AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Ragging Case: ಅಸ್ಸಾಂನ ದಿಬ್ರುಗಢ ವಿಶ್ವವಿದ್ಯಾಲಯದಲ್ಲಿ ರ‍್ಯಾಗಿಂಗ್; ಪ್ರಮುಖ ಆರೋಪಿ ಬಂಧನ

ನವೆಂಬರ್ 27ರಿಂದ ನಾಪತ್ತೆಯಾಗಿದ್ದ ರಾಹುಲ್ ಚೆಟ್ರಿ ಸೋಮವಾರ ಬೆಳಿಗ್ಗೆ ಅಸ್ಸಾಂ ಪೊಲೀಸರ ಮುಂದೆ ಶರಣಾಗಿದ್ದ. ಅದಾದ ನಂತರ ಆತನನ್ನು ಪೊಲೀಸರು ಬಂಧಿಸಿದ್ದಾರೆ.

Assam Ragging Case: ಅಸ್ಸಾಂನ ದಿಬ್ರುಗಢ ವಿಶ್ವವಿದ್ಯಾಲಯದಲ್ಲಿ ರ‍್ಯಾಗಿಂಗ್; ಪ್ರಮುಖ ಆರೋಪಿ ಬಂಧನ
ಅಸ್ಸಾಂನ ದಿಬ್ರುಗಢ ವಿಶ್ವವಿದ್ಯಾಲಯ
TV9 Web
| Edited By: |

Updated on: Dec 06, 2022 | 8:31 AM

Share

ದಿಬ್ರುಗಢ: ಅಸ್ಸಾಂನ ದಿಬ್ರುಗಢ ವಿಶ್ವವಿದ್ಯಾಲಯದಲ್ಲಿ (Dibrugarh University) ನಡೆದ ರ‍್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರಾಹುಲ್ ಚೆಟ್ರಿಯನ್ನು (Rahul Chetry) ಪೊಲೀಸರ ವಶಕ್ಕೆ ಪಡೆಯಲಾಗಿದೆ. ದಿಬ್ರುಗಢ ವಿಶ್ವವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳ ವಿರುದ್ಧ ರ‍್ಯಾಗಿಂಗ್​ (Ragging) ಆರೋಪ ಕೇಳಿಬಂದಿದೆ. ವಿದ್ಯಾರ್ಥಿ ಆನಂದ್ ಶರ್ಮಾಗೆ (Anand Sharma) ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡಿದ್ದು, ರ‍್ಯಾಗಿಂಗ್ ವೇಳೆ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಯೂನಿವರ್ಸಿಟಿಯ ಹಾಸ್ಟೆಲ್​ನ 2ನೇ ಮಹಡಿಯಿಂದ ಬಿದ್ದು ಗಂಭೀರ ಗಾಯಗಳಾಗಿತ್ತು. ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿ ಆನಂದ್ ಶರ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ನ. 27ರಂದು ದಿಬ್ರುಗಢ ವಿವಿ ಹಾಸ್ಟೆಲ್​ನಲ್ಲಿ ಈ ಘಟನೆ ನಡೆದಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ರಾಹುಲ್ ಚೆಟ್ರಿಯನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ನವೆಂಬರ್ 27ರಿಂದ ನಾಪತ್ತೆಯಾಗಿದ್ದ ರಾಹುಲ್ ಚೆಟ್ರಿ ಸೋಮವಾರ ಬೆಳಿಗ್ಗೆ ಅಸ್ಸಾಂ ಪೊಲೀಸರ ಮುಂದೆ ಶರಣಾಗಿದ್ದ. ಅದಾದ ನಂತರ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Student Ragging: ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್  ತಡೆಯಲಾಗದೇ ಹಾಸ್ಟೆಲ್‌ನ ಎರಡನೇ ಮಹಡಿಯಿಂದ ಜಿಗಿದ ಜೂನಿಯರ್ ವಿದ್ಯಾರ್ಥಿ

“ದಿಬ್ರುಗಢ ವಿಶ್ವವಿದ್ಯಾಲಯದ ರ‍್ಯಾಗಿಂಗ್ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 7 ಜನರನ್ನು ಬಂಧಿಸಿದ್ದಾರೆ” ಎಂದು ದಿಬ್ರುಗಢ ಜಿಲ್ಲೆಯ ಎಸ್ಪಿ ತಿಳಿಸಿದ್ದಾರೆ.ಈ ಹಿಂದೆ, ದಿಬ್ರುಗಢ ವಿಶ್ವವಿದ್ಯಾಲಯದ ಪ್ರಾಧಿಕಾರವು ವಿಶ್ವವಿದ್ಯಾಲಯದ ಹಾಸ್ಟೆಲ್‌ನ ಮೂವರು ವಾರ್ಡನ್‌ಗಳನ್ನು ಅಮಾನತುಗೊಳಿಸಿತ್ತು. ಸರ್ಕಾರಿ ಸ್ವಾಮ್ಯದ ದಿಬ್ರುಗಢ ವಿಶ್ವವಿದ್ಯಾಲಯದ ಎಂಕಾಂ ವಿದ್ಯಾರ್ಥಿ ಆನಂದ್ ಶರ್ಮಾ ನವೆಂಬರ್ 27ರಂದು ರ‍್ಯಾಗಿಂಗ್​​ನ ಕಿರುಕುಳದಿಂದ ತಪ್ಪಿಸಿಕೊಳ್ಳಲು ತಮ್ಮ ಪಿಎನ್‌ಜಿಬಿ ಹಾಸ್ಟೆಲ್ ಕಟ್ಟಡದ ಎರಡನೇ ಮಹಡಿಯಿಂದ ಜಿಗಿದಿದ್ದ. ತಕ್ಷಣ ಶರ್ಮಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಈ ಘಟನೆಯಲ್ಲಿ ಭಾಗಿಯಾಗಿರುವ ಐವರ ವಿರುದ್ಧ ಆನಂದ್ ಶರ್ಮಾ ಅವರ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ದಿಬ್ರುಗಢ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!