AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DOLO-650ಯನ್ನು ವೈದ್ಯರು ರೋಗಿಗಳಿಗೆ ಶಿಫಾರಸು ಮಾಡುವುದಕ್ಕಾಗಿ ₹1,000 ಕೋಟಿ ವ್ಯಯಿಸಿದ ಡೊಲೊ ಕಂಪನಿ

ಫೆಡರೇಶನ್ ಆಫ್ ಮೆಡಿಕಲ್ ಮತ್ತು ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಂಜಯ್ ಪಾರಿಖ್, ರೋಗಿಗಳಿಗೆ ಜ್ವರ ನಿವಾರಕ ಔಷಧವಾಗಿ ಈ ಟ್ಯಾಬ್ಲೆಟ್ ಶಿಫಾರಸು ಮಾಡಲು DOLO ತಯಾರಕರು 1,000 ಕೋಟಿ ಮೌಲ್ಯದ ಉಚಿತ ಕೊಡುಗೆಗಳನ್ನು..

DOLO-650ಯನ್ನು ವೈದ್ಯರು ರೋಗಿಗಳಿಗೆ ಶಿಫಾರಸು ಮಾಡುವುದಕ್ಕಾಗಿ ₹1,000 ಕೋಟಿ ವ್ಯಯಿಸಿದ ಡೊಲೊ ಕಂಪನಿ
ಡೊಲೊ 650
TV9 Web
| Edited By: |

Updated on:Aug 18, 2022 | 3:40 PM

Share

ದೆಹಲಿ: ಡೊಲೊ-650 (DOLO-650) ಟ್ಯಾಬ್ಲೆಟ್ ತಯಾರಕರು ಟ್ಯಾಬ್ಲೆಟ್ ಅನ್ನು ಶಿಫಾರಸು ಮಾಡಲು ವೈದ್ಯರಿಗೆ ₹ 1,000 ಕೋಟಿ ಮೌಲ್ಯದ 50 ಉಚಿತ ಕೊಡುಗೆ ವಿತರಿಸಿದ್ದಾರೆ ಎಂದು ನೇರ ತೆರಿಗೆಗಳ ಕೇಂದ್ರ ಮಂಡಳಿಯು ಆರೋಪಿಸಿರುವುದಾಗಿ ಮೆಡಿಕಲ್ ರೆಪ್ರೆಸೆಂಟೇಟಿವ್ಸ್ ಸಂಸ್ಥೆ ಗುರುವಾರ ಸುಪ್ರೀಂಕೋರ್ಟ್‌ಗೆ (Supreme Court) ತಿಳಿಸಿದೆ. ಫೆಡರೇಶನ್ ಆಫ್ ಮೆಡಿಕಲ್ ಮತ್ತು ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಂಜಯ್ ಪಾರಿಖ್, ರೋಗಿಗಳಿಗೆ ಜ್ವರ ನಿವಾರಕ ಔಷಧವಾಗಿ ಈ ಟ್ಯಾಬ್ಲೆಟ್  ಶಿಫಾರಸು ಮಾಡಲು DOLO ತಯಾರಕರು 1,000 ಕೋಟಿ ಮೌಲ್ಯದ ಉಚಿತ ಕೊಡುಗೆಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ. ವನ್ಯಾಯಮೂರ್ತಿ ಎಎಸ್ ಬೋಪಣ್ಣ ಜತೆ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಕೊವಿಡ್ ಸಮಯದಲ್ಲಿ ನನಗೂ ಡೊಲೊ ಬಳಸುವಂತೆ ನಿರ್ದೇಶಿಸಲಾಗಿತ್ತು. ಇದು ತುಂಬಾ ಗಂಭೀರ ವಿಷಯ ಎಂದಿದ್ದಾರೆ. ಇದೇನೂ ಹಿತಕರವಾದ ಸಂಗತಿಯಲ್ಲ. ನನಗೆ ಕೊವಿಡ್ ಬಂದಾಗ ಇದನ್ನೇ ನೀಡಲಾಗಿತ್ತು. ಇದು ಗಂಭೀರ ಪ್ರಕರಣ ಮತ್ತು ಸಂಗತಿ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆಎಂ ನಟರಾಜ್ ಅವರಲ್ಲಿ 10 ದಿನಗಳೊಳಗ ಪ್ರತಿಕ್ರಿಯಿಸುವಂತೆ ನ್ಯಾಯಾಲಯ ಹೇಳಿದೆ.

ವೈದ್ಯರು ತಮ್ಮ ಔಷಧಿಗಳನ್ನು ಶಿಫಾರಸು ಮಾಡಲು ಉಚಿತ ಕೊಡುಗೆ ನೀಡುತ್ತಿರುವ ಔಷಧೀಯ ಕಂಪನಿಗಳನ್ನು ಹೊಣೆಗಾರರನ್ನಾಗಿ ಮಾಡಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಫೆಡರೇಷನ್ ಆಫ್ ಮೆಡಿಕಲ್ ಆಂಡ್ ಸೇಲ್ಸ್ ರೆಪ್ರಸೆಂಟೇಟಿವ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಸಲ್ಲಿಸಿದ ಮನವಿಯಲ್ಲಿ ಯೂನಿಫಾರ್ಮ್ ಕೋಡ್ ಆಫ್ ಫಾರ್ಮಾಸ್ಯುಟಿಕಲ್ ಮಾರ್ಕೆಟಿಂಗ್ ಪ್ರಾಕ್ಟೀಸಸ್ (UCPMP) ಗೆ ಶಾಸನಬದ್ಧ ಬೆಂಬಲವನ್ನು ನೀಡಲು ನಿರ್ದೇಶನವನ್ನು ಕೋರಲಾಗಿದೆ.

ಕೊವಿಡ್ ಸಾಂಕ್ರಾಮಿಕದ ಸಮಯದಲ್ಲಿ ರೆಮ್ಡಿಸಿವಿರ್ ಔಷಧಿಯ ಅತಿಯಾದ ಮಾರಾಟ ಮತ್ತು ವೈದ್ಯರು ಶಿಫಾರಸು ಮಾಡಿದ್ದನ್ನು ಉದಾಹರಣೆಯಾಗಿ ಅರ್ಜಿದಾರರು ಸೂಚಿಸಿದ್ದಾರೆ. ನ್ಯಾಯವಾದಿ ಅಪರ್ಣಾ ಭಟ್ ಮೂಲಕ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ಆರೋಗ್ಯದ ಹಕ್ಕು ಜೀವನದ ಹಕ್ಕಿನ ಒಂದು ಭಾಗವಾಗಿದೆ. ನೈತಿಕ ಮಾರ್ಕೆಟಿಂಗ್ ವಿಧಾನ ಅನುಸರಿಸುವ ಔಷಧೀಯ ಕಂಪನಿಗಳು ಅದಕ್ಕೆ ಅತ್ಯಗತ್ಯ ಎಂದು ಹೇಳಿದ್ದಾರೆ.

ಯುಸಿಪಿಎಂಪಿಗೆ ಯಾವುದೇ ಶಾಸನಬದ್ಧ ಆಧಾರದ ಅನುಪಸ್ಥಿತಿಯಲ್ಲಿ ಅಂತಹ  ವಿಧಾನಗಳನ್ನು  ನಿಷೇಧಿಸುವ ಯಾವುದೇ ಕಾನೂನು ಅಥವಾ ನಿಯಂತ್ರಣವು ಪ್ರಸ್ತುತ ಇಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಭ್ರಷ್ಟಾಚಾರದ ವಿರುದ್ಧದ ಯುಎನ್ ಕನ್ವೆನ್ಷನ್‌ಗೆ ಸಹಿ ಹಾಕಿದ್ದರೂ ಭಾರತದಲ್ಲಿ ಔಷಧೀಯ ಮಾರುಕಟ್ಟೆ ಅಭ್ಯಾಸಗಳಲ್ಲಿನ ಭ್ರಷ್ಟಾಚಾರವನ್ನು ಅನಿಯಂತ್ರಿತವಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಉಡುಗೊರೆಗಳು, ಮನರಂಜನೆ, ಆತಿಥ್ಯ ಮತ್ತು ಇತರ ಅನುಕೂಲಗಳಿಗೆ ಬದಲಾಗಿ ವೈದ್ಯರು ಹೆಚ್ಚು ಶಿಫಾರಸು ಮಾಡಿದ  ಬ್ರಾಂಡೆಡ್ ಔಷಧಿಗಳಿಗೆ ಗ್ರಾಹಕರು ಹೆಚ್ಚಿನ ಹಣವನ್ನು ಪಾವತಿಸುವ ಪರಿಸ್ಥಿತಿಗೆ ಇದು ಕಾರಣವಾಗುತ್ತದೆ. ಇಂಥಾ ಔಷಧಗಳು ಮತ್ತು ವಿಷ ಪದಾರ್ಥಗಳು ಜನರ ಜೀವ ಮತ್ತು ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ಆದರೆ ಆರೋಪ ಮುಕ್ತವಾಗಿ ಹೊರನಡೆಯುವ ಫಾರ್ಮಾಸ್ಯುಟಿಕಲ್ ಕಂಪನಿಗಳ ದುರ್ವರ್ತನೆಗಾಗಿ ವೈದ್ಯರಿಗೆ ಕೂಡಾ ದಂಡ ವಿಧಿಸಬಹುದು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಅರ್ಜಿದಾರರು ಯುಸಿಪಿಎಂಪಿ ಶಾಸನಬದ್ಧ ಆಧಾರವನ್ನು ನೀಡಲು ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿದ್ದಾರೆ. ಅದೇ ವೇಳೆ ಸುಪ್ರೀಂಕೋರ್ಟ್ ಅಂತಹ ಮಾರ್ಗಸೂಚಿಗಳನ್ನು ನೀಡುವಂತೆ ಅಥವಾ ಯುಸಿಪಿಎಂಪಿ ಬದ್ಧತೆಯನ್ನು ತನಗೆ ಸರಿಹೊಂದುವಂತೆ ಮಾಡುವಂತೆ ಕೋರಲಾಗಿದೆ. ಕೊನೆಯ ವಿಚಾರಣೆಯ ನಂತರ ಸರ್ಕಾರ UCPMP ಕರಡು ಬಿಡುಗಡೆ ಮಾಡಿದ್ದು ಪ್ರತಿಕ್ರಿಯೆಗಳನ್ನು ಆಹ್ವಾನಿಸಿದೆ.

Published On - 3:00 pm, Thu, 18 August 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ