AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಜತೆ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ

ನವೆಂಬರ್ 7 ರಿಂದ ಮಹಾರಾಷ್ಟ್ರದ ಮೂಲಕ ಹಾದುಹೋಗುವ ಯಾತ್ರೆಯು ಅಕೋಲಾ ಜಿಲ್ಲೆಯ ಬಾಲಾಪುರದಿಂದ ಬೆಳಿಗ್ಗೆ 6 ಗಂಟೆಯ ಹೊತ್ತಿಗೆ ಪ್ರಯಾಣವನ್ನು ಪುನರಾರಂಭಿಸಿತು.

ರಾಹುಲ್ ಗಾಂಧಿ ಜತೆ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜತೆ ತುಷಾರ್ ಗಾಂಧಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 18, 2022 | 12:52 PM

Share

ಶೇಗಾಂವ್, ಮಹಾರಾಷ್ಟ್ರ: ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ (Tushar Gandhi) ಇಂದು (ಶುಕ್ರವಾರ) ಬೆಳಗ್ಗೆ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಶೇಗಾಂವ್‌ನಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ರಾಹುಲ್ ಗಾಂಧಿ (Rahul Gandhi) ಜತೆ ಹೆಜ್ಜೆ ಹಾಕಿದ್ದಾರೆ. ತುಷಾರ್ ಗಾಂಧಿ ಅವರ ಭಾಗವಹಿಸುವಿಕೆಯನ್ನು ಐತಿಹಾಸಿಕ ಎಂದು ಕಾಂಗ್ರೆಸ್ ಶ್ಲಾಘಿಸಿದೆ. ನವೆಂಬರ್ 7 ರಿಂದ ಮಹಾರಾಷ್ಟ್ರದ ಮೂಲಕ ಹಾದುಹೋಗುವ ಯಾತ್ರೆಯು ಅಕೋಲಾ ಜಿಲ್ಲೆಯ ಬಾಲಾಪುರದಿಂದ ಬೆಳಿಗ್ಗೆ 6 ಗಂಟೆಯ ಹೊತ್ತಿಗೆ ಪ್ರಯಾಣವನ್ನು ಪುನರಾರಂಭಿಸಿತು. ಕೆಲವು ಗಂಟೆಗಳ ನಂತರ ಅದು ಶೇಗಾಂವ್ ತಲುಪಿತು. ಇಲ್ಲಿ ಲೇಖಕ ಮತ್ತು ಕಾರ್ಯಕರ್ತ ತುಷಾರ್ ಗಾಂಧಿ ಯಾತ್ರೆಗೆ ಸೇರಿಕೊಂಡರು. ನಾನು ನಾಳೆ ಶೇಗಾಂವ್​​ನಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದು ತುಷಾರ್ ಗಾಂಧಿ ಗುರುವಾರ ಟ್ವೀಟ್ ಮಾಡಿದ್ದರು. ನವೆಂಬರ್18 ರಂದು ಶೇಗಾಂವ್‌ನಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ. ಶೇಗಾಂವ್ ನನ್ನ ಜನ್ಮಸ್ಥಳವೂ ಹೌದು. ನನ್ನ ತಾಯಿ ಪ್ರಯಾಣಿಸುತ್ತಿದ್ದ ರೈಲು ನಾಗಪುರ ಮೂಲಕ ಹೋಗುವ ಹೌರಾ ಮೇಲ್ ನಾನು ಜನಿಸಿದ ದಿನ 1960 ರ ಜನವರಿ 17 ರಂದು ಶೇಗಾಂವ್ ನಿಲ್ದಾಣದಲ್ಲಿ ನಿಲುಗಡೆಯಾಗಿತ್ತು ಎಂದು ಟ್ವೀಟಿನಲ್ಲಿ ಬರೆದಿದ್ದಾರೆ.

ತುಷಾರ್ ಗಾಂಧಿ ಯಾತ್ರೆಯಲ್ಲಿ ಭಾಗವಹಿಸಿದ್ದು ಐತಿಹಾಸಿಕ ಎಂದು ಕಾಂಗ್ರೆಸ್ ಬಣ್ಣಿಸಿದೆ.

ಜವಾಹರಲಾಲ್ ನೆಹರು ಮತ್ತು ಮಹಾತ್ಮ ಗಾಂಧಿಯವರ ಮರಿ ಮೊಮ್ಮಕ್ಕಳಾದ ರಾಹುಲ್ ಗಾಂಧಿ ಮತ್ತು ತುಷಾರ್ ಗಾಂಧಿಯನ್ನು ಪಕ್ಷವು ಇಬ್ಬರು ನಾಯಕರ ಪರಂಪರೆಯ ವಾಹಕಗಳು ಎಂದು ಬಣ್ಣಿಸಿದೆ.

“ಇಬ್ಬರು ಒಟ್ಟಿಗೆ ನಡೆಯುವುದು ಆಡಳಿತಗಾರರಿಗೆ ಸಂದೇಶವಾಗಿದೆ, ಅವರು ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಸಿಲುಕಿಸಬಹುದು ಆದರೆ ಅದನ್ನು ಮುಗಿಸಲು ಬಿಡುವುದಿಲ್ಲಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ತುಷಾರ್ ಗಾಂಧಿ ಅವರಲ್ಲದೆ, ಹಿರಿಯ ಕಾಂಗ್ರೆಸ್ ನಾಯಕರಾದ ಮುಕುಲ್ ವಾಸ್ನಿಕ್, ದೀಪೇಂದರ್ ಹೂಡಾ, ಮಿಲಿಂದ್ ದಿಯೋರಾ, ಮಾಣಿಕ್ರಾವ್ ಠಾಕ್ರೆ, ಮುಂಬೈ ಕಾಂಗ್ರೆಸ್ ಅಧ್ಯಕ್ಷ ಭಾಯಿ ಜಗತಾಪ್ ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ ಅವರು ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.

ರಾಹುಲ್ ಗಾಂಧಿ ಇಂದು ಸಂಜೆ ಶೇಗಾಂವ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರದಲ್ಲಿ ಕೊನೆಯ ಹಂತದಲ್ಲಿದ್ದು, ನವೆಂಬರ್ 20 ರಂದು ಮಧ್ಯಪ್ರದೇಶವನ್ನು ಪ್ರವೇಶಿಸಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ