ದೆಹಲಿಯ ಶೂ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 6 ಮಂದಿ ನಾಪತ್ತೆ

Delhi Fire: ಗಾರ್ಗ್ ಅವರ ಪ್ರಕಾರ ಪೀರಾಗಡಿ ಉದ್ಯೋಗ್ ನಗರದ ಶೂ ಕಾರ್ಖಾನೆಯಲ್ಲಿ ಬೆಂಕಿಗೆ ಸಂಬಂಧಿಸಿದಂತೆ ಬೆಳಿಗ್ಗೆ 8.22 ಕ್ಕೆ ಅಗ್ನಿಶಾಮಕ ನಿಯಂತ್ರಣ ಕೋಣೆಗೆ ಕರೆ ಬಂದಿದೆ. ಆರಂಭದಲ್ಲಿ, 24 ಅಗ್ನಿಶಾಮಕ ಟೆಂಡರ್ ಕಳುಹಿಸಲಾಗಿದೆ.

ದೆಹಲಿಯ ಶೂ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 6 ಮಂದಿ ನಾಪತ್ತೆ
ದೆಹಲಿ ಶೂ ಕಾರ್ಖಾನೆಯಲ್ಲಿ ಬೆಂಕಿ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Jun 21, 2021 | 12:11 PM

ದೆಹಲಿ: ದೆಹಲಿಯ ಪೀರಾಗಡಿ ಉದ್ಯೋಗ್ ನಗರದಲ್ಲಿರುವ ಶೂ ಕಾರ್ಖಾನೆಯಲ್ಲಿ ಸೋಮವಾರ ಬೆಳಿಗ್ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸಲು ಒಟ್ಟು 31 ಅಗ್ನಿಶಾಮಕ ಟೆಂಡರ್‌ಗಳು ಮತ್ತು 50 ಕ್ಕೂ ಹೆಚ್ಚು ಅಗ್ನಿಶಾಮಕ ದಳಗಳನ್ನು ಕರೆದಿರುವುದಾಗಿ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ ಈವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲವಾದರೂ, ತಮ್ಮ ಆರು ಉದ್ಯೋಗಿಗಳು ಕಾಣೆಯಾಗಿದ್ದಾರೆ. ಅವರು ತಮ್ಮ ಮೊಬೈಲ್ ಫೋನ್‌ಗಳಿಗೆ ಕರೆಗಳಿಗೆ ಸ್ಪಂದಿಸುತ್ತಿದ್ದಾರೆ ಎಂದು ಕಾರ್ಖಾನೆಯ ಮಾಲೀಕರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಹೇಳಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್‌ಎಸ್) ಮುಖ್ಯಸ್ಥ ಅತುಲ್ ಗಾರ್ಗ್ ಹೇಳಿದ್ದಾರೆ.

ಇದು ಪ್ರಮುಖ ವರ್ಗದ ಬೆಂಕಿ ಮತ್ತು ಅಗ್ನಿಶಾಮಕ ಕಾರ್ಯಾಚರಣೆ ಸಂಜೆಯವರೆಗೆ ಮುಂದುವರಿಯಬಹುದು. ಸಾವುನೋವುಗಳಿಗೆ ಸಂಬಂಧಿಸಿದಂತೆ, ನಾವು ಯಾವುದೇ ಶವಗಳನ್ನು ಪತ್ತೆ ಮಾಡಿಲ್ಲ. ಆರು ಕಾರ್ಮಿಕರು ಕಾಣೆಯಾಗಿದ್ದಾರೆ ಎಂದು ಕಾರ್ಖಾನೆಯ ಮಾಲೀಕರು ಹೇಳುತ್ತಿದ್ದಾರೆ. ಅವರು ಒಳಗೆ ಸಿಕ್ಕಿಹಾಕಿಕೊಂಡಿರಬಹುದು. ಆದರೆ ಈ ಕ್ಷಣದಲ್ಲಿ ಅದನ್ನು ದೃಢೀಕರಿಸಲು ಅಥವಾ ನಿರಾಕರಿಸಲು ನಮಗೆ ಸಾಧ್ಯವಿಲ್ಲ ”ಎಂದು ಗಾರ್ಗ್ ಹೇಳಿದರು.

ಗಾರ್ಗ್ ಅವರ ಪ್ರಕಾರ ಪೀರಾಗಡಿ ಉದ್ಯೋಗ್ ನಗರದ ಶೂ ಕಾರ್ಖಾನೆಯಲ್ಲಿ ಬೆಂಕಿಗೆ ಸಂಬಂಧಿಸಿದಂತೆ ಬೆಳಿಗ್ಗೆ 8.22 ಕ್ಕೆ ಅಗ್ನಿಶಾಮಕ ನಿಯಂತ್ರಣ ಕೋಣೆಗೆ ಕರೆ ಬಂದಿದೆ. ಆರಂಭದಲ್ಲಿ, 24 ಅಗ್ನಿಶಾಮಕ ಟೆಂಡರ್ ಕಳುಹಿಸಲಾಗಿದೆ. ಬೆಂಕಿ ದೊಡ್ಡದಾಗಿದ್ದರಿಂದ ಇನ್ನೂ ಏಳು ವಾಹನಗಳು ಧಾವಿಸಿವೆ. ಅಗ್ನಿಶಾಮಕ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ಇದನ್ನೂ ಓದಿ: ಸಿನಿಮಾಟೊಗ್ರಾಫ್ ಕಾಯ್ದೆ ತಿದ್ದುಪಡಿಗೆ ಸಾರ್ವಜನಿಕರ ಅಭಿಪ್ರಾಯ ಕೇಳಿದ ಸರ್ಕಾರ

(Major fire broke out at a Shoe factory in Peeragarhi Udyog Nagar in outer Delhi on Monday morning )

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​