AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇನ್ನು 3-4ತಿಂಗಳಲ್ಲಿ ಎಲ್ಲ ನಾಗರಿಕರಿಗೂ ಲಸಿಕೆ ಕೊಟ್ಟು ಮುಗಿಯಬೇಕು.. ’-ಉತ್ತರ ಪ್ರದೇಶ ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ

ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ಜೀವರಕ್ಷಕ ಔಷಧಿಗಳು, ಪಲ್ಸ್ ಆಕ್ಸಿಮೀಟರ್​, ಆಕ್ಸಿಜನ್​ ಸಿಲಿಂಡರ್​​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೀಗೆ ವಶಪಡಿಸಿಕೊಂಡಿರುವ ಉಪಕರಣಗಳನ್ನು ಶೀಘ್ರವೇ ಬಳಕೆಗೆ ಮುಕ್ತಗೊಳಿಸಲು ಕೋರ್ಟ್ ಆದೇಶಿಸಿದೆ.

‘ಇನ್ನು 3-4ತಿಂಗಳಲ್ಲಿ ಎಲ್ಲ ನಾಗರಿಕರಿಗೂ ಲಸಿಕೆ ಕೊಟ್ಟು ಮುಗಿಯಬೇಕು.. ’-ಉತ್ತರ ಪ್ರದೇಶ ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ
ಅಲಹಾಬಾದ್​ ಹೈಕೋರ್ಟ್​
Lakshmi Hegde
|

Updated on: May 08, 2021 | 1:27 PM

Share

ಪ್ರಯಾಗ್​ರಾಜ್​: ಇನ್ನು ಮೂರು-ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ಎಲ್ಲರಿಗೂ ಲಸಿಕೆ ಹಾಕಲು ವ್ಯವಸ್ಥೆ ಮಾಡಬೇಕು ಎಂದು ಅಲಹಾಬಾದ್ ಹೈಕೋರ್ಟ್​ ಶುಕ್ರವಾರ ಉತ್ತರಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಿದೆ. ಅಲ್ಲದೆ, ಟೆಂಡರ್​ ಮೂಲಕ ವ್ಯಾಕ್ಸಿನ್ ಖರೀದಿ ಮಾಡುವುದು ಸುದೀರ್ಘ ಪ್ರಕ್ರಿಯೆ ಎಂದೂ ಹೇಳಿದೆ.

ರಾಜ್ಯದಲ್ಲಿ ಕೊವಿಡ್​ 19 ವಿರುದ್ಧದ ಹೋರಾಟ, ನಿಯಂತ್ರಣಕ್ಕೆ ಸರ್ಕಾರದ ಸಿದ್ಧತೆ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಇಬ್ಬರು ನ್ಯಾಯಾಧೀಶರುಳ್ಳ ಪೀಠ, ಉತ್ತರ ಪ್ರದೇಶ ಸರ್ಕಾರ ತ್ವರಿತಗತಿಯಲ್ಲಿ ಲಸಿಕೆ ಖರೀದಿ ಮಾಡಿ, ನಾಗರಿಕರಿಗೆ ನೀಡಲು ಶುರು ಮಾಡಬೇಕು. ಹಾಗಾದರೆ ಮಾತ್ರ ಇನ್ನು 2-4 ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಸಂಪೂರ್ಣವಾಗಿ ಲಸಿಕೆ ನೀಡಬಹುದಾಗಿದೆ ಎಂದು ಅಲಹಾಬಾದ್​ ಹೈಕೋರ್ಟ್ ತಿಳಿಸಿದೆ.

ಲಸಿಕೆಗಳ ಖರೀದಿ, ಸಂಗ್ರಹಕ್ಕೆ ಸಂಬಂಧಪಟ್ಟಂತೆ ನೀವು ಯಾವ ಯೋಜನೆಗಳನ್ನು ರೂಪಿಸಿಕೊಂಡಿದ್ದೀರಿ, ಗ್ರಾಮೀಣ ಮತ್ತು ಅರೆನಗರ ಪ್ರದೇಶಗಳಲ್ಲಿ ಕೊವಿಡ್ 19 ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳು, ಚೈನ್​ ಬ್ರೇಕ್​ ಮಾಡಲು ರೂಪಿಸಿರುವ ಯೋಜನೆಗಳ ಬಗ್ಗೆ ಮಾಹಿತಿಯುಳ್ಳ ಒಂದು ಅಫಿಡಿವಿಟ್​ನ್ನು ಮುಂದಿನ ವಿಚಾರಣೆಯೊಳಗೆ ಸಲ್ಲಿಸಬೇಕು ಎಂದು ಹೈಕೋರ್ಟ್, ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಸೂಚನೆ ನೀಡಿದೆ. ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ಜೀವರಕ್ಷಕ ಔಷಧಿಗಳು, ಪಲ್ಸ್ ಆಕ್ಸಿಮೀಟರ್​, ಆಕ್ಸಿಜನ್​ ಸಿಲಿಂಡರ್​​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೀಗೆ ವಶಪಡಿಸಿಕೊಂಡಿರುವ ಉಪಕರಣಗಳನ್ನು ಶೀಘ್ರವೇ ಬಳಕೆಗೆ ಮುಕ್ತಗೊಳಿಸಿ. ಮುಂದೆ ಕೂಡ ಯಾವುದೇ ಇಂಥ ಪ್ರಕರಣಗಳು ನಡೆದರೂ, ಪೊಲೀಸರು ವಶಪಡಿಸಿಕೊಂಡ ಒಂದೇ ವಾರದಲ್ಲಿ ಅದನ್ನು ಬಳಕೆಗೆ ಮುಕ್ತಗೊಳಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ಇನ್ನು ಪಂಚಾಯತ್​ ಚುನಾವಣೆಯಲ್ಲಿ ಚುನಾವಣಾ​ ಅಧಿಕಾರಿಗಳಾಗಿ ಪಾಲ್ಗೊಂಡಿದ್ದ ಶಿಕ್ಷಕರು ಮೃತಪಟ್ಟ ವಿಚಾರದ ಬಗ್ಗೆ ಸಲ್ಲಿಕೆಯಾದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್​, ಚುನಾವಣೆ ಸಂದರ್ಭದಲ್ಲಿ ಎಲ್ಲ ರೀತಿಯ ಕೊವಿಡ್ 19 ನಿಯಂತ್ರಣಾ ಶಿಷ್ಟಾಚಾರಗಳನ್ನು ಪಾಲಿಸಲಾಗಿತ್ತೇ ಎಂಬುದನ್ನು ಪರಿಶೀಲನೆ ಮಾಡುವ ಅಗತ್ಯವಿದ್ದು, ನಮಗೆ ಸಿಸಿಟಿವಿ ಫೂಟೇಜ್​ ಹಾಗೂ ಮೃತ ಚುನಾವಣಾ ಅಧಿಕಾರಿಗಳ ನಿಖರ ಸಂಖ್ಯೆ ಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ತಿಳಿಸಿದೆ. ವಿಚಾರಣೆಯನ್ನು ಮೇ 11ಕ್ಕೆ ಮುಂದೂಡಿದೆ.

ಇದನ್ನೂ ಓದಿ: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಮೇ.11ರ ಒಳಗೆ ಸಿಸಿ ಕ್ಯಾಮರಾ ಅಳವಡಿಸಬೇಕು: ಆರೋಗ್ಯ ಇಲಾಖೆ

ಕಡಪಾ ಕ್ವಾರಿಯಲ್ಲಿ ಮಹಾ ದುರಂತ; 10 ಕಾರ್ಮಿಕರು ದುರ್ಮರಣ, ಸಾವಿನ ಸಂಖ್ಯೆ ಏರುವ ಸಾಧ್ಯತೆ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ