AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಫ್ಟಿನೆಂಟ್ ಜನರಲ್ ಹುದ್ದೆಗೇರಿದ ಮೂರನೇ ಮಹಿಳೆ ಮಾಧುರಿ ಕಾನಿಟ್ಕರ್

ಲೆಫ್ಟಿನೆಂಟ್ ಜನರಲ್ ಹುದ್ದೆಗೆ ಏರಿದ ದೇಶದ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಮಾಧುರಿ ಕಾನಿಟ್ಕರ್ ಪಾತ್ರರಾಗಿದ್ದಾರೆ. ಮಾಧುರಿ ಅವರ ಪತಿ ರಾಜೀವ್ ಕೂಡ ಲೆಫ್ಟಿನೆಂಟ್ ಜನರಲ್ ಆಗಿದ್ದು, ಈ ಶ್ರೇಣಿಗೆ ಏರಿದ ಮೊದಲ ದಂಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾಧುರಿ ಸೇನೆಯಲ್ಲಿ 37 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಪೌರತ್ವದ ಕಿಚ್ಚಿಗೆ ಇಬ್ಬರು ಬಲಿ: ಮೇಘಾಲಯದ ಪೂರ್ವ ಖಾಶಿ ಪರ್ವತ ಪ್ರದೇಶದಲ್ಲಿ ಸಿಎಎ ಪರ-ವಿರೋಧಿ ಗುಂಪುಗಳ ನಡುವೆ ಭುಗಿಲೆದ್ದ ಹಿಂಸಾಚಾರ ಇಬ್ಬರನ್ನು ಬಲಿ ಪಡೆದಿದೆ. ಗಲಭೆಯಲ್ಲಿ ಹಲವರಿಗೆ ಗಾಯಗಳಾಗಿವೆ. […]

ಲೆಫ್ಟಿನೆಂಟ್ ಜನರಲ್ ಹುದ್ದೆಗೇರಿದ ಮೂರನೇ ಮಹಿಳೆ ಮಾಧುರಿ ಕಾನಿಟ್ಕರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 01, 2020 | 8:58 AM

Share

ಲೆಫ್ಟಿನೆಂಟ್ ಜನರಲ್ ಹುದ್ದೆಗೆ ಏರಿದ ದೇಶದ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಮಾಧುರಿ ಕಾನಿಟ್ಕರ್ ಪಾತ್ರರಾಗಿದ್ದಾರೆ. ಮಾಧುರಿ ಅವರ ಪತಿ ರಾಜೀವ್ ಕೂಡ ಲೆಫ್ಟಿನೆಂಟ್ ಜನರಲ್ ಆಗಿದ್ದು, ಈ ಶ್ರೇಣಿಗೆ ಏರಿದ ಮೊದಲ ದಂಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾಧುರಿ ಸೇನೆಯಲ್ಲಿ 37 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

ಪೌರತ್ವದ ಕಿಚ್ಚಿಗೆ ಇಬ್ಬರು ಬಲಿ: ಮೇಘಾಲಯದ ಪೂರ್ವ ಖಾಶಿ ಪರ್ವತ ಪ್ರದೇಶದಲ್ಲಿ ಸಿಎಎ ಪರ-ವಿರೋಧಿ ಗುಂಪುಗಳ ನಡುವೆ ಭುಗಿಲೆದ್ದ ಹಿಂಸಾಚಾರ ಇಬ್ಬರನ್ನು ಬಲಿ ಪಡೆದಿದೆ. ಗಲಭೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಶಿಲ್ಲಾಂಗ್ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. 6 ಜಿಲ್ಲೆಗಳಲ್ಲಿ ಇಂಟರ್​ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲಕಿಗೆ ಥಳಿಸಿ, ತಲೆ ಬೋಳಿಸಿದ್ರು: ಹುಡುಗನ ಜೊತೆ ಫೋನ್​​ನಲ್ಲಿ ಮಾತನಾಡುತ್ತಿದ್ದ ಆರೋಪದಡಿ ಅಪಾಪ್ತ ಬಾಲಕಿಗೆ ಥಳಿಸಿ, ತಲೆಬೋಳಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಸೊಂಡ್ವಾ ಪ್ರದೇಶದ ಅಲಿರಾಜ್​ಪುರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಬಾಲಕಿ ನೆರವಿಗೆ ಯಾರೂ ಕೂಡ ಧಾವಿಸಿಲ್ಲ. ಘಟನೆ ಸಂಬಂಧ ಮೂವರ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದು ಬಂಧಿಸಿದ್ದಾರೆ.

ಬೋಟ್​ ಮಗುಚಿ ಹಲವರು ನಾಪತ್ತೆ: ಉತ್ತರಪ್ರದೇಶದ ಗಂಗಾನದಿಯಲ್ಲಿ ಬೋಟ್​​ ಮಗುಚಿ ಹಲವರು ಕಣ್ಮರೆಯಾಗಿರೋ ಘಟನೆ ನಡೆದಿದೆ. ಮಾಹೇಜಿ ಹಳ್ಳಿಯ ಜನರು ಗಾಜೀಪುರದಿಂದ ಬೋಟ್​ನಲ್ಲಿ ವಾಪಸ್ ಆಗುತ್ತಿದ್ರು. ಈ ವೇಳೆ ಚಾಂಡೌಲಿಯಲ್ಲಿ ಬೋಟ್ ಮಗುಚಿದ್ದು ಕಣ್ಮರೆಯಾದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಕಾಲು ಜಾರಿ ಬಿದ್ದ ನ್ಯಾಯಮೂರ್ತಿಗಳು: ಉತ್ತರಾಖಂಡ್​​ನ ಹೈಕೋರ್ಟ್​​ ನ್ಯಾಯಮೂರ್ತಿ ಪೂಜೆ ಸಲ್ಲಿಸುವ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ಅದೃಷ್ಟವಶಾತ್ ನ್ಯಾಯಮೂರ್ತಿ ರಮೇಶ್ ರಂಗನಾಥನ್​ ಅಪಾಯದಿಂದ ಪಾರಾಗಿದ್ದಾರೆ. ದೇವಪ್ರಯಾಗ್​​​ನಲ್ಲಿ ಸಂಗಮಕ್ಕೆ ಭೇಟಿ ನೀಡಿದ್ದ ಈ ಘಟನೆ ಸಂಭವಿಸಿದೆ.

ಜೀವಜಲಕ್ಕೆ ಹಾಹಾಕಾರ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕುಡಿಯೋ ನೀರಿಗೆ ಜನರು ಪರದಾಡುತ್ತಿದ್ದಾರೆ. ದೆಹಲಿಯ ಕಾರ್ವಾಲ್​ ನಗರ ಪ್ರದೇಶದಲ್ಲಿ ಜೀವಜಲಕ್ಕೆ ಹಾಹಾಕಾರ ಶುರುವಾಗಿದೆ. ನೀರಿನ ಕ್ಯಾನ್​ಗಳನ್ನು ಹಿಡಿದು ಟ್ಯಾಂಕರ್​​ನಲ್ಲಿ ಜನರು ನೀರು ತುಂಬಿಕೊಂಡು ಹೋಗ್ತಿದ್ದಾರೆ..

ಅಮೆರಿಕದಲ್ಲಿ ಕೊರೊನಾಗೆ ಮೊದಲ ಬಲಿ: ಅಮೆರಿಕದಲ್ಲಿ ಕೊರೊನಾ ವೈರಸ್ ಮೊದಲ ಬಲಿ ಪಡೆದಿದೆ. ವಾಷಿಂಗ್ಟನ್​ಲ್ಲಿ 50 ವರ್ಷದ ಮಹಿಳೆಯೊಬ್ಬರು ಕೊರೊನಾ ವೈರಸ್​ಗೆ ಬಲಿಯಾಗಿದ್ದು, ಅಮೆರಿಕದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಬಗ್ಗೆ ಮಾತನಾಡಿರೋ ಅಧ್ಯಕ್ಷ ಟ್ರಂಪ್, ಈ ಬಗ್ಗೆ ಯಾರೂ ಹೆದರಿಕೊಳ್ಳೋ ಅವಶ್ಯತಕತೆ ಇಲ್ಲ. ಕೂಲಾಗಿ ಇರುವಂತೆ ಮನವಿ ಮಾಡಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ