AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನಲ್ಲಿ ಅವಳಿ ಸ್ಫೋಟದ ಬೆನ್ನಲ್ಲೇ ಇಂದು 6ಕೆಜಿ ತೂಕದ ಐಇಡಿ ಪತ್ತೆ; ದೊಡ್ಡದೊಂದು ಉಗ್ರದಾಳಿ ತಪ್ಪಿತು ಎಂದ ಡಿಜಿಪಿ

ಭಾರತೀಯ ವಾಯುಪಡೆ ಟ್ವೀಟ್​ ಮಾಡಿದ್ದು, ಜಮ್ಮುವಿನ ಏರ್​ಫೋರ್ಸ್​ ಸ್ಟೇಶನ್​​​ನಲ್ಲಿ ನಿನ್ನೆ ತಡರಾತ್ರಿ ಎರಡು ಕಡಿಮೆ ಸಾಂದ್ರತೆಯುಳ್ಳ ಸ್ಫೋಟಕಗಳು ಸ್ಫೋಟಗೊಂಡಿವೆ. ನಮ್ಮ ಯಾವುದೇ ಸಾಧನ, ಉಪಕರಣಗಳಿಗೆ ಹಾನಿಯಾಗಿಲ್ಲ ಎಂದು ತಿಳಿಸಿದೆ.

ಜಮ್ಮುವಿನಲ್ಲಿ ಅವಳಿ ಸ್ಫೋಟದ ಬೆನ್ನಲ್ಲೇ ಇಂದು 6ಕೆಜಿ ತೂಕದ ಐಇಡಿ ಪತ್ತೆ; ದೊಡ್ಡದೊಂದು ಉಗ್ರದಾಳಿ ತಪ್ಪಿತು ಎಂದ ಡಿಜಿಪಿ
ಜಮ್ಮು ಏರ್​ಫೋರ್ಸ್ ಸ್ಟೇಶನ್​
TV9 Web
| Edited By: |

Updated on: Jun 27, 2021 | 4:10 PM

Share

ಜಮ್ಮು ಏರ್​ಪೋರ್ಟ್​​ನಲ್ಲಿರುವ ಏರ್​ಫೋರ್ಸ್​​ನಲ್ಲಿ ನಿನ್ನೆ ತಡರಾತ್ರಿ ಕೇವಲ ಐದೇ ನಿಮಿಷಗಳ ಅಂತರದಲ್ಲಿ ಅವಳಿ ಸ್ಫೋಟ ನಡೆದ ಬೆನ್ನಲ್ಲೇ, ಇಂದು ಮಧ್ಯಾಹ್ನ ಸುಮಾರು 5-6 ಕೆಜಿಯಷ್ಟು ಭಾರದ ಐಇಡಿ (ಸುಧಾರಿತ ಸ್ಫೋಟಕ ಸಾಧನ)ಯನ್ನು ಜಮ್ಮು-ಕಾಶ್ಮೀರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದು ಉಗ್ರರ ಕೃತ್ಯ. ಐಇಡಿಯನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳುವ ಮೂಲಕ ದೊಡ್ಡ ಮಟ್ಟದ ದಾಳಿಯನ್ನು ತಪ್ಪಿಸಿದಂತಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅಲ್ಲದೆ, ಲಷ್ಕರ್​ ಎ ತೊಯ್ಬಾ ಸಂಘಟನೆಗೆ ಸೇರಿದವನೊಬ್ಬನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದೂ ತಿಳಿಸಿದ್ದಾರೆ.

ನಿನ್ನೆ ತಡರಾತ್ರಿ ಸಂಭವಿಸಿದ ಅವಳಿ ಸ್ಫೋಟದ ಸಂಬಂಧ ಈಗಾಗಲೇ ತನಿಖೆ ಶುರುವಾಗಿದೆ. ಒಂದು ಏರ್​ಫೋರ್ಸ್ ಸ್ಟೇಶನ್​ನ ಮೇಲ್ಛಾವಣಿಯಿಂದ ಸ್ಫೋಟಗೊಂಡಿದ್ದು, ಇನ್ನೊಂದು ನೆಲದಿಂದ ಸ್ಫೋಟವಾಗಿದೆ. ಈ ಸ್ಫೋಟಕ್ಕಾಗಿ ದುಷ್ಕರ್ಮಿಗಳು ಡ್ರೋನ್​ ಬಳಸಿದ್ದಾಗಿ ಸೇನಾ ಮೂಲಗಳು ತಿಳಿಸಿವೆ. ಇನ್ನು ಐಇಡಿ ವಶಪಡಿಸಿಕೊಂಡಿದ್ದರಿಂದ ದೊಡ್ಡದೊಂದು ಅನಾಹುತ ತಪ್ಪಿದಂತಾಗಿದೆ. ನಾವು ಶೀಘ್ರವೇ ಇದಕ್ಕೆ ಸಂಬಂಧಪಟ್ಟವರನ್ನು ಬಂಧಿಸುತ್ತೇವೆ ಎಂದು ಜಮ್ಮು-ಕಾಶ್ಮೀರ ಡಿಜಿಪಿ ದಿಲ್​ಬಾಗ್​ ಸಿಂಗ್ ಹೇಳಿದ್ದಾರೆ.

ಭಾರತೀಯ ವಾಯುಪಡೆ ಟ್ವೀಟ್​ ಮಾಡಿದ್ದು, ಜಮ್ಮುವಿನ ಏರ್​ಫೋರ್ಸ್​ ಸ್ಟೇಶನ್​​​ನಲ್ಲಿ ನಿನ್ನೆ ತಡರಾತ್ರಿ ಎರಡು ಕಡಿಮೆ ಸಾಂದ್ರತೆಯುಳ್ಳ ಸ್ಫೋಟಕಗಳು ಸ್ಫೋಟಗೊಂಡಿವೆ. ನಮ್ಮ ಯಾವುದೇ ಸಾಧನ, ಉಪಕರಣಗಳಿಗೆ ಹಾನಿಯಾಗಿಲ್ಲ. ಯಾರದ್ದೂ ಪ್ರಾಣ ಹಾನಿಯಾಗಿಲ್ಲ. ತನಿಖೆ ಚುರುಕುಗೊಂಡಿದೆ ಎಂದು ಹೇಳಿದೆ. ಡ್ರೋನ್​ನಿಂದ ಬಿದ್ದು, ಸ್ಫೋಟಗೊಂಡಿದ್ದೂ ಸಹ ಐಇಡಿಯೇ ಆಗಿದ್ದು, ಅದನ್ನು ಹೆಲಿಪ್ಯಾಡ್​​ನಲ್ಲಿ ನಿಂತ ಏರ್​ಕ್ರಾಫ್ಟ್​ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಅದರ ಹೊರತಾಗಿ ಈಗ ಮತ್ತೆ 5-6 ಕೆಜಿ ತೂಕದ ಐಇಡಿಯನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಮುಂದಿನ ಮುಖ್ಯಮಂತ್ರಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದವರಿಗೆ ನೊಟೀಸ್: ಕೋಳಿವಾಡ

(Major terrorist attack averted in Jammu said Jammu Kashmir DGP Dilbagh Singh)

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ