AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರನ್ನು ಕರೆಯಲು ಬರುತ್ತಿರುವ ಮಾಲ್ಡೀವ್ಸ್​ ಪ್ರವಾಸೋದ್ಯಮ ಸಚಿವ ಇಬ್ರಾಹಿಂ

ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್ ಅವರು ವೆಲ್‌ಕಮ್ ಇಂಡಿಯಾ ಉಪಕ್ರಮದ ಅಡಿಯಲ್ಲಿ ಪ್ರವಾಸೋದ್ಯಮ ರೋಡ್‌ಶೋಗಳನ್ನು ನಡೆಸಲು ಇಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಅಭಿಯಾನವು ಬೆಂಗಳೂರು ಸೇರಿದಂತೆ ಮೂರು ಪ್ರಮುಖ ನಗರಗಳಲ್ಲಿ ನಡೆಯಲಿದೆ.

ಬೆಂಗಳೂರಿಗರನ್ನು ಕರೆಯಲು ಬರುತ್ತಿರುವ ಮಾಲ್ಡೀವ್ಸ್​ ಪ್ರವಾಸೋದ್ಯಮ ಸಚಿವ ಇಬ್ರಾಹಿಂ
ಇಬ್ರಾಹಿಂ ಫೈಸಲ್
ನಯನಾ ರಾಜೀವ್
|

Updated on:Jul 29, 2024 | 9:48 AM

Share

ಭಾರತ ಹಾಗೂ ಮಾಲ್ಡೀವ್ಸ್ ಸಂಬಂಧ ಹಳಸಿದ್ದು ಅದನ್ನು ಸರಿಪಡಿಸಲು ಮಾಲ್ಡೀವ್ಸ್​ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್ ಇಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಬೆಂಗಳೂರಿನಲ್ಲೂ ರೋಡ್​ ಶೋ ನಡೆಸುತ್ತಿರುವುದು ವಿಶೇಷ. ಭಾರತೀಯ ಪ್ರವಾಸಿಗರನ್ನು ಆಕರ್ಷಿಸಲು ಪ್ರಮುಖ ನಗರಗಳಲ್ಲಿ ರೋಡ್​ ಶೋ ನಡೆಸಲು ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಮಾಲ್ಡೀವ್ಸ್​ ಸರ್ಕಾರ ವೆಲ್​ಕಮ್ ಇಂಡಿಯಾ ಅಭಿಯಾನದ ನೀಲನಕ್ಷೆ ಸಿದ್ಧಪಡಿಸಿದ್ದು, ಇದರ ಅಡಿಯಲ್ಲಿ ಭಾರತೀಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್​ಗೆ ಭೇಟಿ ನೀಡುವಂತೆ ಮನವಿ ಮಾಡಲಾಗುವುದು.

ಈ ಅಭಿಯಾನದ ಅಡಿಯಲ್ಲಿ ಮಾಲ್ಡೀವ್ಸ್​ ಪ್ರವಾಸೋದ್ಯಮ ಸಚಿವರು ಭಾರತದ ಮೂರು ಪ್ರಮುಖ ನಗರಗಳಲ್ಲಿ ರೋಡ್​ ಶೋಗಳಲ್ಲಿ ಭಾಗವಹಿಸಲಿದ್ದಾರೆ. ಈ ರೋಡ್​ ಶೋಗಳು ದೆಹಲಿ, ಮುಂಬೈ ಹಾಗೂ ಬೆಂಗಳೂರಿನಲ್ಲಿ ನಡೆಯಲಿದೆ.

ಜುಲೈ 30ರಂದು ದೆಹಲಿಯಲ್ಲಿ, ಆಗಸ್ಟ್ 1 ರಂದು ಮುಂಬೈನಲ್ಲಿ, ಆಗಸ್ಟ್ 3ರಂದು ಬೆಂಗಳೂರಿನಲ್ಲಿ ರೋಡ್​ ಶೋಗಳು ನಡೆಯಲಿವೆ. ಭಾರತ ಹಾಗೂ ಮಾಲ್ಡೀವ್ಸ್​ ನಡುವಿನ ಪ್ರವಾಸೋದ್ಯಮ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಈ ವರ್ಷದ ಮೇ ತಿಂಗಳ ಆರಂಭದಲ್ಲಿ ಮಾಲ್ಡೀವ್ಸ್​ನ ಪ್ರವಾಸೋದ್ಯಮ ಸಚಿವರು ಭಾರತೀಯ ಪ್ರವಾಸಿಗರಿಗೆ ಗರಿಷ್ಠ ಸಂಖ್ಯೆಯಲ್ಲಿ ಮಾಲ್ಡೀವ್ಸ್​ಗೆ ಭೇಟಿ ನೀಡುವಂತೆ ಮನವಿ ಮಾಡಿದ್ದರು.

ಮತ್ತಷ್ಟು ಓದಿ: ಭಾರತವಿಲ್ಲದೆ ನಮ್ಮ ಆರ್ಥಿಕತೆ ನಡೆಯಲು ಸಾಧ್ಯವಿಲ್ಲ, ತಪ್ಪಿನ ಅರಿವಾಗಿದೆ, ಭಾರತಕ್ಕೆ ಮಾಲ್ಡೀವ್ಸ್ ವಿದೇಶಾಂಗ ಸಚಿವ ಭೇಟಿ

ಮಾಲ್ಡೀವ್ಸ್​ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ವೇಗವಾಗಿ ಕಡಿಮೆಯಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಜನವರಿ ಮತ್ತು ಏಪ್ರಿಲ್ ನಡುವೆ ಮಾಲ್ಡೀವ್ಸ್​ಗೆ ಬರುವ ಭಾರತೀಯ ಪ್ರವಾಸಿಗರ ಸಂಖ್ಯೆ ಶೇ.42ರಷ್ಟು ಕಡಿಮೆಯಾಗಿದೆ.

ಮಾಲ್ಡೀವ್ಸ್​ ಭಾರತೀಯ ಪ್ರವಾಸಿಗರಿಗೆ ಅತ್ಯಂತ ನೆಚ್ಚಿನ ತಾಣವಾಗಿತ್ತು, ಆದರೆ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾದ ಬಳಿಕ ಮಾಲ್ಡೀವ್ಸ್​ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಪ್ರವಾಸೋದ್ಯಮ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಈ ವರ್ಷದ ಜನವರಿ ಮತ್ತು ಏಪ್ರಿಲ್ ನಡುವೆ 42,638 ಭಾರತೀಯ ಪ್ರವಾಸಿಗರು ಮಾಲ್ಡೀವ್ಸ್​ಗೆ ಭೇಟಿ ನೀಡಿದ್ದಾರೆ. ಆದರೆ, ಕಳೆದ ವರ್ಷ ನಾಲ್ಕು ತಿಂಗಳಲ್ಲಿ 73, 785 ಭಾರತೀಯ ಪ್ರವಾಸಿಗರು ಭೇಟಿ ನೀಡಿದ್ದರು.

ಭಾರತ-ಮಾಲ್ಡೀವ್ಸ್​ ಉದ್ವಿಗ್ನತೆ ಮತ್ತು ಭಾರತೀಯ ಪ್ರವಾಸಿಗರ ಸಂಖ್ಯೆಯಲ್ಲಿನ ಕುಸಿತಕ್ಕೆ ಮುಯಿಝು ಸರ್ಕಾರವನ್ನು ದೂಷಿಸಲಾಗುತ್ತಿದೆ. ಮುಯಿಝು ಕಳೆದ ವರ್ಷ ನವೆಂಬರ್​ನಲ್ಲಿ ಮಾಲ್ಡೀವ್ಸ್ ಅಧ್ಯಕ್ಷರಾದರು, ಆಗಿನಿಂದಲೂ ಉದ್ವಿಗ್ನತೆ ಇದೆ. ಚುನಾವಣಾ ಪ್ರಚಾರದಲ್ಲಿ ಇಂಡಿಯಾ ಔಟ್ ಎನ್ನುವ ಘೋಷಣೆ ನೀಡಿದ್ದರು.

ಉದ್ವಿಗ್ನತೆ ಶುರುವಾಗಿದ್ಹೇಗೆ? ಪ್ರಧಾನಿ ಮೋದಿಯವರು ಲಕ್ಷದ್ವೀಪಕ್ಕೆ ಹೋಗಿದ್ದಾಗ, ಮಾಲ್ಡೀವ್ಸ್​ನ ಮೂರು ಮಂತ್ರಿಗಳು ಮೋದಿಯವರ ಫೋಟೊಗೆ ಕೆಲವು ಆಕ್ಷೇಪಾರ್ಹ ಕಮೆಂಟ್​ಗಳನ್ನು ಮಾಡಿದ್ದರು. ಅಂದಿನಿಂದ ಎರಡು ದೇಶಗಳ ನಡುವೆ ಮುನಿಸು ಶುರುವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:17 am, Mon, 29 July 24

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ