AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ವಿದ್ಯಾರ್ಥಿ ನಾಯಕನ ಹತ್ಯೆಯ ಪ್ರಮುಖ ಆರೋಪಿ ಅಪಘಾತದಲ್ಲಿ ಸಾವು; ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸ್​ ಕಾರು ಡಿಕ್ಕಿ

ಅನಿಮೇಶ್​ ಭೂಯಾನ್​ ಹತ್ಯೆ ಕೇಸ್​​ನಲ್ಲಿ ಪ್ರಮುಖ ಆರೋಪಿಯಾಗಿದ್ದ ನೀರಜ್​ ದಾಸ್​ನನ್ನು ಪೊಲೀಸರು ಹಿಡಿದು ಕಾರಿನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದರು. ಆದರೆ ತಪ್ಪಿಸಿಕೊಳ್ಳಲು ಯತ್ನಿಸಿದ.

ಅಸ್ಸಾಂ ವಿದ್ಯಾರ್ಥಿ ನಾಯಕನ ಹತ್ಯೆಯ ಪ್ರಮುಖ ಆರೋಪಿ ಅಪಘಾತದಲ್ಲಿ ಸಾವು; ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸ್​ ಕಾರು ಡಿಕ್ಕಿ
ನೀರಜ್​ ದಾಸ್​ (ಫೋಟೋ ಕೃಪೆ ಇಂಡಿಯಾ ಟುಡೆ)
TV9 Web
| Edited By: |

Updated on: Dec 01, 2021 | 8:34 AM

Share

 ಅಸ್ಸಾಂನಲ್ಲಿ ಸೋಮವಾರ ಗುಂಪು ಹತ್ಯೆಯೊಂದು ನಡೆದಿತ್ತು. ಆಲ್​ ಅಸ್ಸಾಂ ವಿದ್ಯಾರ್ಥಿ ಒಕ್ಕೂಟ (AASU)ದ ನಾಯಕ ಅನಿಮೇಶ್​ ಭೂಯಾನ್​ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದ.  ಹಾಗೇ ಇನ್ನಿಬ್ಬರು ಗಾಯಗೊಂಡಿದ್ದರು. ಆದರೆ ಈ ಪ್ರಕರಣದ ಪ್ರಮುಖ ಆರೋಪಿ ಈಗ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಅದೂ ಕೂಡ ಪೊಲೀಸ್ ಕಾರು ಢಿಕ್ಕಿ ಹೊಡೆದು ಸತ್ತಿದ್ದಾನೆ. 

ಅನಿಮೇಶ್​ ಭೂಯಾನ್​ ಹತ್ಯೆ ಕೇಸ್​​ನಲ್ಲಿ ಪ್ರಮುಖ ಆರೋಪಿಯಾಗಿದ್ದ ನೀರಜ್​ ದಾಸ್​ನನ್ನು ಮಂಗಳವಾರ ರಾತ್ರಿ ಪೊಲೀಸರು ಹಿಡಿದು ಕಾರಿನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದರು. ಆದರೆ ಈತ ತಪ್ಪಿಸಿಕೊಳ್ಳುವ ಸಲುವಾಗಿ ಕಾರಿನಿಂದ ಹಾರಿ, ಓಡಲು ಪ್ರಯತ್ನಿಸಿದ. ಆದರೆ ಆತ ಹಾರಿದ ಕೂಡಲೇ ಹಿಂದೆ ಇದ್ದ ಇನ್ನೊಂದು ಪೊಲೀಸ್​ ಕಾರು ಬಂದು ಡಿಕ್ಕಿ ಹೊಡೆದು, ಆತ ಗಂಭೀರವಾಗಿ ಗಾಯಗೊಂಡಿದ್ದ. ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನವಾಗಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನು ಸೋಮವಾರ ಅಸ್ಸಾಂನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಹಿರಿಯ ನಾಗರಿಕರೊಬ್ಬರು ಅಪಘಾತದಲ್ಲಿ ಗಾಯಗೊಂಡಿದ್ದರು. ಅವರನ್ನು ರಕ್ಷಿಸಲು ಮುಂದಾದ ಅನಿಮೇಶ್​ ಭೂಯಾನ್​ ಮತ್ತು ಇನ್ನಿಬ್ಬರ ಮೇಲೆ ಗುಂಪೊಂದು ತೀವ್ರ ಹಲ್ಲೆ ನಡೆಸಿತ್ತು. ಅದರಲ್ಲಿ ಭೂಯಾನ್​ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಅದರಲ್ಲೊಬ್ಬ ಪತ್ರಕರ್ತನೂ ಇದ್ದಾರೆ.  ಗುಂಪು ಹಲ್ಲೆಯ ವಿಡಿಯೋ ಕೂಡ ಸಿಕ್ಕಾಪಟೆ ವೈರಲ್ ಆಗಿತ್ತು.

ಇದನ್ನೂ ಓದಿ:  Video: ಅಪಘಾತದಲ್ಲಿ ಗಾಯಗೊಂಡ ಹಿರಿಯ ನಾಗರಿಕನನ್ನು ರಕ್ಷಿಸಲು ಹೋದವರ ಮೇಲೆ ಗುಂಪು ಹಲ್ಲೆ; ಪ್ರಾಣವನ್ನೇ ಕಳೆದುಕೊಂಡ ಯುವಕ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ