AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Ragging Case: ಅಸ್ಸಾಂನ ದಿಬ್ರುಗಢ ವಿಶ್ವವಿದ್ಯಾಲಯದಲ್ಲಿ ರ‍್ಯಾಗಿಂಗ್; ಪ್ರಮುಖ ಆರೋಪಿ ಬಂಧನ

ನವೆಂಬರ್ 27ರಿಂದ ನಾಪತ್ತೆಯಾಗಿದ್ದ ರಾಹುಲ್ ಚೆಟ್ರಿ ಸೋಮವಾರ ಬೆಳಿಗ್ಗೆ ಅಸ್ಸಾಂ ಪೊಲೀಸರ ಮುಂದೆ ಶರಣಾಗಿದ್ದ. ಅದಾದ ನಂತರ ಆತನನ್ನು ಪೊಲೀಸರು ಬಂಧಿಸಿದ್ದಾರೆ.

Assam Ragging Case: ಅಸ್ಸಾಂನ ದಿಬ್ರುಗಢ ವಿಶ್ವವಿದ್ಯಾಲಯದಲ್ಲಿ ರ‍್ಯಾಗಿಂಗ್; ಪ್ರಮುಖ ಆರೋಪಿ ಬಂಧನ
ಅಸ್ಸಾಂನ ದಿಬ್ರುಗಢ ವಿಶ್ವವಿದ್ಯಾಲಯ
TV9 Web
| Edited By: |

Updated on: Dec 06, 2022 | 8:31 AM

Share

ದಿಬ್ರುಗಢ: ಅಸ್ಸಾಂನ ದಿಬ್ರುಗಢ ವಿಶ್ವವಿದ್ಯಾಲಯದಲ್ಲಿ (Dibrugarh University) ನಡೆದ ರ‍್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರಾಹುಲ್ ಚೆಟ್ರಿಯನ್ನು (Rahul Chetry) ಪೊಲೀಸರ ವಶಕ್ಕೆ ಪಡೆಯಲಾಗಿದೆ. ದಿಬ್ರುಗಢ ವಿಶ್ವವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳ ವಿರುದ್ಧ ರ‍್ಯಾಗಿಂಗ್​ (Ragging) ಆರೋಪ ಕೇಳಿಬಂದಿದೆ. ವಿದ್ಯಾರ್ಥಿ ಆನಂದ್ ಶರ್ಮಾಗೆ (Anand Sharma) ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡಿದ್ದು, ರ‍್ಯಾಗಿಂಗ್ ವೇಳೆ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಯೂನಿವರ್ಸಿಟಿಯ ಹಾಸ್ಟೆಲ್​ನ 2ನೇ ಮಹಡಿಯಿಂದ ಬಿದ್ದು ಗಂಭೀರ ಗಾಯಗಳಾಗಿತ್ತು. ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿ ಆನಂದ್ ಶರ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ನ. 27ರಂದು ದಿಬ್ರುಗಢ ವಿವಿ ಹಾಸ್ಟೆಲ್​ನಲ್ಲಿ ಈ ಘಟನೆ ನಡೆದಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ರಾಹುಲ್ ಚೆಟ್ರಿಯನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ನವೆಂಬರ್ 27ರಿಂದ ನಾಪತ್ತೆಯಾಗಿದ್ದ ರಾಹುಲ್ ಚೆಟ್ರಿ ಸೋಮವಾರ ಬೆಳಿಗ್ಗೆ ಅಸ್ಸಾಂ ಪೊಲೀಸರ ಮುಂದೆ ಶರಣಾಗಿದ್ದ. ಅದಾದ ನಂತರ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Student Ragging: ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್  ತಡೆಯಲಾಗದೇ ಹಾಸ್ಟೆಲ್‌ನ ಎರಡನೇ ಮಹಡಿಯಿಂದ ಜಿಗಿದ ಜೂನಿಯರ್ ವಿದ್ಯಾರ್ಥಿ

“ದಿಬ್ರುಗಢ ವಿಶ್ವವಿದ್ಯಾಲಯದ ರ‍್ಯಾಗಿಂಗ್ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 7 ಜನರನ್ನು ಬಂಧಿಸಿದ್ದಾರೆ” ಎಂದು ದಿಬ್ರುಗಢ ಜಿಲ್ಲೆಯ ಎಸ್ಪಿ ತಿಳಿಸಿದ್ದಾರೆ.ಈ ಹಿಂದೆ, ದಿಬ್ರುಗಢ ವಿಶ್ವವಿದ್ಯಾಲಯದ ಪ್ರಾಧಿಕಾರವು ವಿಶ್ವವಿದ್ಯಾಲಯದ ಹಾಸ್ಟೆಲ್‌ನ ಮೂವರು ವಾರ್ಡನ್‌ಗಳನ್ನು ಅಮಾನತುಗೊಳಿಸಿತ್ತು. ಸರ್ಕಾರಿ ಸ್ವಾಮ್ಯದ ದಿಬ್ರುಗಢ ವಿಶ್ವವಿದ್ಯಾಲಯದ ಎಂಕಾಂ ವಿದ್ಯಾರ್ಥಿ ಆನಂದ್ ಶರ್ಮಾ ನವೆಂಬರ್ 27ರಂದು ರ‍್ಯಾಗಿಂಗ್​​ನ ಕಿರುಕುಳದಿಂದ ತಪ್ಪಿಸಿಕೊಳ್ಳಲು ತಮ್ಮ ಪಿಎನ್‌ಜಿಬಿ ಹಾಸ್ಟೆಲ್ ಕಟ್ಟಡದ ಎರಡನೇ ಮಹಡಿಯಿಂದ ಜಿಗಿದಿದ್ದ. ತಕ್ಷಣ ಶರ್ಮಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಈ ಘಟನೆಯಲ್ಲಿ ಭಾಗಿಯಾಗಿರುವ ಐವರ ವಿರುದ್ಧ ಆನಂದ್ ಶರ್ಮಾ ಅವರ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ದಿಬ್ರುಗಢ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್