AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​​ನಲ್ಲಿ ದನಿಯಡಗಿಸಲು ಕೇಂದ್ರ ಸರ್ಕಾರ ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ

Mallikarjun Kharge : ಫ್ರಾನ್ಸ್ ಮತ್ತು ಇಸ್ರೇಲ್​​ನಂತಹ ದೇಶಗಳು ಈಗಾಗಲೇ ತನಿಖೆಯನ್ನು ಆರಂಭಿಸಿದಾಗ ಪೆಗಾಸಸ್ ವಿವಾದದ ಬಗ್ಗೆ ಏಕೆ ತನಿಖೆಗೆ ಆದೇಶಿಸಿಲ್ಲ ಎಂದು ಖರ್ಗೆ ಸರ್ಕಾರವನ್ನು ಕೇಳಿದ್ದಾರೆ. "ನಿಮಗೆ ತನಿಖೆ ಬೇಡ ಎಂದೋ ಅಥವಾ ಸದನದಲ್ಲಿ ಚರ್ಚೆ ಬೇಡ ಎಂದೋ? ನೀವು (ಸರ್ಕಾರ) ಯಾಕೆ ಹೆದರುತ್ತೀರಿ?" ಎಂದು ಖರ್ಗೆ ಕೇಳಿದ್ದಾರೆ.

ಸಂಸತ್​​ನಲ್ಲಿ ದನಿಯಡಗಿಸಲು ಕೇಂದ್ರ ಸರ್ಕಾರ ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 05, 2021 | 6:59 PM

ದೆಹಲಿ: ಸದನದಲ್ಲಿ ತಮ್ಮ ದನಿಯಡಗಿಸಲು ಕೇಂದ್ರ ಸರ್ಕಾರ ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡಿದೆ ಎಂದು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆರೋಪಿಸಿದ್ದಾರೆ. ಸಮಸ್ಯೆಗಳ ಬಗ್ಗೆ ಅಧ್ಯಕ್ಷರಿಗೆ ನೆನಪಿಸಿದ್ದ ತೃಣಮೂಲ ಕಾಂಗ್ರೆಸ್ (TMC) ನಾಯಕರನ್ನು “ನಿನ್ನೆ (ಬುಧವಾರ) ಅಮಾನತುಗೊಳಿಸಲಾಗಿದೆ. ಕೇಂದ್ರ ಸರ್ಕಾರ ನಮ್ಮನ್ನು ಗುರಿಯಾಗಿಸಲು, ನಮಗೆ ಬೆದರಿಕೆ ಹಾಕಲು ಅಥವಾ ನಮ್ಮ ಧ್ವನಿ ಮತ್ತು ಸಮಸ್ಯೆಗಳನ್ನು ಹತ್ತಿಕ್ಕಲು ನಮ್ಮ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಮತ್ತು ವಿರೋಧ ಪಕ್ಷದಲ್ಲಿರುವ ಇತರ ಪಕ್ಷಗಳು ತಲೆಬಾಗುವುದಿಲ್ಲ. ನಾವು ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಖರ್ಗೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಟಿಎಂಸಿಯ ಆರು ಸಂಸದರು-ಡೋಲಾ ಸೇನ್, ಎಂಡಿ. ನಾಡಿಮುಲ್ ಹಕ್, ಅಬಿರ್ ರಂಜನ್ ಬಿಸ್ವಾಸ್, ಶಾಂತಾ ಛೆಟ್ರಿ, ಅರ್ಪಿತಾ ಘೋಷ್, ಮೌಸಮ್ ನೂರ್ ಘೋಷಣೆ ಕೂಗುತ್ತಾ ಸದನದ ಅಂಗಳಕ್ಕೆ ಪ್ರವೇಶಿಸಿದ್ದು, ನಂತರ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು. ಸಂಸದರು ಪೆಗಾಸಸ್ ಬೇಹುಗಾರಿಕೆ ಪ್ರಕರ , ವಿವಾದಾತ್ಮಕ ಕೃಷಿ ಕಾನೂನುಗಳು ಮತ್ತು ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸುತ್ತಿದ್ದರು.

ಫ್ರಾನ್ಸ್ ಮತ್ತು ಇಸ್ರೇಲ್​​ನಂತಹ ದೇಶಗಳು ಈಗಾಗಲೇ ತನಿಖೆಯನ್ನು ಆರಂಭಿಸಿದಾಗ ಪೆಗಾಸಸ್ ವಿವಾದದ ಬಗ್ಗೆ ಏಕೆ ತನಿಖೆಗೆ ಆದೇಶಿಸಿಲ್ಲ ಎಂದು ಖರ್ಗೆ ಸರ್ಕಾರವನ್ನು ಕೇಳಿದ್ದಾರೆ. “ನಿಮಗೆ ತನಿಖೆ ಬೇಡ ಎಂದೋ ಅಥವಾ ಸದನದಲ್ಲಿ ಚರ್ಚೆ ಬೇಡ ಎಂದೋ? ನೀವು (ಸರ್ಕಾರ) ಯಾಕೆ ಹೆದರುತ್ತೀರಿ?” ಎಂದು ಖರ್ಗೆ ಕೇಳಿದ್ದಾರೆ.

ಸಂಸತ್ತ್ ಕಾರ್ಯನಿರ್ವಹಿಸಲು ಪ್ರತಿಪಕ್ಷಗಳು ಅವಕಾಶ ನೀಡುತ್ತಿಲ್ಲ ಮತ್ತು ಸಮಸ್ಯೆಗಳನ್ನು ಚರ್ಚಿಸಲು ನಿರಾಕರಿಸುತ್ತಿವೆ ಎಂಬ ಸರ್ಕಾರದ ಹೇಳಿಕೆಯನ್ನು ಅವರು ನಿರಾಕರಿಸಿದರು. ಪೆಗಾಸಸ್ ವಿವಾದ, ಹಣದುಬ್ಬರ ಮತ್ತು ಕೃಷಿ ಕಾನೂನುಗಳನ್ನು ಚರ್ಚಿಸುವ ಸರ್ಕಾರದ ಉದ್ದೇಶವನ್ನು ಸೂಚಿಸುವ ಯಾವುದೇ ಸೂಚನೆ ಪ್ರತಿಪಕ್ಷಕ್ಕೆ ಬಂದಿಲ್ಲ ಎಂದು ಖರ್ಗೆ ಹೇಳಿದರು. ಯುನೈಟೆಡ್ ಪ್ರೊಗ್ರೆಸಿವ್ ಅಲೈಯನ್ಸ್ ಆಡಳಿತದ ಅವಧಿಯಲ್ಲಿ, ಬಿಜೆಪಿ ಅತೀ ಹೆಚ್ಚು ಅಡ್ಡಿಗಳನ್ನು ಉಂಟುಮಾಡಿತು ಎಂದು ಅವರು ಹೇಳಿದ್ದಾರೆ.

ಪೆಗಾಸಸ್ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸಿ 14 ವಿರೋಧ ಪಕ್ಷಗಳು ಜಂಟಿ ಪತ್ರಕ್ಕೆ ಸಹಿ ಹಾಕಿದ ಒಂದು ದಿನದ ನಂತರ ಖರ್ಗೆ ಸುದ್ದಿಗೋಷ್ಠಿ ನಡೆಸಿದ್ದಾರೆ.

ಇದನ್ನೂ ಓದಿ:  ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಸೆಲ್ಫ್ ಗೋಲ್ ಹೊಡೆಯುತ್ತಿವೆ: ಪ್ರಧಾನಿ ನರೇಂದ್ರ ಮೋದಿ

ಇದನ್ನೂ ಓದಿ:  Tokyo Olympics: ಭಾರತ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದೀರಿ! ರವಿ ದಹಿಯಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

(Mallikarjun Kharge alleges government is targeting Opposition leaders to suppress their voices in the House)

ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ