Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುನೋ ಉದ್ಯಾನವನದಲ್ಲಿ ಗಂಡು ಚೀತಾ ಸಾವು; 4 ತಿಂಗಳಲ್ಲಿ ಸತ್ತಿದ್ದು 7 ಚೀತಾ

ಮಧ್ಯಾಹ್ನ 2 ಗಂಟೆ ಸುಮಾರಿಗೆ ಗಂಡು ಚೀತಾ ತೇಜಸ್ ಸಾವಿಗೀಡಾಗಿರುವುದು ಪತ್ತೆಯಾಗಿದೆ. ಆ ಗಾಯಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣವನ್ನು ಕಂಡುಹಿಡಿಯಬಹುದು" ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆಎಸ್ ಚೌಹಾಣ್ ಹೇಳಿದ್ದಾರೆ.

ಕುನೋ ಉದ್ಯಾನವನದಲ್ಲಿ ಗಂಡು ಚೀತಾ ಸಾವು; 4 ತಿಂಗಳಲ್ಲಿ ಸತ್ತಿದ್ದು 7 ಚೀತಾ
ಚೀತಾ
Follow us
ರಶ್ಮಿ ಕಲ್ಲಕಟ್ಟ
|

Updated on: Jul 11, 2023 | 9:00 PM

ಭೋಪಾಲ್: ಮಧ್ಯಪ್ರದೇಶದ (Madhya Pradesh) ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ಇಂದು ಗಂಡು ಚೀತಾ ಸಾವಿಗೀಡಾಗಿದ್ದು, ನಾಲ್ಕು ತಿಂಗಳಲ್ಲಿ ಏಳು ಚೀತಾಗಳ (cheetah) ಸಾವು ಸಂಭವಿಸಿದೆ. ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಚೀತಾದ ಕತ್ತಿನ ಮೇಲೆ ಗಾಯಗಳನ್ನು ಗಮನಿಸಿದ ಮೇಲ್ವಿಚಾರಣಾ ತಂಡವು ವೈದ್ಯರಿಗೆ ತಿಳಿಸಿದ್ದು, ಅವರು ಪ್ರಾಣಿಯನ್ನು ಪರೀಕ್ಷಿಸಿ ಗಾಯಗಳಿಗೆ ಚಿಕಿತ್ಸೆ ನೀಡಿದ್ದರು. “ಮಧ್ಯಾಹ್ನ 2 ಗಂಟೆ ಸುಮಾರಿಗೆ ಗಂಡು ಚೀತಾ ತೇಜಸ್ ಸಾವಿಗೀಡಾಗಿರುವುದು ಪತ್ತೆಯಾಗಿದೆ. ಆ ಗಾಯಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣವನ್ನು ಕಂಡುಹಿಡಿಯಬಹುದು” ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆಎಸ್ ಚೌಹಾಣ್ ಹೇಳಿದ್ದಾರೆ.

ಮಾರ್ಚ್ 27 ರಂದು, ಸಾಶಾ ಎಂಬ ಹೆಣ್ಣು ಚೀತಾ ಮೂತ್ರಪಿಂಡದ ಕಾಯಿಲೆಯಿಂದ ಸಾವನ್ನಪ್ಪಿತು, ಏಪ್ರಿಲ್ 23 ರಂದು, ಉದಯ್ ಹೃದಯ-ಶ್ವಾಸಕೋಶದ ವೈಫಲ್ಯದಿಂದ ಮತ್ತು ಮೇ 9 ರಂದು, ದಕ್ಷ ಎಂಬ ಹೆಣ್ಣು ಚಿರತೆಯು ಸಂಭೋಗ ಪ್ರಯತ್ನದ ಸಮಯದಲ್ಲಿ ಗಂಡು ಚೀತಾ ಜತೆಗಿನ ಕಾದಾಟದಲ್ಲಿ ಹಿಂಸಾತ್ಮಕ ಸಾವಿಗೀಡಾಗಿತ್ತು. ಎರಡು ಚೀತಾ ಮರಿಗಳು ಮೇ 25 ರಂದು “ತೀವ್ರ ಹವಾಮಾನ ಪರಿಸ್ಥಿತಿ ಮತ್ತು ನಿರ್ಜಲೀಕರಣ” ದಿಂದ ಸಾವನ್ನಪ್ಪಿವೆ.

ಈ ಹಿಂದೆ, ಕೆಎನ್‌ಪಿಯಲ್ಲಿ ಎರಡು ತಿಂಗಳೊಳಗೆ ಮೂರು ಮರಿಗಳು ಸೇರಿದಂತೆ ಆರು ಚೀತಾಗಳ ಸಾವಿನ ಹಿಂದೆ ಕೇಂದ್ರವು ಯಾವುದೇ ಲೋಪವನ್ನು ನಿರಾಕರಿಸಿತು. ಯಾವುದೇ ಚೀತಾ ಸಾವಿನ ಹಿಂದೆ ಯಾವುದೇ ಲೋಪವಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದರು.

ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚೀತಾ ಮರಿಗಳು ಸಾವು, 2 ದಿನಗಳಲ್ಲಿ ಸಾವಿಗೀಡಾಗಿದ್ದು ಮೂರು ಚೀತಾ

ಮೇ ತಿಂಗಳಲ್ಲಿ, ಆರು ಸಾವುಗಳ ನಂತರ, ದಕ್ಷಿಣ ಆಫ್ರಿಕಾದ ವನ್ಯಜೀವಿ ತಜ್ಞ ವಿನ್ಸೆಂಟ್ ವ್ಯಾನ್ ಡೆರ್ ಮೆರ್ವೆ ಮತ್ತಷ್ಟು ಚೀತಾಗಳು ಸಾವಿಗೀಡಾಗುವ ಸಾಧ್ಯತೆ ಇದೆ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ