AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದ ಬಗ್ಗೆ ಪ್ರಧಾನಿ ಮೋದಿ ವಿಸ್ತೃತ ಹೇಳಿಕೆ ನೀಡಲಿ: ಸಂಸತ್​​ನಲ್ಲಿ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ಮಣಿಪುರ ಹೊತ್ತಿ ಉರಿಯುತ್ತಿದೆ, ಮಹಿಳೆಯರ ಮೇಲೆ ಅತ್ಯಾಚಾರ, ಬೆತ್ತಲೆ ಮೆರವಣಿಗೆ, ಭೀಕರ ಹಿಂಸಾಚಾರ ನಡೆಯುತ್ತಿದೆ. ಆದರೆ ಪ್ರಧಾನಿಯವರು ಇವತ್ತಿನವರೆಗೂ ಮೌನವಾಗಿದ್ದರು.ಸಂಸತ್ತಿನ ಹೊರಗೆ ಮಾತ್ರ ಹೇಳಿಕೆ ನೀಡಿದ್ದಾರೆ ಎಂದು ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಹೇಳಿದ್ದಾರೆ.

ಮಣಿಪುರದ ಬಗ್ಗೆ ಪ್ರಧಾನಿ ಮೋದಿ ವಿಸ್ತೃತ ಹೇಳಿಕೆ ನೀಡಲಿ: ಸಂಸತ್​​ನಲ್ಲಿ ಮಲ್ಲಿಕಾರ್ಜುನ ಖರ್ಗೆ ಒತ್ತಾಯ
ಮಲ್ಲಿಕಾರ್ಜುನ ಖರ್ಗೆ
ರಶ್ಮಿ ಕಲ್ಲಕಟ್ಟ
|

Updated on:Jul 20, 2023 | 5:24 PM

Share

ದೆಹಲಿ ಜುಲೈ 20:ಇಬ್ಬರು ಕುಕಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವಿಡಿಯೊ ವೈರಲ್ ಆದ ನಂತರ ಮಣಿಪುರದಲ್ಲಿ (Manipur) ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮಾತನಾಡಿದ್ದಾರೆ. ಏತನ್ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಮೋದಿ ಸಂಸತ್​​ನಲ್ಲಿ ಈ ಬಗ್ಗೆ ವಿಸ್ತೃತ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. “ಮಣಿಪುರ ಹೊತ್ತಿ ಉರಿಯುತ್ತಿದೆ, ಮಹಿಳೆಯರ ಮೇಲೆ ಅತ್ಯಾಚಾರ, ಬೆತ್ತಲೆ ಮೆರವಣಿಗೆ, ಭೀಕರ ಹಿಂಸಾಚಾರ ನಡೆಯುತ್ತಿದೆ. ಆದರೆ ಪ್ರಧಾನಿಯವರು ಇವತ್ತಿನವರೆಗೂ ಮೌನವಾಗಿದ್ದರು. ಸಂಸತ್ತಿನ ಹೊರಗೆ ಮಾತ್ರ ಹೇಳಿಕೆ ನೀಡಿದ್ದಾರೆ ಎಂದು ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಹೇಳಿದ್ದಾರೆ.

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕೂಡಲೇ ರಾಜೀನಾಮೆ ನೀಡಬೇಕು. ಈಶಾನ್ಯ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಖರ್ಗೆ ಒತ್ತಾಯಿಸಿದರು.

ಸಂಸತ್ತಿನ ಮುಂಗಾರು ಅಧಿವೇಶನವು ಮಣಿಪುರ ಹಿಂಸಾಚಾರದ ಬಗ್ಗೆ ಗದ್ದಲದೊಂದಿಗೆ ಪ್ರಾರಂಭವಾಯಿತು, ಉಭಯ ಸದನಗಳನ್ನು ಸೋಮವಾರ ದಿನದ ಮಟ್ಟಿಗೆ ಮುಂದೂಡಲಾಯಿತು. ಲೋಕಸಭೆಯು ಮಧ್ಯಾಹ್ನ 2 ಗಂಟೆಗೆ ಮುಗಿಯುತ್ತಿದ್ದಂತೆ ಹಲವು ವಿರೋಧ ಪಕ್ಷದ ನಾಯಕರು ‘ಮಣಿಪುರ ಮಣಿಪುರ’ ಮತ್ತು ‘ಮಣಿಪುರ ಉರಿಯುತ್ತಿದೆ’ ಎಂಬ ಘೋಷಣೆಗಳನ್ನು ಕೂಗುತ್ತಿದ್ದರು.

ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ; ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ಮಾಡುತ್ತೇವೆ: ಸುಪ್ರೀಂಕೋರ್ಟ್

ಮಣಿಪುರ ಕುರಿತು ಪ್ರಧಾನಿ ಮೋದಿ ಹೇಳಿಕೆ

ಸಂಸತ್ ಅಧಿವೇಶನದ ಮೊದಲು, ಮಣಿಪುರದ ಪರಿಸ್ಥಿತಿಯ ಮಾತನಾಡಿದ ಮೋದಿ, “ಇದು ಯಾವುದೇ ಸಮಾಜಕ್ಕೆ ನಾಚಿಕೆಗೇಡಿನ ಘಟನೆ.. ಇದನ್ನು ಯಾರು ಮಾಡಿದರು ಮತ್ತು ಯಾರು ಹೊಣೆ ಎಂಬುದು ಮತ್ತೊಂದು ವಿಷಯ. ಆದರೆ ಇದು ನಮ್ಮ ದೇಶಕ್ಕೆ ನಾಚಿಕೆಗೇಡನ್ನುಂಟು ಮಾಡಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಬಿಗಿಗೊಳಿಸುವಂತೆ ನಾನು ಎಲ್ಲ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಅದು ರಾಜಸ್ಥಾನ, ಛತ್ತೀಸ್‌ಗಢ ಅಥವಾ ಮಣಿಪುರವೇ ಆಗಿರಲಿ… ಮಹಿಳೆಯ ಗೌರವದ ವಿಷಯವು ಎಲ್ಲ ರಾಜಕೀಯಕ್ಕಿಂತ ಮಿಗಿಲಾಗಿದೆ ಎಂದಿದ್ದಾರೆ.

ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ

ಮೇ 4 ರಂದು ಇಬ್ಬರು ಮಹಿಳೆಯರನ್ನು  ಕೆಲವು ಪುರುಷರು ಬೆತ್ತಲೆಯಾಗಿ ಮೆರವಣಿಗೆ ಮಾಡುವುದನ್ನು ತೋರಿಸುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ. ಹಸಿರು ಟೀ ಶರ್ಟ್ ಧರಿಸಿ ಮಹಿಳೆಯನ್ನು ಹಿಡಿದಿದ್ದ ಪ್ರಮುಖ ಆರೋಪಿಯನ್ನು ಸರಿಯಾದ ಗುರುತಿನ ನಂತರ ಕಾರ್ಯಾಚರಣೆಯಲ್ಲಿ ಇಂದು ಬೆಳಿಗ್ಗೆ ಬಂಧಿಸಲಾಗಿದೆ. ಈತನ ಹೆಸರು  ಹುಯಿರೆಮ್ ಹೆರೋಡಾಸ್ ಮೈಟೆಯಿ (32 ವರ್ಷ) ಎಂದು ಸರ್ಕಾರಿ ಮೂಲಗಳು ಹೇಳಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Thu, 20 July 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ