AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುನೋ ಉದ್ಯಾನವನದಲ್ಲಿ ಗಂಡು ಚೀತಾ ಸಾವು; 4 ತಿಂಗಳಲ್ಲಿ ಸತ್ತಿದ್ದು 7 ಚೀತಾ

ಮಧ್ಯಾಹ್ನ 2 ಗಂಟೆ ಸುಮಾರಿಗೆ ಗಂಡು ಚೀತಾ ತೇಜಸ್ ಸಾವಿಗೀಡಾಗಿರುವುದು ಪತ್ತೆಯಾಗಿದೆ. ಆ ಗಾಯಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣವನ್ನು ಕಂಡುಹಿಡಿಯಬಹುದು" ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆಎಸ್ ಚೌಹಾಣ್ ಹೇಳಿದ್ದಾರೆ.

ಕುನೋ ಉದ್ಯಾನವನದಲ್ಲಿ ಗಂಡು ಚೀತಾ ಸಾವು; 4 ತಿಂಗಳಲ್ಲಿ ಸತ್ತಿದ್ದು 7 ಚೀತಾ
ಚೀತಾ
ರಶ್ಮಿ ಕಲ್ಲಕಟ್ಟ
|

Updated on: Jul 11, 2023 | 9:00 PM

Share

ಭೋಪಾಲ್: ಮಧ್ಯಪ್ರದೇಶದ (Madhya Pradesh) ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ಇಂದು ಗಂಡು ಚೀತಾ ಸಾವಿಗೀಡಾಗಿದ್ದು, ನಾಲ್ಕು ತಿಂಗಳಲ್ಲಿ ಏಳು ಚೀತಾಗಳ (cheetah) ಸಾವು ಸಂಭವಿಸಿದೆ. ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಚೀತಾದ ಕತ್ತಿನ ಮೇಲೆ ಗಾಯಗಳನ್ನು ಗಮನಿಸಿದ ಮೇಲ್ವಿಚಾರಣಾ ತಂಡವು ವೈದ್ಯರಿಗೆ ತಿಳಿಸಿದ್ದು, ಅವರು ಪ್ರಾಣಿಯನ್ನು ಪರೀಕ್ಷಿಸಿ ಗಾಯಗಳಿಗೆ ಚಿಕಿತ್ಸೆ ನೀಡಿದ್ದರು. “ಮಧ್ಯಾಹ್ನ 2 ಗಂಟೆ ಸುಮಾರಿಗೆ ಗಂಡು ಚೀತಾ ತೇಜಸ್ ಸಾವಿಗೀಡಾಗಿರುವುದು ಪತ್ತೆಯಾಗಿದೆ. ಆ ಗಾಯಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣವನ್ನು ಕಂಡುಹಿಡಿಯಬಹುದು” ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆಎಸ್ ಚೌಹಾಣ್ ಹೇಳಿದ್ದಾರೆ.

ಮಾರ್ಚ್ 27 ರಂದು, ಸಾಶಾ ಎಂಬ ಹೆಣ್ಣು ಚೀತಾ ಮೂತ್ರಪಿಂಡದ ಕಾಯಿಲೆಯಿಂದ ಸಾವನ್ನಪ್ಪಿತು, ಏಪ್ರಿಲ್ 23 ರಂದು, ಉದಯ್ ಹೃದಯ-ಶ್ವಾಸಕೋಶದ ವೈಫಲ್ಯದಿಂದ ಮತ್ತು ಮೇ 9 ರಂದು, ದಕ್ಷ ಎಂಬ ಹೆಣ್ಣು ಚಿರತೆಯು ಸಂಭೋಗ ಪ್ರಯತ್ನದ ಸಮಯದಲ್ಲಿ ಗಂಡು ಚೀತಾ ಜತೆಗಿನ ಕಾದಾಟದಲ್ಲಿ ಹಿಂಸಾತ್ಮಕ ಸಾವಿಗೀಡಾಗಿತ್ತು. ಎರಡು ಚೀತಾ ಮರಿಗಳು ಮೇ 25 ರಂದು “ತೀವ್ರ ಹವಾಮಾನ ಪರಿಸ್ಥಿತಿ ಮತ್ತು ನಿರ್ಜಲೀಕರಣ” ದಿಂದ ಸಾವನ್ನಪ್ಪಿವೆ.

ಈ ಹಿಂದೆ, ಕೆಎನ್‌ಪಿಯಲ್ಲಿ ಎರಡು ತಿಂಗಳೊಳಗೆ ಮೂರು ಮರಿಗಳು ಸೇರಿದಂತೆ ಆರು ಚೀತಾಗಳ ಸಾವಿನ ಹಿಂದೆ ಕೇಂದ್ರವು ಯಾವುದೇ ಲೋಪವನ್ನು ನಿರಾಕರಿಸಿತು. ಯಾವುದೇ ಚೀತಾ ಸಾವಿನ ಹಿಂದೆ ಯಾವುದೇ ಲೋಪವಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದರು.

ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚೀತಾ ಮರಿಗಳು ಸಾವು, 2 ದಿನಗಳಲ್ಲಿ ಸಾವಿಗೀಡಾಗಿದ್ದು ಮೂರು ಚೀತಾ

ಮೇ ತಿಂಗಳಲ್ಲಿ, ಆರು ಸಾವುಗಳ ನಂತರ, ದಕ್ಷಿಣ ಆಫ್ರಿಕಾದ ವನ್ಯಜೀವಿ ತಜ್ಞ ವಿನ್ಸೆಂಟ್ ವ್ಯಾನ್ ಡೆರ್ ಮೆರ್ವೆ ಮತ್ತಷ್ಟು ಚೀತಾಗಳು ಸಾವಿಗೀಡಾಗುವ ಸಾಧ್ಯತೆ ಇದೆ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ