AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mallikarjuna Kharge: ಭಾರತ್ ಜೋಡೋ ಯಾತ್ರೆಗೆ ಭದ್ರತೆ ಕೊಡಿ: ಗೃಹ ಸಚಿವರಿಗೆ ಮಲ್ಲಿಕಾರ್ಜುನ ಖರ್ಗೆ ಮನವಿ

Bharat Jodo Yatra Security Arrangement: ಕಾಶ್ಮೀರದಲ್ಲಿ ಭಾರತ್ ಜೋಡೋ ಪಾದಯಾತ್ರೆ ವೇಳೆ ಪೊಲೀಸ್ ಭದ್ರತಾ ವ್ಯವಸ್ಥೆ ಕುಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶಿಸಿ ಭದ್ರತೆ ವ್ಯವಸ್ಥೆ ಮಾಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ.

Mallikarjuna Kharge: ಭಾರತ್ ಜೋಡೋ ಯಾತ್ರೆಗೆ ಭದ್ರತೆ ಕೊಡಿ: ಗೃಹ ಸಚಿವರಿಗೆ ಮಲ್ಲಿಕಾರ್ಜುನ ಖರ್ಗೆ ಮನವಿ
ಭಾರತ್ ಜೋಡೋ ಯಾತ್ರೆ
TV9 Web
| Edited By: |

Updated on: Jan 28, 2023 | 1:21 PM

Share

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress leader Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ (Bharat Jodo Yatra) ಅಗತ್ಯ ಭದ್ರತೆ ಒದಗಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಪತ್ರ ಬರೆದಿದ್ದಾರೆ. ದೇಶಾದ್ಯಂತ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆ ಸದ್ಯ ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿದೆ. ನಿನ್ನೆ ಶುಕ್ರವಾರ ಪೊಲೀಸ್ ಭದ್ರತೆ ವೈಫಲ್ಯದಿಂದಾಗಿ ಕಾಂಗ್ರೆಸ್ ಪಕ್ಷ ಈ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿರುವ ಖರ್ಗೆ, ವೈಯಕ್ತಿಕವಾಗಿ ಮಧ್ಯಪ್ರವೇಶಿಸಿ ಭಾರತ್ ಜೋಡೋ ಯಾತ್ರೆಯ ವೇಳೆ ಸಮರ್ಪಕ ಭದ್ರತೆಯ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಮುಂದಿನ ಎರಡು ದಿನಗಳ ಕಾಲ ಭಾರತ್ ಜೋಡೋ ಯಾತ್ರೆಗೆ ಭಾರೀ ಜನರು ಸೇರುವ ನಿರೀಕ್ಷೆ ಇದೆ. ಶ್ರೀನಗರದಲ್ಲಿ ಜನವರಿ 30ರಂದು ನಡೆಯುವ ಕಾರ್ಯಕ್ರಮಕ್ಕೂ ಭಾರೀ ಜನಸ್ತೋಮ ಇರಲಿದೆ. ಹಿರಿಯ ಕಾಂಗ್ರೆಸ್ಸಿಗರು ಮಾತ್ರವಲ್ಲ ಇತರ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ…. ನೀವು ವೈಯಕ್ತಿಕವಾಗಿ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಯಾತ್ರೆ ಸಮಾಪ್ತಿಯಾಗುವವರೆಗೂ ಮತ್ತು ಜನವರಿ 30ರ ಕಾರ್ಯಕ್ರಮ ಮುಗಿಯುವವರೆಗೂ ಅಗತ್ಯ ಭದ್ರತೆ ಒದಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಬೇಕುಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಪತ್ರದಲ್ಲಿ ಕೇಳಿಕೊಂಡಿದ್ದಾರೆ.

ನಿನ್ನೆ ಶುಕ್ರವಾರ ಕಾಶ್ಮೀರ ಕಣಿವೆಯಲ್ಲಿ ಭಾರತ್ ಜೋಡೋ ಪಾದಯಾತ್ರೆ ನಡೆಸುವ ವೇಳೆ ಪೊಲೀಸ್ ಭದ್ರತೆಯಲ್ಲಿ ವ್ಯತ್ಯಯವಾಗಿತ್ತು. ಅದೇ ದಿನ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿ ಈ ವಿಚಾರವನ್ನು ಉಲ್ಲೇಖಿಸಿ ತಾನು ಯಾತ್ರೆ ಈ ದಿನಕ್ಕೆ ಸ್ಥಗಿತಗೊಳಿಸುತ್ತಿರುವುದಾಗಿ ಹೇಳಿದರು.

ಯಾತ್ರೆಯ ವೇಳೆ ಜನರ ಗುಂಪನ್ನು ನಿಯಂತ್ರಿಸಲು ಪೊಲೀಸರೇ ಇರಲಿಲ್ಲ ಎಂಬುದು ರಾಹುಲ್ ಗಾಂಧಿ ಆರೋಪ.

ಇವತ್ತು ಬೆಳಗ್ಗೆ ಭಾರತ್ ಜೋಡೋ ಯಾತ್ರೆಯಲ್ಲಿ ದುರದೃಷ್ಟಕ್ಕೆ ಪೊಲೀಸ್ ಭದ್ರತಾ ವ್ಯವಸ್ಥೆ ಸಂಪೂರ್ಣ ಕುಸಿದುಹೋಗಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರೇ ಇರಲಿಲ್ಲ. ನಾನು ಪಾದಯಾತ್ರೆ ಮುಂದುವರಿಸುವುದರಿಂದ ನನ್ನ ಭದ್ರತಾ ಸಿಬ್ಬಂದಿಯ ಆತಂಕಗೊಂಡಿದ್ದರು. ಆದ್ದರಿಂದ ನನ್ನ ನಡಿಗೆಯನ್ನು ನಿಲ್ಲಿಸಬೇಕಾಯಿತು. ಇತರರು ಪಾದಯಾತ್ರೆ ಮುಂದುವರಿಸಿದರುಎಂದು ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ತಿಳಿಸಿದರು.

ಪಾದಯಾತ್ರೆ ಟೈಮ್​ಲೈನ್

2022 ಸೆಪ್ಟೆಂಬರ್​ನಲ್ಲಿ ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭಗೊಂಡ ಭಾರತ್ ಜೋಡೋ ಯಾತ್ರೆ ಕೇರಳ, ಕರ್ನಾಟಕ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಹರ್ಯಾಣ, ದೆಹಲಿ, ಉತ್ತರಪ್ರದೇಶ, ಪಂಜಾಬ್, ಹಿಮಾಚಲಪ್ರದೇಶ ರಾಜ್ಯಗಳಲ್ಲಿ ಸಂಚರಿಸಿ ಇದೀಗ ಜಮ್ಮು ಕಾಶ್ಮೀರದಲ್ಲಿದೆ. ಜನವರಿ 30ರಂದು ಶ್ರೀನಗರದಲ್ಲಿ ಸಮಾರೋಪ ನಡೆಯಲಿದೆ. ರಾಹುಲ್ ಗಾಂಧಿ ಇಡೀ ಯಾತ್ರೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಒಟ್ಟು 150ಕ್ಕೂ ಹೆಚ್ಚು ದಿನಗಳ ಕಾಲ ನಡೆಯುತ್ತಿರುವ ಮತ್ತು 3,500 ಕಿಮೀಗೂ ಹೆಚ್ಚು ದೂರ ಸಂಚರಿಸಿರುವ ಭಾರತ್ ಜೋಡೋ ಯಾತ್ರೆ ನಾನಾ ಕಾರಣಗಳಿಗೆ ಗಮನ ಸೆಳೆದಿದೆ.

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ