AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸ್ಫೋಟ, ವೈದ್ಯರ ನಡುವೆ ಇತ್ತು ಹಣದ ವಿವಾದ, 4 ನಗರಗಳಲ್ಲಿ ಸರಣಿ ಸ್ಫೋಟ ನಡೆಸಲು ನಡೆದಿತ್ತು ಪ್ಲ್ಯಾನ್

ಒಟ್ಟು ಎಂಟು ಉಗ್ರರು ಭಾರತದ 4 ಕಡೆಗಳಲ್ಲಿ ಸರಣಿ ಸ್ಫೋಟಗಳನ್ನು ನಡೆಸಲು ಸಂಚು ರೂಪಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಯೋತ್ಪಾದಕರು ತಲಾ ಎರಡು ಗುಂಪುಗಳಾಗಿ ನಾಲ್ಕು ನಗರಗಳಿಗೆ ತೆರಳಲು ಯೋಜಿಸಿದ್ದರು, ಅವರು ತಮ್ಮೊಂದಿಗೆ ಬಹು ಐಇಡಿಗಳನ್ನು ಸಾಗಿಸಬೇಕಿತ್ತು. ಸುಮಾರು 8 ಶಂಕಿತರು ನಾಲ್ಕು ಸ್ಥಳಗಳಲ್ಲಿ ಸರಣಿ ಸ್ಫೋಟ ನಡೆಸಲು ಯೋಜಿಸಿದ್ದರು. ಅವರು ತಲಾ ಎರಡು ಗುಂಪುಗಳಾಗಿ ನಾಲ್ಕು ನಗರಗಳಿಗೆ ತೆರಳಲು ಯೋಜಿಸಿದ್ದರು. ತನಿಖಾ ಸಂಸ್ಥೆಯ ಮೂಲಗಳು ಎಎನ್‌ಐಗೆ ತಿಳಿಸಿರುವಂತೆ ಡಾ. ಮುಜಮ್ಮಿಲ್, ಡಾ. ಅದೀಲ್, ಉಮರ್ ಮತ್ತು ಶಾಹೀನ್ ಜಂಟಿಯಾಗಿ ಸುಮಾರು 20 ಲಕ್ಷ ರೂ. ನಗದನ್ನು ಸಂಗ್ರಹಿಸಿದ್ದು, ದೆಹಲಿ ಸ್ಫೋಟದ ಮೊದಲು ಅದನ್ನು ಉಮರ್‌ಗೆ ಹಸ್ತಾಂತರಿಸಲಾಗಿತ್ತು.

ದೆಹಲಿ ಸ್ಫೋಟ, ವೈದ್ಯರ ನಡುವೆ ಇತ್ತು ಹಣದ ವಿವಾದ, 4 ನಗರಗಳಲ್ಲಿ ಸರಣಿ ಸ್ಫೋಟ ನಡೆಸಲು ನಡೆದಿತ್ತು ಪ್ಲ್ಯಾನ್
ಸ್ಫೋಟ
ನಯನಾ ರಾಜೀವ್
|

Updated on: Nov 13, 2025 | 10:27 AM

Share

ನವದೆಹಲಿ, ನವೆಂಬರ್ 13: ಭಾರತದಾದ್ಯಂತ ಹಲವು ನಗರಗಳಲ್ಲಿ ಸುಮಾರು 8 ಭಯೋತ್ಪಾದಕರು ಸರಣಿ ಸ್ಫೋಟ(Blast)ಗಳನ್ನು ನಡೆಸಲು ಸಂಚು ರೂಪಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ತನಿಖಾ ಸಂಸ್ಥೆಗಳು ಗುರುವಾರ ತಿಳಿಸಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಭಯೋತ್ಪಾದಕರು ತಲಾ ಎರಡು ಗುಂಪುಗಳಾಗಿ ನಾಲ್ಕು ನಗರಗಳಿಗೆ ತೆರಳಲು ಯೋಜಿಸಿದ್ದರು, ಅವರು ತಮ್ಮೊಂದಿಗೆ ಬಹು ಐಇಡಿಗಳನ್ನು ಸಾಗಿಸಬೇಕಿತ್ತು. ಸುಮಾರು 8 ಶಂಕಿತರು ನಾಲ್ಕು ಸ್ಥಳಗಳಲ್ಲಿ ಸರಣಿ ಸ್ಫೋಟ ನಡೆಸಲು ಯೋಜಿಸಿದ್ದರು.

ಅವರು ತಲಾ ಎರಡು ಗುಂಪುಗಳಾಗಿ ನಾಲ್ಕು ನಗರಗಳಿಗೆ ತೆರಳಲು ಯೋಜಿಸಿದ್ದರು. ತನಿಖಾ ಸಂಸ್ಥೆಯ ಮೂಲಗಳು ಎಎನ್‌ಐಗೆ ತಿಳಿಸಿರುವಂತೆ ಡಾ. ಮುಜಮ್ಮಿಲ್, ಡಾ. ಅದೀಲ್, ಉಮರ್ ಮತ್ತು ಶಾಹೀನ್ ಜಂಟಿಯಾಗಿ ಸುಮಾರು 20 ಲಕ್ಷ ರೂ. ನಗದನ್ನು ಸಂಗ್ರಹಿಸಿದ್ದು, ದೆಹಲಿ ಸ್ಫೋಟದ ಮೊದಲು ಅದನ್ನು ಉಮರ್‌ಗೆ ಹಸ್ತಾಂತರಿಸಲಾಗಿತ್ತು.

ನಂತರ ಅವರು ಗುರುಗ್ರಾಮ, ನೂಹ್ ಮತ್ತು ಹತ್ತಿರದ ಪ್ರದೇಶಗಳಿಂದ ಐಇಡಿ ತಯಾರಿಕೆಗಾಗಿ ಉದ್ದೇಶಿಸಲಾದ 3 ಲಕ್ಷ ರೂ. ಮೌಲ್ಯದ 20 ಕ್ವಿಂಟಾಲ್‌ಗೂ ಹೆಚ್ಚು ಎನ್‌ಪಿಕೆ ರಸಗೊಬ್ಬರವನ್ನು ಖರೀದಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: ದೆಹಲಿ ನಿಗೂಢ ಸ್ಫೋಟ: ಡಾ. ಉಮರ್ ಹಾಗೂ ಇತರೆ ಉಗ್ರರಿಗೆ ಟರ್ಕಿಶ್ ಹ್ಯಾಂಡ್ಲರ್ ‘ಯುಕಾಸಾ’ ಜತೆ ಇತ್ತು ನಂಟು

ಉಮರ್ ಮತ್ತು ಡಾ. ಮುಜಮ್ಮಿಲ್ ನಡುವೆ ಹಣದ ವಿವಾದವೂ ಇತ್ತು. ಸಿಗ್ನಲ್ ಅಪ್ಲಿಕೇಶನ್‌ನಲ್ಲಿ ಉಮರ್ 2-4 ಸದಸ್ಯರೊಂದಿಗೆ ಒಂದು ಗುಂಪನ್ನು ರಚಿಸಿದರು ಎಂದು ಅವರು ಹೇಳಿದರು. ಸ್ಫೋಟಗಳಿಗೆ ಪ್ರತ್ಯೇಕ ವಾಹನಗಳನ್ನು ಸಿದ್ಧಪಡಿಸಲಾಗಿತ್ತೇ? ಎಂಬುದರ ಬಗ್ಗೆಯೂ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಸ್ಫೋಟಕಗಳನ್ನು ಒಳಗೊಂಡಿರುವ ಮತ್ತು ಗುರಿಯನ್ನು ದೊಡ್ಡದಾಗಿಸುವ ಇನ್ನೂ ಎರಡು ಹಳೆಯ ವಾಹನಗಳನ್ನು ಸಿದ್ಧಪಡಿಸಲು ಭಯೋತ್ಪಾದಕರು ಯೋಜಿಸುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ದೆಹಲಿಯ ಕೆಂಪು ಕೋಟೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿದ್ದರು.

ಈ ಸ್ಫೋಟದ ಹಿಂದೆ ಜೈಶ್​ ಎ ಮೊಹಮ್ಮದ್ ಸಂಘಟನೆಯ ಕೈವಾಡವಿದೆ ಎಂದು ಭಾರತೀಯ ಭದ್ರತಾ ಸಂಸ್ಥೆಗಳು ನಂಬಿವೆ. ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅದಕ್ಕಿಂತ ಹೆಚ್ಚಿನ ಶ್ರೇಣಿಯ ಹಿರಿಯ ಅಧಿಕಾರಿಗಳ ನೇತೃತ್ವದ ತಂಡವು ಸಂಘಟಿತ ಮತ್ತು ಸಮಗ್ರ ತನಿಖೆ ನಡೆಸಲಿದೆ.

ಬಾಬರಿ ಮಸೀದಿ ಕೆಡವಿದ್ದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಉಗ್ರರು ಡಿಸೆಂಬರ್ 6 ರಂದು ದೆಹಲಿಯ 6 ಕಡೆಗಳಲ್ಲಿ ಸರಣಿ ಸ್ಫೋಟ ನಡೆಸಲು ಯೋಜಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ