AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​ನಲ್ಲಿ ಉಗ್ರ ದಾಳಿಯ ಸಂಚು ವಿಫಲಗೊಳಿಸಿದ ಭದ್ರತಾ ಪಡೆಗಳು; 19 ಗ್ರೆನೇಡ್​ ವಶ

ಪೂಂಚ್​​ನ ಫಾಗ್ಲಾ ಪ್ರದೇಶದಲ್ಲಿ ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್​ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಜ

ಪೂಂಚ್​ನಲ್ಲಿ ಉಗ್ರ ದಾಳಿಯ ಸಂಚು ವಿಫಲಗೊಳಿಸಿದ ಭದ್ರತಾ ಪಡೆಗಳು; 19 ಗ್ರೆನೇಡ್​ ವಶ
ಗ್ರೆನೇಡ್​ಗಳು
Lakshmi Hegde
|

Updated on:May 09, 2021 | 4:58 PM

Share

ಪೂಂಚ್​: ಭದ್ರತಾ ಪಡೆಗಳ ಮೇಲೆ ಅತಿದೊಡ್ಡ ಪ್ರಮಾಣದಲ್ಲಿ ದಾಳಿಗೆ ಸಂಚು ಹೂಡಿದ್ದ ಉಗ್ರರ ಯೋಜನೆಯನ್ನು ರಕ್ಷಣಾ ಸಿಬ್ಬಂದಿ ವಿಫಲಗೊಳಿಸಿದ್ದಾರೆ. ಪೂಂಚ್​ ಜಿಲ್ಲೆಯಲ್ಲಿರುವ ಭಯೋತ್ಪಾದಕರ ಅಡಗುತಾಣದಲ್ಲಿ ಸಂಗ್ರಹಿಸಿಡಲಾಗಿದ್ದ 19 ಗ್ರೆನೇಡ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ರಕ್ಷಣಾ ಇಲಾಖೆ ವಕ್ತಾರ ಭಾನುವಾರ ಮಾಹಿತಿ ನೀಡಿದ್ದಾರೆ.

ಪೂಂಚ್​​ನಲ್ಲಿ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದರು. ಅದಕ್ಕಾಗಿಯೇ ಈ ಪ್ರಮಾಣದ ಗ್ರನೇಡ್​ಗಳನ್ನು ಸಂಗ್ರಹ ಮಾಡಿಟ್ಟಿದ್ದರು. ಪೊಲೀಸ್​ ಹಾಗೂ ರಕ್ಷಣಾ ಪಡೆಗಳ ಜಂಟಿ ಕಾರ್ಯಾಚರಣೆಯಿಂದ ದಾಳಿಯ ಸಂಚನ್ನು ವಿಫಲಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೂಂಚ್​​ನ ಫಾಗ್ಲಾ ಪ್ರದೇಶದಲ್ಲಿ ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್​ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಜಮ್ಮು-ರಾಜೌರಿ-ಪೂಂಚ್​ ಹೆದ್ದಾರಿ ಎನ್​ಎಚ್​ 144A ಬಳಿ ಉಗ್ರರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂಬ ಗುಪ್ತಚರ ಇಲಾಖೆಯ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು. ಫಾಗ್ಲಾದಲ್ಲಿರುವ ಅಡಗುತಾಣದಲ್ಲಿ ಈ ಗ್ರೆನೇಡ್​ಗಳನ್ನು ಅಡಗಿಸಿ ಇಡಲಾಗಿತ್ತು ಎಂದು ವಕ್ತಾರ ವಿವರಿಸಿದ್ದಾರೆ.

ಇದನ್ನೂ ಓದಿ: ಅಗತ್ಯವಾಗಿ ರಸ್ತೆಗೆ ಬಂದು ಅವಾಜ್ ಹಾಕಿದ ಕಾರ್​ ಚಾಲಕನಿಗೆ ಲೇಡಿ ಪೊಲೀಸ್ ಪಂಚ್ ಕೊಟ್ಟಿದ್ದಾರೆ

ಲಾಕ್​ಡೌನ್ ಉಲ್ಲಂಘಿಸಿದರೆ ಬಿಡಲ್ಲ, ವಾಹನ ಸೀಜ್ ಜೊತೆ ಅರೆಸ್ಟ್ ಮಾಡ್ತಿವಿ | ಬೆಂಗಳೂರು ಪೊಲೀಸ್ ಆಯುಕ್ತ

Published On - 4:57 pm, Sun, 9 May 21

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ