AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕರ ಸಂಕ್ರಾಂತಿ 2022: ಪ್ಲಾಟ್‌ಫಾರ್ಮ್ ಟಿಕೆಟ್ ದರ ಏರಿಕೆ ಮಾಡಿದ ಭಾರತೀಯ ರೈಲ್ವೆ, ಎಲ್ಲೆಲ್ಲಿ ದರ ಏರಿಕೆ?

Makar Sankranti 2022 ಕೊವಿಡ್-19 ಪ್ರಕರಣಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಜನಸಂದಣಿಯ ಹರಿವನ್ನು ನಿಯಂತ್ರಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರತೀಯ ರೈಲ್ವೆ ಹೇಳಿದೆ.

ಮಕರ ಸಂಕ್ರಾಂತಿ 2022: ಪ್ಲಾಟ್‌ಫಾರ್ಮ್ ಟಿಕೆಟ್ ದರ ಏರಿಕೆ ಮಾಡಿದ ಭಾರತೀಯ ರೈಲ್ವೆ, ಎಲ್ಲೆಲ್ಲಿ ದರ ಏರಿಕೆ?
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jan 11, 2022 | 11:29 AM

Share

ಭಾರತೀಯ ರೈಲ್ವೆಯ ದಕ್ಷಿಣ ಮಧ್ಯ ವಲಯ (SCR) ಮಕರ ಸಂಕ್ರಾಂತಿ (Makar Sankranti) ಹಬ್ಬದ ಸಮಯದಲ್ಲಿ ಜನವರಿ 20 ರವರೆಗೆ ರೈಲ್ವೆ ಪ್ಲಾಟ್‌ಫಾರ್ಮ್ ಟಿಕೆಟ್  ದರವನ್ನು(Platform Ticket) ಹೆಚ್ಚಿಸಿದೆ. “ಮುಂದಿನ ಸಂಕ್ರಾಂತಿ ಹಬ್ಬದ ಋತುವಿನ ದೃಷ್ಟಿಯಿಂದ ಸಿಕಂದರಾಬಾದ್, ಹೈದರಾಬಾದ್, ಲಿಂಗಂಪಲ್ಲಿ ಮತ್ತು ಬೇಗಂಪೇಟ್ ರೈಲು ನಿಲ್ದಾಣ ಮತ್ತು ಸಿಕದರಾಬಾದ್ ವಿಭಾಗದ ಇತರ ಪ್ರಮುಖ ರೈಲು ನಿಲ್ದಾಣಗಳಲ್ಲಿ ರೈಲು ಪ್ರಯಾಣಿಕರು ಮತ್ತು ಪ್ರಯಾಣಿಕರ ಜತೆಯಾಗಿ ಬರುವವರು ಹೆಚ್ಚಿನ ಸಂಖ್ಯೆಯಲ್ಲಿರಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಎಸ್​​ಸಿಆರ್ ಪತ್ರಿಕಾ ಪ್ರಕಟಣೆ ತಿಳಿಸಿದೆ. ಕೊವಿಡ್-19 (Covid 19) ಪ್ರಕರಣಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಜನಸಂದಣಿಯ ಹರಿವನ್ನು ನಿಯಂತ್ರಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಸಂಕ್ರಾಂತಿ ಹಬ್ಬದ ಋತುವಿನಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ದರದಲ್ಲಿ ಜನವರಿ8- 20ನೇ ತಾರೀಖಿನವರೆಗೆ ತಾತ್ಕಾಲಿಕ ಹೆಚ್ಚಳ ಮಾಡಲಾಗಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ಟ್ವೀಟ್ ಮಾಡಿದೆ.

ಮಕರ ಸಂಕ್ರಾಂತಿಯ ಹಬ್ಬವನ್ನು ಭಾರತದಲ್ಲಿ ಜನವರಿ 15 ರಂದು ಆಚರಿಸಲಾಗುತ್ತದೆ. ಇದರ ಮಹತ್ವವು ಸೂರ್ಯನ ಮಕರ ಸಂಕ್ರಾಂತಿಯ ಪ್ರವೇಶದೊಂದಿಗೆ ಸಂಬಂಧಿಸಿದೆ. ಸೂರ್ಯದೇವನು ಧನು ರಾಶಿಯನ್ನು ಬಿಟ್ಟು ಮಕರ ರಾಶಿಯನ್ನು ಪ್ರವೇಶಿಸಿದಾಗ, ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಹಬ್ಬವನ್ನು ಯಾವಾಗಲೂ ಜನವರಿ 14 ಅಥವಾ 15 ರಂದು ಆಚರಿಸಲಾಗುತ್ತದೆ. ಒಂದು ವರ್ಷದಲ್ಲಿ ಸೂರ್ಯನು 12 ರಾಶಿಚಕ್ರ ಚಿಹ್ನೆಗಳ ಮೂಲಕ ಸಾಗುತ್ತಾನೆ ಮತ್ತು ಅದು ಪ್ರವೇಶಿಸುವ ರಾಶಿಯನ್ನು ಅದರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಈ ವರ್ಷ ಸೂರ್ಯನು ಜನವರಿ 14 ರಂದು ಮಕರ ರಾಶಿಯನ್ನು ಪ್ರವೇಶಿಸುತ್ತಾನೆ.

ಈಗ ಚಾಲ್ತಿಯಲ್ಲಿರುವ ಮತ್ತು ಪ್ರಸ್ತಾವಿತ ದರಗಳು ಇಲ್ಲಿವೆ:

ಸಿಕಂದರಾಬಾದ್: 10 ರಿಂದ 50 ರೂ ಹೈದರಾಬಾದ್: 10 ರಿಂದ 20 ರೂ ವಾರಂಗಲ್: 10 ರಿಂದ 20 ರೂ ಖಮ್ಮಂ: 10 ರಿಂದ 20 ರೂ ಲಿಂಗಂಪಲ್ಲಿ: 10 ರಿಂದ 20 ರೂ ಕಾಜಿಪೇಟೆ: 10 ರಿಂದ 20 ರೂ ಮಹಬೂಬಾಬಾದ್: 10 ರಿಂದ 20 ರೂ ರಾಮಗುಂಡಂ: 10 ರಿಂದ 20 ರೂ ಮಂಚಿರ್ಯಾಲ್: 10 ರಿಂದ 20 ರೂ ಭದ್ರಾಚಲಂ ರಸ್ತೆ: 10 ರಿಂದ 20 ರೂ ವಿಕಾರಾಬಾದ್: 10 ರಿಂದ 20 ರೂ ತಾಂಡೂರು: 10 ರಿಂದ 20 ರೂ ಬೀದರ್: 10 ರಿಂದ 20 ರೂ ಪಾರ್ಲಿ ವೈಜನಾಥ್: 10 ರಿಂದ 20 ರೂ ಬೇಗಂಪೇಟೆ: 10 ರಿಂದ 20 ರೂ.

ಇದನ್ನೂ ಓದಿ: Makar Sankranti 2022: ಮಕರ ಸಂಕ್ರಾಂತಿಯಂದು 75 ಲಕ್ಷ ಜನರಿಂದ ಸೂರ್ಯ ನಮಸ್ಕಾರ

Published On - 11:27 am, Tue, 11 January 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ