AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakhimpur Kheri Violence: ಲಖಿಂಪುರ ಖೇರಿ ಹಿಂಸಾಚಾರ ಕೇಸ್​​ನಲ್ಲಿ ಬಂಧಿತರಾದ ಆಶೀಶ್​ ಮಿಶ್ರಾಗೆ ಅನಾರೋಗ್ಯ; ಸರ್ಕಾರಿ ಆಸ್ಪತ್ರೆಗೆ ದಾಖಲು

ಅಕ್ಟೋಬರ್​ 3ರಂದು ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ವಾಹನ ಹರಿದು, ಹಿಂಸಾಚಾರ ಉಂಟಾಗಿತ್ತು. ಪ್ರತಿಭಟನಾ ನಿರತ ರೈತರ ಮೇಲೆ ಹರಿದಿರುವ ವಾಹನದಲ್ಲಿ ಆಶೀಶ್​ ಮಿಶ್ರಾ ಇದ್ದಾರೆ ಎಂಬ ಆರೋಪದಡಿ ಅವರನ್ನು ಬಂಧಿಸಲಾಗಿದೆ.

Lakhimpur Kheri Violence: ಲಖಿಂಪುರ ಖೇರಿ ಹಿಂಸಾಚಾರ ಕೇಸ್​​ನಲ್ಲಿ ಬಂಧಿತರಾದ ಆಶೀಶ್​ ಮಿಶ್ರಾಗೆ ಅನಾರೋಗ್ಯ; ಸರ್ಕಾರಿ ಆಸ್ಪತ್ರೆಗೆ ದಾಖಲು
ಆಶೀಶ್​ ಮಿಶ್ರಾ
TV9 Web
| Edited By: |

Updated on: Oct 24, 2021 | 10:59 AM

Share

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ(Lakhimpur Kheri Violence)ದಲ್ಲಿ ಬಂಧಿತರಾಗಿರುವ ಆಶೀಶ್​ ಮಿಶ್ರಾರಿಗೆ ಅನಾರೋಗ್ಯ ಉಂಟಾಗಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಶೀಶ್​ ಮಿಶ್ರಾ (Ashish Mishra) ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆಂದು ಹೇಳಲಾಗಿದ್ದು, ಅವರ ರಕ್ತದ ಮಾದರಿ ತಪಾಸಣೆಗಾಗಿ ಕಳಿಸಲಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಜೈಲು ಅಧಿಕಾರಿಗಳೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಲಖಿಂಪುರ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಆಶೀಶ್​ ಮಿಶ್ರಾರನ್ನು ಜಿಲ್ಲಾ ಕಾರಾಗೃಹದಲ್ಲಿ ಇಡಲಾಗಿತ್ತು. ಅವರೀಗ ಶಂಕಿತ ಡೆಂಗ್ಯೂದಿಂದ ಬಳಲುತ್ತಿರುವ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೈಲು ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.  

ಆಶೀಶ್ ಮಿಶ್ರಾ ಜ್ವರದ ಬಗ್ಗೆ ಮಾಹಿತಿ ನೀಡಿರುವ ಲಖಿಂಪುರ ಖೇರಿ ಜಿಲ್ಲಾ ಕಾರಾಗೃಹದ ಪೊಲೀಸ್​ ಅಧೀಕ್ಷಕ ಪಿಪಿ ಸಿಂಗ್, ಆಶೀಶ್​ ಮಿಶ್ರಾಗೆ ಜ್ವರ ಇರುವುದು ನಿಜ. ಆದರೆ ಡೆಂಗ್ಯೂ  ಹೌದೋ ಅಲ್ಲವೋ ಗೊತ್ತಾಗುತ್ತಿಲ್ಲ. ಲಕ್ಷಣಗಳು ಡೆಂಗ್ಯೂದಂತೆ ಇವೆ. ರಕ್ತದ ಮಾದರಿಯ ತಪಾಸಣೆ ವರದಿ ಬಂದ ಬಳಿಕವಷ್ಟೇ ನಿಖರವಾಗಿ ಗೊತ್ತಾಗಲಿದೆ ಎಂದಿದ್ದಾರೆ.

ಅಕ್ಟೋಬರ್​ 3ರಂದು ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ವಾಹನ ಹರಿದು, ಹಿಂಸಾಚಾರ ಉಂಟಾಗಿತ್ತು. ಅದರಲ್ಲಿ 8 ಮಂದಿ ಮೃತಪಟ್ಟಿದ್ದಾರೆ. ಪ್ರತಿಭಟನಾ ನಿರತ ರೈತರ ಮೇಲೆ ಹರಿದಿರುವ ವಾಹನದಲ್ಲಿ, ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇದ್ದಾರೆ ಎಂಬ ಆರೋಪದಡಿ ಅವರನ್ನು ಬಂಧಿಸಲಾಗಿದೆ. ವೈರಲ್​ ಆದ ವಿಡಿಯೋದಲ್ಲಿ ಆಶೀಶ್​ ಮಿಶ್ರಾ ವಾಹನದಿಂದ ಇಳಿದು ಓಡುವ ದೃಶ್ಯವೂ ಕಾಣಿಸುತ್ತದೆ ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.  ಇನ್ನು ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಉತ್ತರಪ್ರದೇಶ ಪೊಲೀಸ್​ ಕ್ರೈಂ ಬ್ರ್ಯಾಂಚ್​ ಇದುವರೆಗೆ 13 ಮಂದಿಯನ್ನು ಬಂಧಿಸಿದೆ.  ಈ ಪ್ರಕರಣವನ್ನು ಸುಪ್ರೀಂಕೋರ್ಟ್ ಸುಮೊಟೊ ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಆಶೀಶ್​ ಮಿಶ್ರಾರನ್ನು ಬಂಧಿಸಲು ವಿಳಂಬ ಮಾಡುತ್ತಿರುವ ಬಗ್ಗೆ ಉತ್ತರಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಇದನ್ನೂ ಓದಿ: Shilpa Shetty: ಮಕ್ಕಳು ಹಾಗೂ ತಾಯಿಯೊಂದಿಗೆ ಶಿಲ್ಪಾ ಶೆಟ್ಟಿ ಭರ್ಜರಿ ಸುತ್ತಾಟ; ರಾಜ್ ಕುಂದ್ರಾ ಎಲ್ಲಿ ಎಂದು ಪ್ರಶ್ನಿಸಿದ ಫ್ಯಾನ್ಸ್

ಉಡುಪಿ ಮಠಕ್ಕೆ ಸಿದ್ದರಾಮಯ್ಯ ಭೇಟಿ ನೀಡದಿರುವ ಕಾರಣ ಅವರನ್ನು ಮಠದ ವಿರೋಧಿ ಅನ್ನಲಾಗದು: ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ