AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಶಾರುಖ್ ಖಾನ್ ಬಂಗಲೆ ಮನ್ನತ್ ಸಮೀಪದ ಕಟ್ಟಡದಲ್ಲಿ ಬೆಂಕಿ; ಯಾವುದೇ ಅಪಾಯ ಇಲ್ಲ

ಬಾಂದ್ರಾದ (ಪಶ್ಚಿಮ) ಬ್ಯಾಂಡ್‌ಸ್ಟ್ಯಾಂಡ್ ರಸ್ತೆಯಲ್ಲಿರುವ 21 ಅಂತಸ್ತಿನ ಜೀವೇಶ್ ಕಟ್ಟಡದ 14 ನೇ ಮಹಡಿಯಲ್ಲಿ ರಾತ್ರಿ 7.46 ರ ಸುಮಾರಿಗೆ  ಬೆಂಕಿ ಕಾಣಿಸಿಕೊಂಡಿದೆ

ಮುಂಬೈ: ಶಾರುಖ್ ಖಾನ್ ಬಂಗಲೆ ಮನ್ನತ್ ಸಮೀಪದ ಕಟ್ಟಡದಲ್ಲಿ ಬೆಂಕಿ; ಯಾವುದೇ ಅಪಾಯ ಇಲ್ಲ
ಕಟ್ಟಡದಲ್ಲಿ ಬೆಂಕಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 09, 2022 | 10:08 PM

Share

ಮುಂಬೈ: ಬಾಲಿವುಡ್  ನಟ  ಶಾರುಖ್ ಖಾನ್ (Shah Rukh Khan) ಅವರ ಬಂಗಲೆ ‘ಮನ್ನತ್’  (Mannat)ಬಳಿಯ ಕಟ್ಟಡದಲ್ಲಿ ಸೋಮವಾರ ಭಾರಿ ಬೆಂಕಿ(Fire) ಕಾಣಿಸಿಕೊಂಡಿದೆ. ಬಾಂದ್ರಾದ (ಪಶ್ಚಿಮ) ಬ್ಯಾಂಡ್‌ಸ್ಟ್ಯಾಂಡ್ ರಸ್ತೆಯಲ್ಲಿರುವ 21 ಅಂತಸ್ತಿನ ಜೀವೇಶ್ ಕಟ್ಟಡದ 14 ನೇ ಮಹಡಿಯಲ್ಲಿ ರಾತ್ರಿ 7.46 ರ ಸುಮಾರಿಗೆ  ಬೆಂಕಿ ಕಾಣಿಸಿಕೊಂಡಿದೆ. ಪ್ರಸ್ತುತ ಎಂಟು ಅಗ್ನಿಶಾಮಕ ವಾಹನಗಳು ಮತ್ತು ಏಳು ಜಂಬೋ ಟ್ಯಾಂಕರ್‌ಗಳು ಸ್ಥಳದಲ್ಲಿದ್ದು, ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಬೆಂಕಿ ನಂದಿಸಲು ಸುಮಾರು ಎರಡು ಗಂಟೆ ಬೇಕಾಯಿತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅಗ್ನಿಶಾಮಕ ದಳದ  ಅಧಿಕಾರಿಯ ಪ್ರಕಾರ,21 ಅಂತಸ್ತಿನ ಕಟ್ಟಡದ 14 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಹಂತ-II ಬೆಂಕಿ ಎಂದು ವರ್ಗೀಕರಿಸಲಾಗಿದೆ. ರಾತ್ರಿ 7.45ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಂಟು ಅಗ್ನಿಶಾಮಕ ವಾಹನಗಳು, ಏಳು ಜಂಬೋ ಟ್ಯಾಂಕರ್‌ಗಳು ಮತ್ತು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಮುಂಬೈ ನಾಗರಿಕ ಸಂಸ್ಥೆ, ಅದಾನಿ ವಿದ್ಯುತ್ ಅಧಿಕಾರಿಗಳು ಕೂಡ ಸ್ಥಳದಲ್ಲಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:02 pm, Mon, 9 May 22

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ