AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maldives: ಮೇ 10ರೊಳಗೆ ದೇಶ ಬಿಟ್ಟು ಹೋಗಿ: ಭಾರತೀಯ ಮಿಲಿಟರಿಗೆ ಮಾಲ್ಡೀವ್ಸ್ ಅಧ್ಯಕ್ಷರಿಂದ ಡೆಡ್​ಲೈನ್

ಮೇ 10ರೊಳಗೆ ಭಾರತೀಯ ಮಿಲಿಟರಿಯವರು ನಾಗರಿಕರ ಪೋಷಾಕಿನಲ್ಲಿರಲಿ, ಹೇಗೇ ಇರಲಿ, ಮಾಲ್ಡೀವ್ಸ್​ನಿಂದ ಜಾಗ ಖಾಲಿ ಮಾಡಬೇಕು ಎಂದು ಅಧ್ಯಕ್ಷ ಮೊಹಮ್ಮದ್ ಮುಯಿಜು ಹೇಳಿದ್ದಾರೆ. ಮಾಲ್ಡೀವ್ಸ್​ನಲ್ಲಿ ಭಾರತದ 88 ಮಿಲಿಟರಿ ಸಿಬ್ಬಂದಿ ಮಾಲ್ಡೀವ್ಸ್​ನಲ್ಲಿ ಎರಡು ಹೆಲಿಕಾಪ್ಟರ್ ಮತ್ತು ಒಂದು ವಿಮಾನವನ್ನು ನಿರ್ವಹಿಸುತ್ತಿದ್ದಾರೆ. ಇವುಗಳು ಮಾನವೀಯ ರಕ್ಷಣಾ ಕಾರ್ಯಗಳಿಗೆ ಬಳಸಲಾಗುತ್ತಿದೆ. ಈ ಯಾವ 88 ಭಾರತೀಯ ಸೈನಿಕರು ಮಾಲ್ಡೀವ್ಸ್​ನಲ್ಲಿ ಇರುವಂತಿಲ್ಲ ಎಂದು ಮುಯಿಜು ಮಾಡುತ್ತಿರುವ ತಾಕೀತಾಗಿದೆ.

Maldives: ಮೇ 10ರೊಳಗೆ ದೇಶ ಬಿಟ್ಟು ಹೋಗಿ: ಭಾರತೀಯ ಮಿಲಿಟರಿಗೆ ಮಾಲ್ಡೀವ್ಸ್ ಅಧ್ಯಕ್ಷರಿಂದ ಡೆಡ್​ಲೈನ್
ಮೊಹಮ್ಮದ್ ಮುಯಿಜು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 05, 2024 | 4:29 PM

Share

ನವದೆಹಲಿ, ಮಾರ್ಚ್ 5: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು (Mohamed Muizzu) ಅವರ ಭಾರತ ವಿರೋಧಿ ಮಾತು ಎಗ್ಗಿಲ್ಲದೇ ಮುಂದುವರಿಯುತ್ತಿದೆ. ಮೇ 10ರೊಳಗೆ ಎಲ್ಲಾ ಭಾರತೀಯ ತುಕಡಿಗಳು ಮಾಲ್ಡೀವ್ಸ್ ನೆಲದಿಂದ ಕಾಲ್ತೆಗೆಯಬೇಕು ಎಂದು ಅವರು ಮತ್ತೆ ತಾಕೀತು ಮಾಡಿದ್ದಾರೆ. ಬಾ ಅತೋಲ್ (Ba Atoll) ಎಂಬಲ್ಲಿ ಸಾರ್ವಜನಿಕ ಸಮಾವೇಶದ ವೇಳೆ ಮುಯಿಜು ಅವರ ಭಾರತ ವಿರೋಧಿ ಮಾತುಗಳು ಕೇಳಿಬಂದವು. ಮೇ 10ರ ನಂತರ ಯಾವ ಭಾರತೀಯ ಮಿಲಿಟರಿ ಸಿಬ್ಬಂದಿಯೂ ಮಾಲ್ಡೀವ್ಸ್​ನಲ್ಲಿ ಇರುವುದಿಲ್ಲ. ನಾಗರಿಕ ಪೋಷಾಕಿನಲ್ಲಿರುವವರೂ ಇಲ್ಲಿಂದ ಜಾಗ ಖಾಲಿ ಮಾಡಬೇಕು ಎಂದು ಮೊಹಮ್ಮದ್ ಮುಯಿಜು ಎಚ್ಚರಿಕೆ ನೀಡಿದ್ದಾರೆ.

ಮಾಲ್ಡೀವ್ಸ್​ನಲ್ಲಿ ಭಾರತದ ಮಿಲಿಟರಿ ವತಿಯಿಂದ ಎರಡು ಹೆಲಿಕಾಪ್ಟರ್ ಮತ್ತು ಒಂದು ಏರ್​ಕ್ರಾಫ್ಟ್​ನ ನಿರ್ವಹಣೆ ಆಗುತ್ತಿದೆ. ಒಟ್ಟು 88 ಮಂದಿ ಸಿಬ್ಬಂದಿ ಇದರಲ್ಲಿ ತೊಡಗಿದ್ದಾರೆ. ಮಾನವ ರಕ್ಷಣಾ ಕಾರ್ಯಗಳಿಗೆ ಇವುಗಳ ಬಳಕೆ ಆಗುತ್ತದೆ. ಈ ಎಲ್ಲಾ 88 ಭಾರತೀಯ ಮಿಲಿಟರಿ ಸಿಬ್ಬಂದಿಯಲ್ಲಿ ಒಬ್ಬರೂ ಕೂಡ ಇರಬಾರದು ಎಂದು ಮೊಹಮ್ಮದ್ ಮುಯಿಜು ಮಾಲ್ಡೀವ್ಸ್ ಅಧ್ಯಕ್ಷರಾಗಿ ಬಂದ ದಿನವೇ ಘಂಟಾಘೋಷವಾಗಿ ಆಜ್ಞೆ ಮಾಡಿದ್ದಾರೆ.

ಇದನ್ನೂ ಓದಿ: ಮಾರಿಷಸ್​ನಲ್ಲಿ ಶಿವರಾತ್ರಿ ಮುನ್ನ ನಡೆದ ಆಚರಣೆ ವೇಳೆ ಅಗ್ನಿ ಅವಘಡ, 6 ಮಂದಿ ಸಾವು

ಕಳೆದ ವಾರವಷ್ಟೇ ಒಂದು ಹೆಲಿಕಾಪ್ಟರ್​ಗೆ ನಿಯೋಜಿಸಿದ್ದ ಮಿಲಿಟರಿ ಸಿಬ್ಬಂದಿಯನ್ನು ಕರೆಸಿಕೊಂಡು, ಅವರ ಜಾಗಕ್ಕೆ ನುರಿತ ನಾಗರಿಕರನ್ನು ಭಾರತ ಕಳುಹಿಸಿದೆ. ಆದರೆ, ನಾಗರಿಕರ ವೇಷ ಹಾಕಿ ಮಿಲಿಟರಿ ಸಿಬ್ಬಂದಿಯನ್ನೇ ಭಾರತ ಕಳುಹಿಸಿದೆ ಎಂಬರ್ಥದಲ್ಲಿ ಅಧ್ಯಕ್ಷರು ಹೇಳಿದ್ದಾರೆ.

ಮೊಹಮ್ಮದ್ ಮುಯಿಜು ಅಧ್ಯಕ್ಷರಾದ ಬಳಿಕ ಚೀನಾ ಜೊತೆ ಹೆಚ್ಚು ಸ್ನೇಹ ಸಂಪಾದನೆ ಮಾಡುತ್ತಿದ್ದಾರೆ. ಮಾಲ್ಡೀವ್ಸ್​ಗೆ ಚೀನಾ ಉಚಿತ ಮಿಲಿಟರಿ ಸಹಾಯ ಮಾಡುವ ಒಪ್ಪಂದಕ್ಕೆ ಎರಡೂ ದೇಶಗಳು ಸಹಿ ಹಾಕಿವೆ. ಅದರ ಬೆನ್ನಲ್ಲೇ ಮುಯಿಜು ತಮ್ಮ ಭಾರತ ವಿರೋಧಿ ಹೇಳಿಕೆಯನ್ನು ಇನ್ನಷ್ಟು ಗಟ್ಟಿಯಾಗಿ ನೀಡುತ್ತಿದ್ದಾರೆ.

ಇದನ್ನೂ ಓದಿ: ಒಂದು ತಿಂಗಳೊಳಗೆ ಕ್ಷಮೆಯಾಚಿಸಿ, ಹಣ ಕಟ್ಟಲು ಸಿದ್ಧರಾಗಿ, ಮೊದಲ ಪತಿಯಿಂದ ಸೀಮಾ ಹೈದರ್​ಗೆ ನೋಟಿಸ್​

ವೈದ್ಯಕೀಯ ಕಾರ್ಯಾಚರಣೆಗೆ ಫ್ಲೈಟ್​ಗಳನ್ನು ನಿರ್ವಹಿಸಲು ಶ್ರೀಲಂಕಾ ಜೊತೆ ಮಾಲ್ಡೀವ್ಸ್ ಒಪ್ಪಂದ ಮಾಡಿಕೊಂಡಿರುವುದೂ ಕೂಡ ಗಮನಾರ್ಹ. ಇವೆಲ್ಲಾ ಬೆಳವಣಿಗೆಯೂ ಭಾರತವನ್ನು ಆದಷ್ಟೂ ದೂರ ಇಡುವ ಮಾಲ್ಡೀವ್ಸ್​ನ ಪ್ರಯತ್ನದ ಭಾಗಗಳೇ ಆಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ