AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹುವಾ ಮೊಯಿತ್ರಾ ರಾಜಕೀಯದ ಬಲಿಪಶು, ಆಕೆ ಹೋರಾಡಬಲ್ಲಳು: ಅಭಿಷೇಕ್ ಬ್ಯಾನರ್ಜಿ

Mahua Moitra:ರಾಜಕೀಯ ಪ್ರತಿಸ್ಪರ್ಧಿಗಳನ್ನು ಗುರಿಯಾಗಿಸಲು ಆಡಳಿತಾರೂಢ ಬಿಜೆಪಿಯು ಕೇಂದ್ರೀಯ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪದೇ ಪದೇ ಆರೋಪಿಸುತ್ತಿರುವ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಈ ವಿಷಯದಲ್ಲಿ ತನ್ನ ಹೇಳಿಕೆಗಳಲ್ಲಿ ಪ್ರಜ್ಞಾಪೂರ್ವಕವಾಗಿ ಮೌನವಾಗಿದ್ದಾರೆ.

ಮಹುವಾ ಮೊಯಿತ್ರಾ ರಾಜಕೀಯದ ಬಲಿಪಶು, ಆಕೆ ಹೋರಾಡಬಲ್ಲಳು: ಅಭಿಷೇಕ್ ಬ್ಯಾನರ್ಜಿ
ಮಹುವಾ ಮೊಯಿತ್ರಾ
TV9 Web
| Edited By: |

Updated on:Nov 09, 2023 | 5:04 PM

Share

ಕೋಲ್ಕತ್ತಾ ನವೆಂಬರ್ 09: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಪ್ರಮುಖ ಉದ್ಯಮಿಯೊಬ್ಬರಿಂದ ಹಣ ಪಡೆದ ಆರೋಪ ಹೊಂದಿರುವ ಪಕ್ಷದ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರ ಬೆಂಬಲಕ್ಕೆ ತೃಣಮೂಲ ಕಾಂಗ್ರೆಸ್ (Trinamool Congress) ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ (Abhishek Banerjee) ನಿಂತಿದ್ದಾರೆ. ಕೃಷ್ಣನಗರ ಸಂಸದೆಯನ್ನು “ರಾಜಕೀಯ ಬಲಿಪಶು” ಎಂದು ಕರೆದಿರುವ ಬ್ಯಾನರ್ಜಿ, ಆಕೆ “ತಮ್ಮದೇ ಆದ ಹೋರಾಟಗಳನ್ನು ಎದುರಿಸಲು ಸಾಕಷ್ಟು ಸಮರ್ಥಳು ಎಂದು ಹೇಳಿದ್ದಾರೆ. ಬಿಜೆಪಿಯು ಮೊಯಿತ್ರಾರನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ ಬ್ಯಾನರ್ಜಿ, “ಕೇಂದ್ರ ಸರ್ಕಾರದ ಕ್ರಮ ಇದು ಎಂದು ನಾನು ಭಾವಿಸುತ್ತೇನೆ ಮತ್ತು ನೈತಿಕ ಸಮಿತಿಯ ವರದಿಯನ್ನು ನಾನು ಓದಿದ್ದೇನೆ, ಅವರು ಆಕೆ  ವಿರುದ್ಧ ತನಿಖೆಯಾಗಬೇಕು ಎಂದು ಹೇಳಿದ್ದಾರೆ. ಮಹುವಾ ವಿರುದ್ಧ ನಿಮ್ಮ ಬಳಿ ಏನೂ ಇಲ್ಲದಿದ್ದರೆ  ಇದು ತನಿಖೆಯ ವಿಷಯವಾಗಿದೆ, ಉಚ್ಚಾಟನೆಯನ್ನು ಏಕೆ ಶಿಫಾರಸು ಮಾಡಲಾಗಿದೆ? ಮಹುವಾ ತನ್ನ ಯುದ್ಧಗಳನ್ನು ತಾನಾಗಿಯೇ ಹೋರಾಡಲು ಸಾಕಷ್ಟು ಸಮರ್ಥಳು ಎಂದು ನಾನು ಭಾವಿಸುತ್ತೇನೆ. ಅವರನ್ನು ನಾಲ್ಕು ವರ್ಷಗಳಿಂದ ಬಲಿಪಶು ಮಾಡುತ್ತಿದ್ದಾರೆ, ಇದು ಅವರ ಚಾಳಿ ಎಂದು ಹೇಳಿದ್ದಾರೆ.

ಮಹುವಾ ಮೊಯಿತ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಂತದಲ್ಲಿ ತೃಣಮೂಲದಲ್ಲಿ ನಂಬರ್ 2 ಎಂದು ಪರಿಗಣಿಸಲಾದ ಬ್ಯಾನರ್ಜಿಯವರ ಮೊದಲ ಪ್ರತಿಕ್ರಿಯೆಯಾಗಿದೆ ಇದು. ಮೊಯಿತ್ರಾ ವಿರುದ್ಧದ ಆರೋಪಗಳ ಬಗ್ಗೆ ಪ್ರತಿಕ್ರಿಯಿಸುವಲ್ಲಿ ತೃಣಮೂಲ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಮಹತ್ವದ್ದಾಗಿವೆ.

ರಾಜಕೀಯ ಪ್ರತಿಸ್ಪರ್ಧಿಗಳನ್ನು ಗುರಿಯಾಗಿಸಲು ಆಡಳಿತಾರೂಢ ಬಿಜೆಪಿಯು ಕೇಂದ್ರೀಯ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪದೇ ಪದೇ ಆರೋಪಿಸುತ್ತಿರುವ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಈ ವಿಷಯದಲ್ಲಿ ತನ್ನ ಹೇಳಿಕೆಗಳಲ್ಲಿ ಪ್ರಜ್ಞಾಪೂರ್ವಕವಾಗಿ ಮೌನವಾಗಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಹಲವಾರು ಬಾರಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ,ಮೊಯಿತ್ರಾ ವಿರುದ್ಧದ ಆರೋಪಗಳ ಬಗ್ಗೆ ಎಲ್ಲೂ ಮಾತನಾಡಿಲ್ಲ. ಇದಕ್ಕೂ ಮೊದಲು, ಪಕ್ಷದ ವಕ್ತಾರ ಕುನಾಲ್ ಘೋಷ್ ಮಾಧ್ಯಮಗಳಿಗೆ “ಈ ವಿಷಯದ ಬಗ್ಗೆ ಪಕ್ಷವು ಏನೂ ಹೇಳುವುದಿಲ್ಲ” ಎಂದು ಹೇಳಿದರು. “ಈ ವಿವಾದಕ್ಕೀಡಾಗಿರುವ ವ್ಯಕ್ತಿಯೇ ಇದಕ್ಕೆ ಪ್ರತಿಕ್ರಿಯಿಸಲು ಸೂಕ್ತ ಎಂದು ನಾವು ಭಾವಿಸುತ್ತೇವೆ” ಎಂದು ಅವರು ಹೇಳಿದರು.

ರಾಜ್ಯಸಭೆಯಲ್ಲಿ ತೃಣಮೂಲ ಪಕ್ಷದ ನಾಯಕ ಡೆರೆಕ್ ಒ’ಬ್ರೇನ್ ಕಳೆದ ತಿಂಗಳು, ಪ್ರಕರಣದ ತನಿಖೆ ನಡೆಸುತ್ತಿರುವ ಸಂಸದೀಯ ಸಮಿತಿಯು ತನ್ನ ತನಿಖೆಯನ್ನು ಪೂರ್ಣಗೊಳಿಸಿದ ನಂತರ ತೃಣಮೂಲ ಕಾಂಗ್ರೆಸ್ ನಾಯಕತ್ವವು ಈ ವಿಷಯದಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಇದನ್ನೂ ಓದಿ:  ಪ್ರಶ್ನೆಗಾಗಿ ನಗದು ಪ್ರಕರಣ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆಗೆ ನೈತಿಕ ಸಮಿತಿ ಶಿಫಾರಸು

ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಕ್ಕಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದಿರುವ ಆರೋಪ ಮೊಯಿತ್ರಾ ಮೇಲಿದೆ.

ಮೊಯಿತ್ರಾ ವಿರುದ್ಧ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ನೀಡಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲ್ ತೃಣಮೂಲ ಸಂಸದರ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ಕೇಂದ್ರ ತನಿಖಾ ದಳದಿಂದ ತನಿಖೆಗೆ ಆದೇಶಿಸಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Thu, 9 November 23

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ