AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohamed Muizzu: ಅ. 7ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು

ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು ಅಕ್ಟೋಬರ್ 7ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತ ಮತ್ತು ಮಾಲ್ಡೀವ್ಸ್ ಸೆಪ್ಟೆಂಬರ್ ಆರಂಭದಿಂದಲೂ ಮುಯಿಝು ಅವರ ಭೇಟಿಗಾಗಿ ತಯಾರಿ ನಡೆಸಿದ್ದವು, ಜೂನ್ 9 ರಂದು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಅವರು ನವದೆಹಲಿಗೆ ಭೇಟಿ ನೀಡಿದ ನಂತರ ಭಾರತಕ್ಕೆ ಇದು ಎರಡನೇ ಪ್ರವಾಸವಾಗಲಿದೆ.

Mohamed Muizzu: ಅ. 7ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು
ಮುಯಿಝು
ನಯನಾ ರಾಜೀವ್
|

Updated on: Oct 04, 2024 | 2:15 PM

Share

ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು ಅಕ್ಟೋಬರ್ 7ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತ ಮತ್ತು ಮಾಲ್ಡೀವ್ಸ್ ಸೆಪ್ಟೆಂಬರ್ ಆರಂಭದಿಂದಲೂ ಮುಯಿಝು ಅವರ ಭೇಟಿಗಾಗಿ ತಯಾರಿ ನಡೆಸಿದ್ದವು, ಜೂನ್ 9 ರಂದು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಅವರು ನವದೆಹಲಿಗೆ ಭೇಟಿ ನೀಡಿದ ನಂತರ ಭಾರತಕ್ಕೆ ಇದು ಎರಡನೇ ಪ್ರವಾಸವಾಗಲಿದೆ.

ಈ ವರ್ಷದ ಆರಂಭದಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳಿಗಾಗಿ ಮಾಲ್ಡೀವ್ಸ್‌ನ ಸಚಿವಾಲಯದ ಇಬ್ಬರು ಮಂತ್ರಿಗಳನ್ನು ಅಮಾನತುಗೊಳಿಸಲಾಗಿತ್ತು. ಮುಯಿಝು ಮಾಲ್ಡೀವ್ಸ್‌ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಸಂಬಂಧಗಳು ಹದಗೆಟ್ಟಿದ್ದವು.

ಸುಮಾರು 90 ಭಾರತೀಯ ಸೇನಾ ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವಂತೆ ಮುಯಿಝು ಭಾರತವನ್ನು ಕೇಳಿಕೊಂಡಿದ್ದರು. ಭಾರತವು ತನ್ನ ಮಿಲಿಟರಿ ಸಿಬ್ಬಂದಿಯನ್ನು ಮೇ 10 ರೊಳಗೆ ಹಿಂತೆಗೆದುಕೊಂಡಿತು ಮತ್ತು ಡಾರ್ನಿಯರ್ ವಿಮಾನಗಳು ಮತ್ತು ಎರಡು ಹೆಲಿಕಾಪ್ಟರ್‌ಗಳನ್ನು ನಿರ್ವಹಿಸಲು ನಾಗರಿಕ ಸಿಬ್ಬಂದಿಯನ್ನು ನೇಮಿಸಿತು.

ಮತ್ತಷ್ಟು ಓದಿ: ಹೊಸ ಬಾಂಧವ್ಯಕ್ಕಾಗಿ ಹೊಸ ಪ್ರಯತ್ನ; ಮಾಲ್ಡೀವ್ಸ್‌ಗೆ ಭೇಟಿ ನೀಡಲಿದ್ದಾರೆ ಜೈಶಂಕರ್

ಜನವರಿ 2 ಮತ್ತು 3 ರಂದು ಹಲವು ಯೋಜನೆಗಳನ್ನು ಉದ್ಘಾಟಿಸಲು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿಯವರ ವಿರುದ್ಧ ಮಾಲ್ಡೀವ್ಸ್​ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದರು. ನಾಯಕರಾಗಲಿ ಅಥವಾ ಸಾಮಾನ್ಯ ವ್ಯಕ್ತಿಯಾಗಲಿ ಯಾರನ್ನೂ ಆ ರೀತಿ ಅವಮಾನಿಸುವುದನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ ಖ್ಯಾತಿ ಇದೆ ಎಂದು ಅವರು ಮುಯಿಝು ಹೇಳಿದ್ದರು.

ಸಾವಿರಾರು ಪ್ರವಾಸಿಗರು ತಮ್ಮ ಯೋಜಿತ ಪ್ರವಾಸಗಳನ್ನು ರದ್ದುಗೊಳಿಸಿದರು, ಇದರ ಪರಿಣಾಮವಾಗಿ ಮಾಲ್ಡೀವ್ಸ್‌ಗೆ ಭಾರಿ ನಷ್ಟ ಉಂಟಾಗಿದೆ- ಅದರ ಪ್ರವಾಸೋದ್ಯಮ ಉದ್ಯಮದ ಮೇಲೆ ಹೆಚ್ಚು ಅವಲಂಬಿತವಾಗಿದೆ. ಕಾಲಾನಂತರದಲ್ಲಿ, ಪ್ರಧಾನಿ ಮೋದಿಯವರ ಪ್ರಮಾಣವಚನ ಸಮಾರಂಭಕ್ಕೆ ಮುಯಿಝು ಅವರನ್ನು ಆಹ್ವಾನಿಸಿದ್ದರಿಂದ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಮುನಿಸು ಸ್ವಲ್ಪ ಕಡಿಮೆಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!