AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದನ ಸಮಿತಿಯಲ್ಲಿ ವೈಯಕ್ತಿಕ ಪ್ರಶ್ನೆ ಕೇಳಲಾಗಿದೆ; ಓಂ ಬಿರ್ಲಾಗೆ ಪತ್ರ ಬರೆದ ಮಹುವಾ ಮೊಯಿತ್ರಾ

ನೀತಿ ನಿಯಮ ಸಮಿತಿಯಲ್ಲಿ ನೀತಿಯೇ ಉಳಿದಿಲ್ಲ. ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುವ ಬದಲು, ಅಧ್ಯಕ್ಷರು ಮಾನಹಾನಿಕರ ರೀತಿಯಲ್ಲಿ ನನ್ನನ್ನು ಪ್ರಶ್ನಿಸುವ ಮೂಲಕ ದುರುದ್ದೇಶಪೂರಿತವಾಗಿ ಮತ್ತು ಸ್ಪಷ್ಟವಾಗಿ ಪೂರ್ವಾಗ್ರಹ ಪೀಡಿತ ಪಕ್ಷಪಾತವನ್ನು ಪ್ರದರ್ಶಿಸಿದರು, ಆದ್ದರಿಂದ ಹಾಜರಿದ್ದ 11 ಸದಸ್ಯರಲ್ಲಿ 5 ಸದಸ್ಯರು ಹೊರನಡೆವ ಮೂಲಕ ನಾಚಿಕೆಗೇಡಿನ ನಡವಳಿಕೆಯನ್ನು ಪ್ರತಿಭಟಿಸಿ ಕಲಾಪವನ್ನು ಬಹಿಷ್ಕರಿಸಿದರು ಎಂದು ಟಿಎಂಸಿ ಸಂಸದೆ ಹೇಳಿದ್ದಾರೆ

ಸದನ ಸಮಿತಿಯಲ್ಲಿ ವೈಯಕ್ತಿಕ ಪ್ರಶ್ನೆ ಕೇಳಲಾಗಿದೆ; ಓಂ ಬಿರ್ಲಾಗೆ ಪತ್ರ ಬರೆದ ಮಹುವಾ ಮೊಯಿತ್ರಾ
ಮಹುವಾ ಮೊಯಿತ್ರಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Nov 02, 2023 | 9:37 PM

Share

ದೆಹಲಿ ನವೆಂಬರ್ 02: ಪ್ರಶ್ನೆಗಾಗಿ ನಗದು ಪ್ರಕರಣಕ್ಕೆ (cash-for-query) ಸಂಬಂಧಿಸಿದಂತೆ ಗುರುವಾರ ಲೋಕಸಭೆಯ ನೀತಿ ನಿಯಮ ಸಮಿತಿ (Ethics Committee) ಮುಂದೆ ಹಾಜರಾದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ವಿಚಾರಣೆಯ ವೇಳೆ, ಸಮಿತಿಯ ಎಲ್ಲ ಸದಸ್ಯರ ಸಮ್ಮುಖದಲ್ಲಿ ಸಮಿತಿ ಅಧ್ಯಕ್ಷರು ಅನೈತಿಕ, ಅಸಹ್ಯ, ಅವಮಾನಕರ ಮತ್ತು ಪೂರ್ವಾಗ್ರಹ ಪೀಡಿತ ನಡವಳಿಕೆ ತೋರಿದ್ದಾರೆ. ಅವರು ಮಾತಿನಿಂದಲೇ ವಸ್ತ್ರಾಹರಣ ಮಾಡಿದರು ಎಂದು ಆರೋಪಿಸಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.

ಲೋಕಸಭೆಯ ನೀತಿ ನಿಯಮ ಸಮಿತಿ ಅಧ್ಯಕ್ಷ ವಿನೋದ್ ಕುಮಾರ್ ಸೋಂಕರ್ “ಅಸಭ್ಯ ವೈಯಕ್ತಿಕ” ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಆರೋಪಿಸಿ ಮೊಯಿತ್ರಾ ಅವರೊಂದಿಗೆ ಸದನ ಸಮಿತಿಯಿಂದ ಪ್ರತಿಪಕ್ಷ ಸದಸ್ಯರು ಸಭೆಯಿಂದ ಹೊರನಡೆದಿದ್ದಾರೆ.

ಲಂಚದ ಆರೋಪಗಳಿಗೆ ನಿರಪರಾಧಿ ಎಂದು ಪ್ರತಿಪಾದಿಸಿದ ಮೊಯಿತ್ರಾ, ವಾಕ್‌ಔಟ್‌ನ ನಂತರ ಸೋಂಕರ್ ಅವರ ಪ್ರಶ್ನೆಗಳನ್ನು “ಕೊಳಕು” ಎಂದಿದ್ದಾರೆ. ಬಿರ್ಲಾ ಅವರಿಗೆ ಬರೆದ ಪತ್ರದಲ್ಲಿ, ಸೋಂಕರ್ ಅವರು ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುವ ಬದಲು, ದುರುದ್ದೇಶಪೂರಿತ ಮತ್ತು ಮಾನಹಾನಿಕರ ರೀತಿಯಲ್ಲಿ ಪ್ರಶ್ನಿಸುವ ಮೂಲಕ ಪೂರ್ವಗ್ರಹದ ಪ್ರದರ್ಶಿಸಿದರು ಎಂದು ಮೊಯಿತ್ರಾ ಆರೋಪಿಸಿದ್ದಾರೆ.

ಅಧ್ಯಕ್ಷರು ನೀತಿ ನಿಯಮ ಸಮಿತಿಯ ವಿಚಾರಣೆಯಲ್ಲಿ ನನಗೆ ತೋರಿದ ಅನೈತಿಕ, ಅಸಭ್ಯ ಮತ್ತು ಪೂರ್ವಾಗ್ರಹ ಪೀಡಿತ ನಡವಳಿಕೆಯ ಬಗ್ಗೆ ನಿಮಗೆ ತಿಳಿಸಲು ನಾನು ಇಂದು ಬಹಳ ದುಃಖದಿಂದ ನಿಮಗೆ ಬರೆಯುತ್ತೇನೆ. ನಾನು ಅವರ ಮಾತಿನಿಂದಲೇ ವಸ್ತ್ರಾಹರಣಗೊಳಗಾದೆ ಎಂದು ಮೊಯಿತ್ರಾ ಹೇಳಿದ್ದಾರೆ.

ನೀತಿ ನಿಯಮ ಸಮಿತಿಯಲ್ಲಿ ನೀತಿಯೇ ಉಳಿದಿಲ್ಲ. ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುವ ಬದಲು, ಅಧ್ಯಕ್ಷರು ಮಾನಹಾನಿಕರ ರೀತಿಯಲ್ಲಿ ನನ್ನನ್ನು ಪ್ರಶ್ನಿಸುವ ಮೂಲಕ ದುರುದ್ದೇಶಪೂರಿತವಾಗಿ ಮತ್ತು ಸ್ಪಷ್ಟವಾಗಿ ಪೂರ್ವಾಗ್ರಹ ಪೀಡಿತ ಪಕ್ಷಪಾತವನ್ನು ಪ್ರದರ್ಶಿಸಿದರು, ಆದ್ದರಿಂದ ಹಾಜರಿದ್ದ 11 ಸದಸ್ಯರಲ್ಲಿ 5 ಸದಸ್ಯರು ಹೊರನಡೆವ ಮೂಲಕ ನಾಚಿಕೆಗೇಡಿನ ನಡವಳಿಕೆಯನ್ನು ಪ್ರತಿಭಟಿಸಿ ಕಲಾಪವನ್ನು ಬಹಿಷ್ಕರಿಸಿದರು ಎಂದು ಟಿಎಂಸಿ ಸಂಸದೆ ಹೇಳಿದ್ದಾರೆ.

ಇದನ್ನೂ ಓದಿ:  ಪ್ರಶ್ನೆಗಾಗಿ ನಗದು ಪ್ರಕರಣ: ನೈತಿಕ ಸಮಿತಿ ಮುಂದೆ ಹಾಜರಾದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸಲು ಸಮಿತಿಗೆ ವಹಿಸಲಾಗಿದೆ. ಮೊಯಿತ್ರಾ ಸಹಕರಿಸುವ ಬದಲು ವಿರೋಧ ಪಕ್ಷದ ಸದಸ್ಯರೊಂದಿಗೆ ಕೋಪಗೊಂಡರು. ಅವರು “ಆಕ್ಷೇಪಾರ್ಹ ಪದಗಳನ್ನು” ಬಳಸಿದರು ಎಂದು ಸೋಂಕರ್ ಹೇಳಿದ್ದಾರೆ.

ಮೊಯಿತ್ರಾ ಅವರು ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಆದೇಶದ ಮೇರೆಗೆ ತಮ್ಮ ಸಂಸದೀಯ ಖಾತೆಯ ಮೂಲಕ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಆರೋಪಿಸಲಾಗಿದೆ. ಆಕೆ ತನ್ನ ಲಾಗಿನ್ ರುಜುವಾತುಗಳನ್ನು ದುಬೈ ಮೂಲದ ಉದ್ಯಮಿಯೊಂದಿಗೆ ಹಂಚಿಕೊಂಡಿದ್ದಾಳೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ದೂರು ದಾಖಲಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:33 pm, Thu, 2 November 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​