AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್​ ನಿಷೇಧಕ್ಕೆ ಸರ್ದಾರ್ ಪಟೇಲ್ ಪತ್ರ ಬರೆದಿದ್ದರು; ಮಲ್ಲಿಕಾರ್ಜುನ ಖರ್ಗೆ

ಇಂದು ಉಕ್ಕಿನ ಮನುಷ್ಯ ಎಂದೇ ಹೆಸರಾದ ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ. ಸರ್ದಾರ್ ಪಟೇಲ್ ಅವರು ಆರ್​ಎಸ್​ಎಸ್​, ಸಂಘ ಪರಿವಾರದ ರೀತಿಯ ಸಂಘಟನೆಗಳ ಚಟುವಟಿಕೆಗಳನ್ನು ನಿಗ್ರಹಿಸುವ ಬಗ್ಗೆ 1948ರಲ್ಲೇ ಪತ್ರ ಬರೆದಿದ್ದರು ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರ್​ಎಸ್​ಎಸ್​ ಅನ್ನು ನಿಷೇಧ ಮಾಡಬೇಕೆಂದು ಪುನರುಚ್ಛರಿಸಿದ್ದಾರೆ. ತಮ್ಮ ಈ ಬೇಡಿಕೆಗೆ ಸರ್ದಾರ್ ಪಟೇಲ್ ಬರೆದಿದ್ದರು ಎನ್ನಲಾದ ಪತ್ರವನ್ನು ಉಲ್ಲೇಖಿಸಿದ್ದಾರೆ.

ಆರ್​ಎಸ್​ಎಸ್​ ನಿಷೇಧಕ್ಕೆ ಸರ್ದಾರ್ ಪಟೇಲ್ ಪತ್ರ ಬರೆದಿದ್ದರು; ಮಲ್ಲಿಕಾರ್ಜುನ ಖರ್ಗೆ
Mallikarjun Kharge
ಸುಷ್ಮಾ ಚಕ್ರೆ
|

Updated on:Oct 31, 2025 | 5:41 PM

Share

ನವದೆಹಲಿ, ಅಕ್ಟೋಬರ್ 31: ಆರ್​ಎಸ್​ಎಸ್​ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ತನ್ನ ಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಈ ನಡುವೆ ದೇಶಾದ್ಯಂತ ಆರ್​ಎಸ್​ಎಸ್​ (RSS) ಅನ್ನು ನಿಷೇಧಿಸಬೇಕೆಂದು ಕಾಂಗ್ರೆಸ್ ಹಾಗೂ ಆರ್​ಜೆಡಿ ಒತ್ತಾಯಿಸುತ್ತಲೇ ಇದೆ. ತಮ್ಮ ಈ ಹಿಂದಿನ ಮನವಿಯನ್ನು ಪುನರುಚ್ಛರಿಸಿರುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳನ್ನು ತಂದೊಡ್ಡುತ್ತಿರುವ ಆರ್​ಎಸ್​ಎಸ್​ ಸಂಘಟನೆಯನ್ನು ಬ್ಯಾನ್ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಭಾರತದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಚೌಕಟ್ಟನ್ನು ರಕ್ಷಿಸಲು ಒಮ್ಮೆ ಸರ್ದಾರ್ ವಲ್ಲಭಭಾಯಿ ಪಟೇಲ್ ಇದೇ ರೀತಿಯ ನಿರ್ಬಂಧಗಳನ್ನು ವಿಧಿಸಿದ್ದರು ಎಂದು ನೆನಪಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ನಿಷೇಧ ಹೇರಬೇಕೆಂದು ಒತ್ತಾಯಿಸಿದ್ದಾರೆ.

“ಆರ್‌ಎಸ್‌ಎಸ್ ಅನ್ನು ನಿಷೇಧಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಸರ್ಕಾರಿ ಸೇವೆಯಲ್ಲಿರುವಾಗ ಆರ್‌ಎಸ್‌ಎಸ್‌ಗಾಗಿ ಕೆಲಸ ಮಾಡಬಾರದು ಎಂದು ಸರ್ದಾರ್ ಪಟೇಲ್ ಕೂಡ ಹೇಳಿದ್ದರು. ಆಗ ಹೇರಿದ್ದ ನಿಷೇಧವನ್ನು ಮೋದಿ ಸರ್ಕಾರ 2024ರಲ್ಲಿ ತೆಗೆದುಹಾಕಿತ್ತು. ಜಮಾತ್-ಇ-ಇಸ್ಲಾಮಿ ಮತ್ತು ಆರ್‌ಎಸ್‌ಎಸ್ ರೀತಿಯ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದನ್ನು ಸರ್ದಾರ್ ಪಟೇಲ್ ಅವರು ನಿಷೇಧಿಸಿದ್ದರು. ಈ ನಿಷೇಧವನ್ನು ಪುನಃಸ್ಥಾಪಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಖರ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಅಕ್ಟೋಬರ್ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ಆರ್​ಎಸ್​ಎಸ್​ ಮಹಿಳಾ ಸಮನ್ವಯ ಕಾರ್ಯಾಗಾರ

ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯಂದು ಅವರನ್ನು ಸ್ಮರಿಸಿದ ಮಲ್ಲಿಕಾರ್ಜುನ ಖರ್ಗೆ, “ಸರ್ದಾರ್ ಪಟೇಲ್ ಅವರು ದೇಶವನ್ನು ಒಗ್ಗೂಡಿಸಿದರು. ದೇಶಕ್ಕೆ ಸರ್ದಾರ್ ಪಟೇಲ್ ಅವರ ಕೊಡುಗೆ ಅಪಾರ ಎಂದು ಜವಾಹರಲಾಲ್ ನೆಹರು ನಂಬಿದ್ದರು. ಫೆಬ್ರವರಿ 4, 1948ರಂದು, ಸರ್ದಾರ್ ಪಟೇಲ್ ಆರ್‌ಎಸ್‌ಎಸ್ ಬಗ್ಗೆ ಪತ್ರ ಬರೆದಿದ್ದರು. ಆರ್‌ಎಸ್‌ಎಸ್ ಗಾಂಧೀಜಿಯವರ ಮರಣವನ್ನು ಆಚರಿಸಿತು ಮತ್ತು ಸಿಹಿತಿಂಡಿಗಳನ್ನು ವಿತರಿಸಿತು” ಎಂದು ಕಾಂಗ್ರೆಸ್ ಮುಖ್ಯಸ್ಥ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: ಸರ್ದಾರ್ ಪಟೇಲ್ ಮೇಲೆ ಮುಸ್ಲಿಂ ಲೀಗ್​ನಿಂದ ನಡೆದಿತ್ತು 2 ಮಾರಕ ದಾಳಿ; 86 ವರ್ಷದ ಹಿಂದಿನ ಕತೆ ಬಿಚ್ಚಿಟ್ಟ ಬಿಜೆಪಿ

ಈ ವೇಳೆ ಸರ್ದಾರ್ ಪಟೇಲ್ ಅವರು ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಬರೆದ ಪತ್ರವನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಉಲ್ಲೇಖಿಸಿದ್ದಾರೆ. ಅದರಲ್ಲಿ ಆಗಿನ ಗೃಹ ಸಚಿವ ಸರ್ದಾರ್ ಪಟೇಲ್ “ಆರ್‌ಎಸ್‌ಎಸ್ ಮಹಾತ್ಮ ಗಾಂಧಿಯವರ ಹತ್ಯೆಯ ದುರಂತಕ್ಕೆ ಕಾರಣವಾದ ವಾತಾವರಣವನ್ನು ಸೃಷ್ಟಿಸಿದೆ. ಇಂತಹ ಪರಿಸ್ಥಿತಿಯಲ್ಲಿ ನಮಗೆ ಆರ್​ಎಸ್​ಎಸ್​ ಅನ್ನು ನಿಷೇಧಿಸದ ಬೇರೆ ದಾರಿಯಿಲ್ಲ” ಎಂದು ಹೇಳಿದ್ದರು ಎಂದಿದ್ದಾರೆ.

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಸರ್ದಾರ್ ಪಟೇಲ್ ನಡುವಿನ ಬಿರುಕು ಚಿತ್ರಿಸುವ ಮೂಲಕ ಬಿಜೆಪಿ ಇತಿಹಾಸವನ್ನು ವಿರೂಪಗೊಳಿಸುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:33 pm, Fri, 31 October 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?