AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಶಾರುಖ್ ಖಾನ್ ಬಂಗಲೆ ಮನ್ನತ್ ಸಮೀಪದ ಕಟ್ಟಡದಲ್ಲಿ ಬೆಂಕಿ; ಯಾವುದೇ ಅಪಾಯ ಇಲ್ಲ

ಬಾಂದ್ರಾದ (ಪಶ್ಚಿಮ) ಬ್ಯಾಂಡ್‌ಸ್ಟ್ಯಾಂಡ್ ರಸ್ತೆಯಲ್ಲಿರುವ 21 ಅಂತಸ್ತಿನ ಜೀವೇಶ್ ಕಟ್ಟಡದ 14 ನೇ ಮಹಡಿಯಲ್ಲಿ ರಾತ್ರಿ 7.46 ರ ಸುಮಾರಿಗೆ  ಬೆಂಕಿ ಕಾಣಿಸಿಕೊಂಡಿದೆ

ಮುಂಬೈ: ಶಾರುಖ್ ಖಾನ್ ಬಂಗಲೆ ಮನ್ನತ್ ಸಮೀಪದ ಕಟ್ಟಡದಲ್ಲಿ ಬೆಂಕಿ; ಯಾವುದೇ ಅಪಾಯ ಇಲ್ಲ
ಕಟ್ಟಡದಲ್ಲಿ ಬೆಂಕಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 09, 2022 | 10:08 PM

Share

ಮುಂಬೈ: ಬಾಲಿವುಡ್  ನಟ  ಶಾರುಖ್ ಖಾನ್ (Shah Rukh Khan) ಅವರ ಬಂಗಲೆ ‘ಮನ್ನತ್’  (Mannat)ಬಳಿಯ ಕಟ್ಟಡದಲ್ಲಿ ಸೋಮವಾರ ಭಾರಿ ಬೆಂಕಿ(Fire) ಕಾಣಿಸಿಕೊಂಡಿದೆ. ಬಾಂದ್ರಾದ (ಪಶ್ಚಿಮ) ಬ್ಯಾಂಡ್‌ಸ್ಟ್ಯಾಂಡ್ ರಸ್ತೆಯಲ್ಲಿರುವ 21 ಅಂತಸ್ತಿನ ಜೀವೇಶ್ ಕಟ್ಟಡದ 14 ನೇ ಮಹಡಿಯಲ್ಲಿ ರಾತ್ರಿ 7.46 ರ ಸುಮಾರಿಗೆ  ಬೆಂಕಿ ಕಾಣಿಸಿಕೊಂಡಿದೆ. ಪ್ರಸ್ತುತ ಎಂಟು ಅಗ್ನಿಶಾಮಕ ವಾಹನಗಳು ಮತ್ತು ಏಳು ಜಂಬೋ ಟ್ಯಾಂಕರ್‌ಗಳು ಸ್ಥಳದಲ್ಲಿದ್ದು, ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಬೆಂಕಿ ನಂದಿಸಲು ಸುಮಾರು ಎರಡು ಗಂಟೆ ಬೇಕಾಯಿತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅಗ್ನಿಶಾಮಕ ದಳದ  ಅಧಿಕಾರಿಯ ಪ್ರಕಾರ,21 ಅಂತಸ್ತಿನ ಕಟ್ಟಡದ 14 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಹಂತ-II ಬೆಂಕಿ ಎಂದು ವರ್ಗೀಕರಿಸಲಾಗಿದೆ. ರಾತ್ರಿ 7.45ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಂಟು ಅಗ್ನಿಶಾಮಕ ವಾಹನಗಳು, ಏಳು ಜಂಬೋ ಟ್ಯಾಂಕರ್‌ಗಳು ಮತ್ತು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಮುಂಬೈ ನಾಗರಿಕ ಸಂಸ್ಥೆ, ಅದಾನಿ ವಿದ್ಯುತ್ ಅಧಿಕಾರಿಗಳು ಕೂಡ ಸ್ಥಳದಲ್ಲಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:02 pm, Mon, 9 May 22

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’