AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದ ಹಿಂದಿದೆ ಜೈಶ್ ಉಗ್ರ ಸಂಘಟನೆ ಕೈವಾಡ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) 1267 ನಿರ್ಬಂಧಗಳ ಮೇಲ್ವಿಚಾರಣಾ ಸಮಿತಿಯ ಹೊಸ ವರದಿಯು ಪಾಕಿಸ್ತಾನದ ಬಗ್ಗೆ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (JeM) ದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಬಳಿ ನಡೆದ ಭಯೋತ್ಪಾದಕ ದಾಳಿಗೆ ನೇರ ಸಂಬಂಧ ಹೊಂದಿದೆ ಎಂದು ವರದಿಯು ಸ್ಪಷ್ಟವಾಗಿ ಹೇಳುತ್ತದೆ. ಜೈಶ್-ಎ-ಮೊಹಮ್ಮದ್ ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಿದ್ದು ಮಾತ್ರವಲ್ಲದೆ, ತನ್ನ ಬಲ ಮತ್ತು ಜಾಲವನ್ನು ವಿಸ್ತರಿಸುತ್ತಿದೆ.

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದ ಹಿಂದಿದೆ ಜೈಶ್ ಉಗ್ರ ಸಂಘಟನೆ ಕೈವಾಡ
ಸ್ಫೋಟ Image Credit source: DD News
ನಯನಾ ರಾಜೀವ್
|

Updated on: Feb 12, 2026 | 12:11 PM

Share

ನವದೆಹಲಿ, ಫೆಬ್ರವರಿ 12: ಇತ್ತೀಚೆಗೆ ದೆಹಲಿಯ ಕೆಂಪುಕೋಟೆ ಬಳಿ ನಡೆದಿದ್ದ ಕಾರು ಸ್ಫೋಟ(Car Blast)ಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಹೊಸ ವರದಿಯನ್ನು ಬಿಡುಗಡೆ ಮಾಡಿದೆ. ಆ ವರದಿಯಲ್ಲಿ ಈ ದಾಳಿಯಲ್ಲ ಪಾಕಿಸ್ತಾನಿ ಉಗ್ರ ಸಂಘಟನೆ ಜೈಶ್-ಎ ಮೊಹಮ್ಮದ್ ಕೈವಾಡವಿತ್ತು ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ವಿಶ್ವಸಂಸ್ಥೆಯ 37 ನೇ ವರದಿಯು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ನಂಟು ಈ ದಾಳಿಯಲ್ಲಿ ಬೆಳಕಿಗೆ ಬಂದಿದೆ ಎಂದು ಹೇಳಿದೆ.

ವರದಿ ಪ್ರಕಾರ, ಜೈಶ್ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಸದಸ್ಯ ರಾಷ್ಟ್ರವೊಂದು ಹೇಳಿದೆ. ವರದಿಯು ಗಡಿಯಾಚೆಗಿನ ಭಯೋತ್ಪಾದನೆಯ ಬಗ್ಗೆ ಪ್ರಶ್ನೆಗಳನ್ನು ಮತ್ತೆ ಹುಟ್ಟುಹಾಕಿದೆ. ಮಸೂದ್ ಅಜರ್ ಅಕ್ಟೋಬರ್ 8 ರಂದು ಪ್ರತ್ಯೇಕ ಮಹಿಳಾ ವಿಭಾಗವನ್ನು ರಚಿಸುವುದಾಗಿ ಘೋಷಿಸಿದ್ದಾನೆ. ಹೊಸ ವಿಭಾಗಕ್ಕೆ ಜಮಾತ್-ಉಲ್-ಮುಮಿನಾತ್ ಎಂದು ಹೆಸರಿಲಾಗಿದೆ. ಈ ವಿಭಾಗವನ್ನು ವಿಶ್ವಸಂಸ್ಥೆಯ ಪಟ್ಟಿಯಲ್ಲಿ ಸೇರಿಸಲಾಗಿಲ್ಲ, ಆದರೆ ಸಂಘಟನೆಯು ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಲಾಗಿದೆ.

ಈ ವಿಷಯದ ಬಗ್ಗೆ ಸದಸ್ಯ ರಾಷ್ಟ್ರಗಳಲ್ಲಿ ಭಿನ್ನಾಭಿಪ್ರಾಯವಿದೆ. ಒಂದು ದೇಶ ಜೈಶ್ ಇನ್ನೂ ಸಕ್ರಿಯವಾಗಿದೆ ಎಂದು ಹೇಳಿಕೊಂಡರೆ, ಇನ್ನೊಂದು ದೇಶ ಜೈಶ್ ಈಗ ನಿಷ್ಕ್ರಿಯ ಎಂದು ಹೇಳಿದೆ. ನಿಷೇಧದ ನಂತರ ಜೈಶ್ ಮತ್ತು ಲಷ್ಕರ್ ಇನ್ನು ಮುಂದೆ ಸಕ್ರಿಯವಾಗಿಲ್ಲ ಎಂದು ಪಾಕಿಸ್ತಾನ ಈಗಾಗಲೇ ಹೇಳಿದೆ.ವರದಿಯು ಪಹಲ್ಗಾಮ್ ದಾಳಿಯ ಬಗ್ಗೆಯೂ ಉಲ್ಲೇಖಿಸಿದೆ. ಏಪ್ರಿಲ್ 2025 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ್ದರು. ಲಷ್ಕರ್‌ನ ಪ್ರತಿನಿಧಿ ಎಂದು ಪರಿಗಣಿಸಲಾದ ದಿ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯನ್ನು ನಡೆಸಿತ್ತು.

ಮತ್ತಷ್ಟು ಓದಿ: ದೆಹಲಿ ನಿಗೂಢ ಸ್ಫೋಟ: ಘಟನೆಗೆ ಕಾರಣವಾದ ಕಾರಿನ ಸ್ಥಿತಿ ಹೇಗಾಗಿದೆ ವಿಡಿಯೋ ನೋಡಿ

ಜುಲೈ 28, 2025 ರಂದು ಮೂವರು ಶಂಕಿತರನ್ನು ಕೊಲ್ಲಲಾಯಿತು. ಮೇ ತಿಂಗಳಲ್ಲಿ, ಭಾರತ ಪಾಕಿಸ್ತಾನದಲ್ಲಿನ ಭಯೋತ್ಪಾದಕ ಅಡಗುತಾಣಗಳ ವಿರುದ್ಧ ಕ್ರಮ ಕೈಗೊಂಡಿತ್ತು. ನವೆಂಬರ್ 10, 2025 ರಂದು ನವದೆಹಲಿಯ ಕೆಂಪು ಕೋಟೆಯ ಬಳಿ ದಾಳಿ ನಡೆದಿತ್ತು. ದಾಳಿಯಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ