AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​​ನಲ್ಲಿ ಭೀಕರ ಅಪಘಾತ; ಆಳವಾದ ಕಂದಕಕ್ಕೆ ಬಿದ್ದ ವಾಹನ, 13 ಮಂದಿ ದುರ್ಮರಣ

ಇದೊಂದು ಯುಟಿಲಿಟಿ ವಾಹನವಾಗಿದ್ದು ಡೆಹ್ರಾಡೂನ್​​ನ ಬೈಲಾ ಗ್ರಾಮದಿಂದ ವಿಕಾಸನಗರಕ್ಕೆ ಹೋಗುತ್ತಿದ್ದಾಗ ಚಕ್ರತಾ ಬಳಿ ಕಲ್ಲಿನಿಂದ ಕೂಡಿದ ಕಂದಕಕ್ಕೆ ಬಿದ್ದಿದೆ. ಇದರಲ್ಲಿ ಸುಮಾರು 16 ಜನರಿದ್ದರು ಎಂದು ಮಾಹಿತಿ ಸಿಕ್ಕಿದೆ.

ಉತ್ತರಾಖಂಡ್​​ನಲ್ಲಿ ಭೀಕರ ಅಪಘಾತ; ಆಳವಾದ ಕಂದಕಕ್ಕೆ ಬಿದ್ದ ವಾಹನ, 13 ಮಂದಿ ದುರ್ಮರಣ
ಅಪಘಾತ ನಡೆದ ಸ್ಥಳ
TV9 Web
| Edited By: |

Updated on:Oct 31, 2021 | 11:28 AM

Share

ಡೆಹ್ರಾಡೂನ್​: ಉತ್ತರಾಖಂಡ್​​ನ ರಾಜಧಾನಿ ಡೆಹ್ರಾಡೂನ್​ನಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ನಡೆದಿದೆ. ಇಲ್ಲಿನ ಚಕ್ರತಾ ಪ್ರದೇಶದ ಬುಲ್ಹಾದ್​-ಬೈಲಾ ರಸ್ತೆಯಲ್ಲಿ ವಾಹವೊಂದು ಕಂದಕಕ್ಕೆ ಬಿದ್ದ ಪರಿಣಾಮ 13 ಮಂದಿ ದುರ್ಮರಣಹೊಂದಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದೊಂದು ಯುಟಿಲಿಟಿ ವಾಹನವಾಗಿದ್ದು ಡೆಹ್ರಾಡೂನ್​​ನ ಬೈಲಾ ಗ್ರಾಮದಿಂದ ವಿಕಾಸನಗರಕ್ಕೆ ಹೋಗುತ್ತಿದ್ದಾಗ ಚಕ್ರತಾ ಬಳಿ ಕಲ್ಲಿನಿಂದ ಕೂಡಿದ ಕಂದಕಕ್ಕೆ ಬಿದ್ದಿದೆ. ಇದರಲ್ಲಿ ಸುಮಾರು 16 ಜನರಿದ್ದರು ಎಂದು ಮಾಹಿತಿ ಸಿಕ್ಕಿದೆ. ಮೃತದೇಹಗಳನ್ನು ಕಂದಕದಿಂದ ಹೊರಗೆ ತೆಗೆಯಲಾಗಿದೆ. ಈ ಪ್ರದೇಶ ಸ್ವಲ್ಪ ದುರ್ಗಮವಾಗಿದ್ದರಿಂದ ರಕ್ಷಣಾ ತಂಡಗಳು ಅಲ್ಲಿಗೆ ತಲುಪಲು ವಿಳಂಬವಾಯಿತು. ಆದರೆ ಸ್ಥಳೀಯ ಜನರು ಸುಮ್ಮನೆ ಕೂರಲಿಲ್ಲ. ಗ್ರಾಮಸ್ಥರೇ ಸೇರಿಕೊಂಡು ರಕ್ಷಣಾ ಕಾರ್ಯ ನಡೆಸಿದರು. ಸದ್ಯ ಸ್ಥಳಕ್ಕೆ ಪೊಲೀಸರು, ಎಸ್​ಡಿಆರ್​ಎಫ್​ ಸಿಬ್ಬಂದಿ, ಜಿಲ್ಲಾಧಿಕಾರಿ ಸೇರಿ ಹಲವು ಧಾವಿಸಿದ್ದಾರೆ.  ಹಾಗೇ ಪ್ರತಿಪಕ್ಷ ನಾಯಕ ಪ್ರೀತಂ ಸಿಂಗ್​ ಕೂಡ ಸ್ಥಳಕ್ಕೆ ತೆರಳಿ, ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ ಸರ್ಕಾರಿ ಕಚೇರಿಗಳನ್ನು ಗಲ್ಲ ಮಂಡಿಗಳನ್ನಾಗಿ ಪರಿವರ್ತಿಸುವ ಎಚ್ಚರಿಕೆ ನೀಡಿದ ರಾಕೇಶ್​ ಟಿಕಾಯತ್​

Coronavirus cases in India: ಭಾರತದಲ್ಲಿ 12,830 ಹೊಸ ಕೊವಿಡ್ ಪ್ರಕರಣ ಪತ್ತೆ, 446 ಮಂದಿ ಸಾವು

Published On - 11:27 am, Sun, 31 October 21

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!