AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುನೋ ಉದ್ಯಾನವನದಲ್ಲಿ ಗಂಡು ಚೀತಾ ಸಾವು; 4 ತಿಂಗಳಲ್ಲಿ ಸತ್ತಿದ್ದು 7 ಚೀತಾ

ಮಧ್ಯಾಹ್ನ 2 ಗಂಟೆ ಸುಮಾರಿಗೆ ಗಂಡು ಚೀತಾ ತೇಜಸ್ ಸಾವಿಗೀಡಾಗಿರುವುದು ಪತ್ತೆಯಾಗಿದೆ. ಆ ಗಾಯಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣವನ್ನು ಕಂಡುಹಿಡಿಯಬಹುದು" ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆಎಸ್ ಚೌಹಾಣ್ ಹೇಳಿದ್ದಾರೆ.

ಕುನೋ ಉದ್ಯಾನವನದಲ್ಲಿ ಗಂಡು ಚೀತಾ ಸಾವು; 4 ತಿಂಗಳಲ್ಲಿ ಸತ್ತಿದ್ದು 7 ಚೀತಾ
ಚೀತಾ
ರಶ್ಮಿ ಕಲ್ಲಕಟ್ಟ
|

Updated on: Jul 11, 2023 | 9:00 PM

Share

ಭೋಪಾಲ್: ಮಧ್ಯಪ್ರದೇಶದ (Madhya Pradesh) ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ಇಂದು ಗಂಡು ಚೀತಾ ಸಾವಿಗೀಡಾಗಿದ್ದು, ನಾಲ್ಕು ತಿಂಗಳಲ್ಲಿ ಏಳು ಚೀತಾಗಳ (cheetah) ಸಾವು ಸಂಭವಿಸಿದೆ. ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಚೀತಾದ ಕತ್ತಿನ ಮೇಲೆ ಗಾಯಗಳನ್ನು ಗಮನಿಸಿದ ಮೇಲ್ವಿಚಾರಣಾ ತಂಡವು ವೈದ್ಯರಿಗೆ ತಿಳಿಸಿದ್ದು, ಅವರು ಪ್ರಾಣಿಯನ್ನು ಪರೀಕ್ಷಿಸಿ ಗಾಯಗಳಿಗೆ ಚಿಕಿತ್ಸೆ ನೀಡಿದ್ದರು. “ಮಧ್ಯಾಹ್ನ 2 ಗಂಟೆ ಸುಮಾರಿಗೆ ಗಂಡು ಚೀತಾ ತೇಜಸ್ ಸಾವಿಗೀಡಾಗಿರುವುದು ಪತ್ತೆಯಾಗಿದೆ. ಆ ಗಾಯಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣವನ್ನು ಕಂಡುಹಿಡಿಯಬಹುದು” ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆಎಸ್ ಚೌಹಾಣ್ ಹೇಳಿದ್ದಾರೆ.

ಮಾರ್ಚ್ 27 ರಂದು, ಸಾಶಾ ಎಂಬ ಹೆಣ್ಣು ಚೀತಾ ಮೂತ್ರಪಿಂಡದ ಕಾಯಿಲೆಯಿಂದ ಸಾವನ್ನಪ್ಪಿತು, ಏಪ್ರಿಲ್ 23 ರಂದು, ಉದಯ್ ಹೃದಯ-ಶ್ವಾಸಕೋಶದ ವೈಫಲ್ಯದಿಂದ ಮತ್ತು ಮೇ 9 ರಂದು, ದಕ್ಷ ಎಂಬ ಹೆಣ್ಣು ಚಿರತೆಯು ಸಂಭೋಗ ಪ್ರಯತ್ನದ ಸಮಯದಲ್ಲಿ ಗಂಡು ಚೀತಾ ಜತೆಗಿನ ಕಾದಾಟದಲ್ಲಿ ಹಿಂಸಾತ್ಮಕ ಸಾವಿಗೀಡಾಗಿತ್ತು. ಎರಡು ಚೀತಾ ಮರಿಗಳು ಮೇ 25 ರಂದು “ತೀವ್ರ ಹವಾಮಾನ ಪರಿಸ್ಥಿತಿ ಮತ್ತು ನಿರ್ಜಲೀಕರಣ” ದಿಂದ ಸಾವನ್ನಪ್ಪಿವೆ.

ಈ ಹಿಂದೆ, ಕೆಎನ್‌ಪಿಯಲ್ಲಿ ಎರಡು ತಿಂಗಳೊಳಗೆ ಮೂರು ಮರಿಗಳು ಸೇರಿದಂತೆ ಆರು ಚೀತಾಗಳ ಸಾವಿನ ಹಿಂದೆ ಕೇಂದ್ರವು ಯಾವುದೇ ಲೋಪವನ್ನು ನಿರಾಕರಿಸಿತು. ಯಾವುದೇ ಚೀತಾ ಸಾವಿನ ಹಿಂದೆ ಯಾವುದೇ ಲೋಪವಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದರು.

ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚೀತಾ ಮರಿಗಳು ಸಾವು, 2 ದಿನಗಳಲ್ಲಿ ಸಾವಿಗೀಡಾಗಿದ್ದು ಮೂರು ಚೀತಾ

ಮೇ ತಿಂಗಳಲ್ಲಿ, ಆರು ಸಾವುಗಳ ನಂತರ, ದಕ್ಷಿಣ ಆಫ್ರಿಕಾದ ವನ್ಯಜೀವಿ ತಜ್ಞ ವಿನ್ಸೆಂಟ್ ವ್ಯಾನ್ ಡೆರ್ ಮೆರ್ವೆ ಮತ್ತಷ್ಟು ಚೀತಾಗಳು ಸಾವಿಗೀಡಾಗುವ ಸಾಧ್ಯತೆ ಇದೆ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ