AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayodhya Ram Mandir: ನೀವು ಅರ್ಚಕರೇ? ರಾಮ ಮಂದಿರ ಉದ್ಘಾಟನೆ ದಿನಾಂಕ ಘೋಷಿಸಿದ್ದಕ್ಕೆ ಅಮಿತ್ ಶಾ ವಿರುದ್ಧ ಖರ್ಗೆ ವಾಗ್ದಾಳಿ

ತ್ರಿಪುರಾದಲ್ಲಿ ಬಿಜೆಪಿಯ ‘ಜನ್ ವಿಶ್ವಾಸ ಯಾತ್ರೆ’ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅಮಿತ್ ಶಾ, ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರ ರಾಮ ಮಂದಿರ ನಿರ್ಮಾಣ ಮಾಡಿದೆ. ಮುಂದಿನ ವರ್ಷ ಜನವರಿ 1ಕ್ಕೆ ಲೋಕರ್ಪಣೆ ಮಾಡಲಿದೆ ಎಂದು ಹೇಳಿದ್ದರು.

Ayodhya Ram Mandir: ನೀವು ಅರ್ಚಕರೇ? ರಾಮ ಮಂದಿರ ಉದ್ಘಾಟನೆ ದಿನಾಂಕ ಘೋಷಿಸಿದ್ದಕ್ಕೆ ಅಮಿತ್ ಶಾ ವಿರುದ್ಧ ಖರ್ಗೆ ವಾಗ್ದಾಳಿ
ಮಲ್ಲಿಕಾರ್ಜುನ ಖರ್ಗೆ
TV9 Web
| Edited By: |

Updated on: Jan 07, 2023 | 12:19 PM

Share

ಪಾಣಿಪತ್: ಅಯೋಧ್ಯೆಯಲ್ಲಿ (Ayodhya) 2024ರ ಜನವರಿ 1ರಂದು ರಾಮಮಂದಿರ (Ram Mandir) ಉದ್ಘಾಟನೆಗೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿರುವುದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಇಷ್ಟು ಬೇಗ ಈ ಹೇಳಿಕೆ ನೀಡುವುದರ ಉದ್ದೇಶವೇನು ಎಂದು ಪ್ರಶ್ನಿಸಿರುವ ಅವರು, ಅಮಿತ್ ಶಾ ಅವರು ರಾಮ ಮಂದಿರದ ಅರ್ಚಕ ಅಥವಾ ಮಹಾಂತರಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್​​ನ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಭಾಗವಹಿಸಿ ಅವರು ಮಾತನಾಡಿದ್ದಾರೆ.

‘ಪ್ರತಿಯೊಬ್ಬರಿಗೂ ದೇವರಲ್ಲಿ ನಂಬಿಕೆ ಇರುತ್ತದೆ. ಆದರೆ, ನೀವೇಕೆ ಅಂಥ ದೊಡ್ಡ ಘೋಷಣೆ ಮಾಡುತ್ತೀರಿ? ಅದೂ ತ್ರಿಪುರಾದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗ? 2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ರಾಮ ಮಂದಿರ ಉದ್ಘಾಟನೆಯಾಗಲಿದೆ ಎಂದು ಹೇಳುತ್ತಿದ್ದೀರಿ. ಅಂಥ ಘೋಷಣೆ ಮಾಡಲು ನೀವು ಯಾರು? ರಾಮ ಮಂದಿರದ ಅರ್ಚಕರೇ ಅಥವಾ ಮಹಾಂತರೇ?’ ಎಂದು ಶಾ ವಿರುದ್ಧ ಖರ್ಗೆ ಕಿಡಿಕಾರಿದ್ದಾರೆ.

ಇದನ್ನು ಓದಿ: Ayodhya Ram Mandir: 2024ರ ಜನವರಿ 1ರಂದು ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ: ಅಮಿತ್ ಶಾ ಮಹತ್ವದ ಘೋಷಣೆ

‘ರಾಮ ಮಂದಿರದ ಉದ್ಘಾಟನೆ ಬಗ್ಗೆ ಮಹಾಂತರು ಮತ್ತು ಸಂತರು ಹೇಳಿಕೆ ನೀಡಲಿ. ನೀವೊಬ್ಬ ರಾಜಕಾರಣಿ. ನೀವು ದೇಶವನ್ನು ಭದ್ರವಾಗಿ ನೋಡಿಕೊಳ್ಳಬೇಕಾದವರು. ಕಾನೂನು ಸುವ್ಯವಸ್ಥೆ ಜಾರಿಗೊಳಿಸಬೇಕಾದವರು. ಜನರಿಗೆ ಆಹಾರ ಭದ್ರತೆ ಮತ್ತು ರೈತರು ಬೆಳೆದ ಬೆಳೆಗೆ ಬೆಲೆ ಖಾತರಿ ನೀಡಬೇಕಾದವರು. ಅದು ನಿಮ್ಮ ಕೆಲಸ’ ಎಂದು ಖರ್ಗೆ ಹೇಳಿದ್ದಾರೆ.

ತ್ರಿಪುರಾದಲ್ಲಿ ಬಿಜೆಪಿಯ ‘ಜನ್ ವಿಶ್ವಾಸ ಯಾತ್ರೆ’ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅಮಿತ್ ಶಾ, ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರ ರಾಮ ಮಂದಿರ ನಿರ್ಮಾಣ ಮಾಡಿದೆ. ಮುಂದಿನ ವರ್ಷ ಜನವರಿ 1ಕ್ಕೆ ಲೋಕರ್ಪಣೆ ಮಾಡಲಿದೆ ಎಂದು ಹೇಳಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರದ ಅರ್ಧದಷ್ಟು ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಮತ್ತು 2024 ರ ಜನವರಿಯಲ್ಲಿ ದೇವತೆಗಳ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ ಭವ್ಯವಾದ ದೇವಾಲಯವನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಕ್ಟೋಬರ್‌ನಲ್ಲಿ ತಿಳಿಸಿತ್ತು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ