AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahua Moitra: ಸದನದಲ್ಲಿ ಬೆಲೆಯೇರಿಕೆ ಚರ್ಚೆ ವೇಳೆ ತನ್ನ 1.5 ಲಕ್ಷ ರೂ. ಮೌಲ್ಯದ ಬ್ಯಾಗ್ ಬಚ್ಚಿಟ್ಟ ಸಂಸದೆ; ವಿಡಿಯೋ ವೈರಲ್

Viral Video: ಸದನದಲ್ಲಿ ಬೆಲೆ ಏರಿಕೆ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿರುವಾಗ ಟಿಎಂಸಿ ಮಹುವಾ ಮೊಯಿತ್ರಾ ತನ್ನ 1.6 ಲಕ್ಷ ರೂ. ಮೌಲ್ಯದ ಲೂಯಿಸ್ ವಿಟಾನ್ ಬ್ಯಾಗ್ ಅನ್ನು ಮೇಜಿನ ಕೆಳಗೆ ಇಡುತ್ತಿರುವ ವಿಡಿಯೋ ವೈರಲ್ ಆಗಿದೆ.

Mahua Moitra: ಸದನದಲ್ಲಿ ಬೆಲೆಯೇರಿಕೆ ಚರ್ಚೆ ವೇಳೆ ತನ್ನ 1.5 ಲಕ್ಷ ರೂ. ಮೌಲ್ಯದ ಬ್ಯಾಗ್ ಬಚ್ಚಿಟ್ಟ ಸಂಸದೆ; ವಿಡಿಯೋ ವೈರಲ್
ಮಹುವಾ ಮೊಯಿತ್ರಾImage Credit source: Zee News
TV9 Web
| Updated By: ಸುಷ್ಮಾ ಚಕ್ರೆ|

Updated on:Aug 02, 2022 | 4:12 PM

Share

ನವದೆಹಲಿ: ಲೋಕಸಭೆ ಅಧಿವೇಶನದಲ್ಲಿ ಬೆಲೆ ಏರಿಕೆ ಕುರಿತು ನಡೆಯುತ್ತಿರುವ ಚರ್ಚೆಯ ವೇಳೆ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ತಮ್ಮ ದುಬಾರಿ ಬ್ಯಾಗ್ ಅನ್ನು ಬಚ್ಚಿಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಸದನದಲ್ಲಿ ಬೆಲೆ ಏರಿಕೆ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿರುವಾಗ ಟಿಎಂಸಿ ಮಹುವಾ ಮೊಯಿತ್ರಾ ತನ್ನ 1.6 ಲಕ್ಷ ರೂ. ಮೌಲ್ಯದ ಲೂಯಿಸ್ ವಿಟಾನ್ (Louis Vuitton) ಬ್ಯಾಗ್ ಅನ್ನು ಮೇಜಿನ ಕೆಳಗೆ ಇಡುತ್ತಿರುವ ವಿಡಿಯೋ ವೈರಲ್ ಆಗಿದೆ. ಬೆಲೆ ಏರಿಕೆಯನ್ನು ಟೀಕಿಸುವಾಗ ತನ್ನ ದುಬಾರಿ ಬ್ಯಾಗ್ ಕಾಣಬಾರದು ಎಂದು ಆಕೆ ಈ ರೀತಿ ಮಾಡಿದ್ದಾರೆ ಎಂದು ಚರ್ಚೆಯಾಗುತ್ತಿದೆ.

ತೃಣಮೂಲ ಕಾಂಗ್ರೆಸ್‌ನ ಕಾಕೋಲಿ ಘೋಷ್ ದಸ್ತಿದಾರ್ ಲೋಕಸಭೆಯಲ್ಲಿ ಬೆಲೆಯೇರಿಕೆ ವಿರೋಧಿಸಿ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ವೇಳೆ ಪಕ್ಕದಲ್ಲಿ ಕುಳಿತಿದ್ದ ಮಹುವಾ ಮೊಯಿತ್ರಾ ಬೇಗನೆ ತನ್ನ ಪಕ್ಕದಲ್ಲಿದ್ದ ಲೂಯಿ ವಿಟಾನ್ ಬ್ಯಾಗ್ ಅನ್ನು ಮೇಜಿನ ಕೆಳಗೆ ಇಟ್ಟಿದ್ದಾರೆ.

ಈ ವಿಡಿಯೋವನ್ನು ಅಜಿತ್ ದತ್ತಾ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. “ಬೆಲೆಯೇರಿಕೆ” ವಿಷಯವು ಚರ್ಚೆಯಾಗುತ್ತಿದ್ದಂತೆ ಇವರ ಲೂಯಿ ವಿಟಾನ್ ಬ್ಯಾಗ್ ತಕ್ಷಣ ಮೇಜಿನಡಿ ತೂರಿಕೊಂಡಿದೆ ಎಂದು ಅವರು ಕ್ಯಾಪ್ಷನ್ ನೀಡಿದ್ದಾರೆ.

ಸೋಮವಾರ ಬೆಲೆ ಏರಿಕೆ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ವೇಳೆ ಕಕೋಲಿ ಘೋಷ್ ದಸ್ತಿದಾರ್, ನಾವು ಹಸಿ ತರಕಾರಿಗಳನ್ನು ತಿನ್ನಬೇಕೆಂದು ಸರ್ಕಾರ ಬಯಸುತ್ತಿದೆಯೇ? ಎಂದು ಕೇಳಿದ ಸಂಸದೆ ಹಸಿ ಬದನೆಕಾಯಿ ಕಚ್ಚುವ ಮೂಲಕ ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ಕಳೆದ ಕೆಲವು ತಿಂಗಳಲ್ಲಿ ಎಲ್ ಪಿ ಜಿ ಸಿಲಿಂಡರ್ ಬೆಲೆ ನಾಲ್ಕು ಬಾರಿ ಏರಿಕೆ ಮಾಡಲಾಗಿದೆ. ಸಿಲಿಂಡರ್ ಬೆಲೆ 600ರಿಂದ 1,100ಕ್ಕೇರಿದೆ. ಸಿಲಿಂಡರ್ ದರವನ್ನು ಇಳಿಕೆ ಮಾಡಲೇ ಬೇಕು ಎಂದು ಸಂಸದೆ ಒತ್ತಾಯಿಸಿದ್ದಾರೆ.

Published On - 3:25 pm, Tue, 2 August 22

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..