Mahua Moitra: ಸದನದಲ್ಲಿ ಬೆಲೆಯೇರಿಕೆ ಚರ್ಚೆ ವೇಳೆ ತನ್ನ 1.5 ಲಕ್ಷ ರೂ. ಮೌಲ್ಯದ ಬ್ಯಾಗ್ ಬಚ್ಚಿಟ್ಟ ಸಂಸದೆ; ವಿಡಿಯೋ ವೈರಲ್

Viral Video: ಸದನದಲ್ಲಿ ಬೆಲೆ ಏರಿಕೆ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿರುವಾಗ ಟಿಎಂಸಿ ಮಹುವಾ ಮೊಯಿತ್ರಾ ತನ್ನ 1.6 ಲಕ್ಷ ರೂ. ಮೌಲ್ಯದ ಲೂಯಿಸ್ ವಿಟಾನ್ ಬ್ಯಾಗ್ ಅನ್ನು ಮೇಜಿನ ಕೆಳಗೆ ಇಡುತ್ತಿರುವ ವಿಡಿಯೋ ವೈರಲ್ ಆಗಿದೆ.

Mahua Moitra: ಸದನದಲ್ಲಿ ಬೆಲೆಯೇರಿಕೆ ಚರ್ಚೆ ವೇಳೆ ತನ್ನ 1.5 ಲಕ್ಷ ರೂ. ಮೌಲ್ಯದ ಬ್ಯಾಗ್ ಬಚ್ಚಿಟ್ಟ ಸಂಸದೆ; ವಿಡಿಯೋ ವೈರಲ್
ಮಹುವಾ ಮೊಯಿತ್ರಾImage Credit source: Zee News
Follow us
| Updated By: ಸುಷ್ಮಾ ಚಕ್ರೆ

Updated on:Aug 02, 2022 | 4:12 PM

ನವದೆಹಲಿ: ಲೋಕಸಭೆ ಅಧಿವೇಶನದಲ್ಲಿ ಬೆಲೆ ಏರಿಕೆ ಕುರಿತು ನಡೆಯುತ್ತಿರುವ ಚರ್ಚೆಯ ವೇಳೆ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ತಮ್ಮ ದುಬಾರಿ ಬ್ಯಾಗ್ ಅನ್ನು ಬಚ್ಚಿಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಸದನದಲ್ಲಿ ಬೆಲೆ ಏರಿಕೆ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿರುವಾಗ ಟಿಎಂಸಿ ಮಹುವಾ ಮೊಯಿತ್ರಾ ತನ್ನ 1.6 ಲಕ್ಷ ರೂ. ಮೌಲ್ಯದ ಲೂಯಿಸ್ ವಿಟಾನ್ (Louis Vuitton) ಬ್ಯಾಗ್ ಅನ್ನು ಮೇಜಿನ ಕೆಳಗೆ ಇಡುತ್ತಿರುವ ವಿಡಿಯೋ ವೈರಲ್ ಆಗಿದೆ. ಬೆಲೆ ಏರಿಕೆಯನ್ನು ಟೀಕಿಸುವಾಗ ತನ್ನ ದುಬಾರಿ ಬ್ಯಾಗ್ ಕಾಣಬಾರದು ಎಂದು ಆಕೆ ಈ ರೀತಿ ಮಾಡಿದ್ದಾರೆ ಎಂದು ಚರ್ಚೆಯಾಗುತ್ತಿದೆ.

ತೃಣಮೂಲ ಕಾಂಗ್ರೆಸ್‌ನ ಕಾಕೋಲಿ ಘೋಷ್ ದಸ್ತಿದಾರ್ ಲೋಕಸಭೆಯಲ್ಲಿ ಬೆಲೆಯೇರಿಕೆ ವಿರೋಧಿಸಿ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ವೇಳೆ ಪಕ್ಕದಲ್ಲಿ ಕುಳಿತಿದ್ದ ಮಹುವಾ ಮೊಯಿತ್ರಾ ಬೇಗನೆ ತನ್ನ ಪಕ್ಕದಲ್ಲಿದ್ದ ಲೂಯಿ ವಿಟಾನ್ ಬ್ಯಾಗ್ ಅನ್ನು ಮೇಜಿನ ಕೆಳಗೆ ಇಟ್ಟಿದ್ದಾರೆ.

ಈ ವಿಡಿಯೋವನ್ನು ಅಜಿತ್ ದತ್ತಾ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. “ಬೆಲೆಯೇರಿಕೆ” ವಿಷಯವು ಚರ್ಚೆಯಾಗುತ್ತಿದ್ದಂತೆ ಇವರ ಲೂಯಿ ವಿಟಾನ್ ಬ್ಯಾಗ್ ತಕ್ಷಣ ಮೇಜಿನಡಿ ತೂರಿಕೊಂಡಿದೆ ಎಂದು ಅವರು ಕ್ಯಾಪ್ಷನ್ ನೀಡಿದ್ದಾರೆ.

ಸೋಮವಾರ ಬೆಲೆ ಏರಿಕೆ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ವೇಳೆ ಕಕೋಲಿ ಘೋಷ್ ದಸ್ತಿದಾರ್, ನಾವು ಹಸಿ ತರಕಾರಿಗಳನ್ನು ತಿನ್ನಬೇಕೆಂದು ಸರ್ಕಾರ ಬಯಸುತ್ತಿದೆಯೇ? ಎಂದು ಕೇಳಿದ ಸಂಸದೆ ಹಸಿ ಬದನೆಕಾಯಿ ಕಚ್ಚುವ ಮೂಲಕ ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ಕಳೆದ ಕೆಲವು ತಿಂಗಳಲ್ಲಿ ಎಲ್ ಪಿ ಜಿ ಸಿಲಿಂಡರ್ ಬೆಲೆ ನಾಲ್ಕು ಬಾರಿ ಏರಿಕೆ ಮಾಡಲಾಗಿದೆ. ಸಿಲಿಂಡರ್ ಬೆಲೆ 600ರಿಂದ 1,100ಕ್ಕೇರಿದೆ. ಸಿಲಿಂಡರ್ ದರವನ್ನು ಇಳಿಕೆ ಮಾಡಲೇ ಬೇಕು ಎಂದು ಸಂಸದೆ ಒತ್ತಾಯಿಸಿದ್ದಾರೆ.

Published On - 3:25 pm, Tue, 2 August 22

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ