AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಜನತೆಗೆ ಕೊಡುಗೆ ಘೋಷಿಸಿದ ಮಮತಾ ಬ್ಯಾನರ್ಜಿ.. ಏನದು?

ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಜನತೆಗೆ ಕೆಲವೊಂದು ಕೊಡುಗೆ ಘೋಷಿಸಿದ್ದಾರೆ.

ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಜನತೆಗೆ ಕೊಡುಗೆ ಘೋಷಿಸಿದ ಮಮತಾ ಬ್ಯಾನರ್ಜಿ.. ಏನದು?
ಮಮತಾ ಬ್ಯಾನರ್ಜಿ
sandhya thejappa
sandhya thejappa| Edited By: |

Updated on: Dec 04, 2020 | 1:28 PM

Share

ಕೋಲ್ಕತ್ತ: ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಜನತೆಗೆ ಕೆಲವೊಂದು ಕೊಡುಗೆ ಘೋಷಿಸಿದ್ದಾರೆ.

ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್​​ಗಳು ಹಾಗೂ ಮುಂದಿನ ತಿಂಗಳಿನಿಂದ ರಾಜ್ಯ ಸರ್ಕಾರಿ ನೌಕರರಿಗೆ ಶೇ.3ರಷ್ಟು ಹೆಚ್ಚಿಸಿದ ತುಟ್ಟಿ ಭತ್ಯೆ ಜೊತೆಗೆ ಕೋವಿಡ್ ಪರೀಕ್ಷೆಯ ವೆಚ್ಚವನ್ನು ಕಡಿತಗೊಳಿಸಲಾಗಿದೆ ಎಂದು ಮಮತಾ ಬ್ಯಾನರ್ಜಿ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಸಭೆಯಲ್ಲಿ ಗುರುವಾರ ಹೇಳಿದ್ದಾರೆ.

ಆನ್​ಲೈನ್ ತರಗತಿ ನಡೆಯುವ ಈ ಸಂದರ್ಭದಲ್ಲಿ ಶಾಲೆಗಳು ಹಾಗೂ ಮದರಸ ವಿದ್ಯಾರ್ಥಿಗಳಿಗೆ ಟ್ಯಾಬ್​​ಗಳನ್ನು ವಿತರಿಸಲಾಗುವುದೆಂದು ತಿಳಿಸಿದ ಮಮತಾ, ಇದರಿಂದ 9.5 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿ ಆಗುತ್ತದೆ ಎಂದರು.

ಕೊರೊನಾ ಸೋಂಕಿನ ಆರ್​ಟಿ-ಪಿಸಿಆರ್ ಪರೀಕ್ಷೆಯ ವೆಚ್ಚವನ್ನು ₹1250ಗಳಿಂದ ₹950 ಗೆ ಇಳಿಸಲಾಗಿದೆ. ಇದಕ್ಕೂ ಮೊದಲು ಅಕ್ಟೋಬರ್​ನಲ್ಲಿ ಪರೀಕ್ಷೆಯ ವೆಚ್ಚವನ್ನು ₹2250 ಗಳಿಂದ  ₹1250ಗೆ ಇಳಿಸಲಾಗಿತ್ತು

ಮಹಾಮಾರಿ ಕೊರೊನಾದಿಂದ ಹಲವು ವಿದ್ಯಾರ್ಥಿಗಳು ಕಂಪ್ಯೂಟರ್ ಮತ್ತು ಮೊಬೈಲ್​ಗಳಿಲ್ಲದೇ ಆನ್​ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ನೀಡಲು ನಿರ್ಧರಿಸಿದೆ ಎಂದರು.

Follow Us
sandhya thejappa
sandhya thejappa