ ರಾಹುಲ್ ಗಾಂಧಿಗೆ ಬೆದರಿಕೆ ಪತ್ರ
ಈ ಬಗ್ಗೆ ಮಾತನಾಡಿದ ಮಹಾತ್ಮಾ ಗಾಂಧಿಯವರ ಮತ್ತೊಬ್ಬ ಮರಿ ಮೊಮ್ಮಗ ಅರುಣ್ ಮಣಿಲಾಲ್ ಅವರು, ಕ್ವಿಟ್ ಇಂಡಿಯಾ ಚಳುವಳಿಯ ಆರಂಭದ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನವನ್ನು ಆಚರಿಸಲಾಗುತ್ತದೆ. ಬ್ರಿಟಿಷರು ಭಾರತವನ್ನು ತೊರೆಯುವಂತೆ ಒತ್ತಾಯಿಸುವ ನಿರ್ಣಯವನ್ನು ಕಾಂಗ್ರೆಸ್ ಈ ದಿನ ಅಂಗೀಕರಿಸಿತು. ಇದರಲ್ಲಿ ಭಾಗವಹಿಸುವುದು ಅಥವಾ ಸ್ಮರಿಸುವುದು ಯಾವ ತಪ್ಪು ಇಲ್ಲ ಎಂದು ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ