AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮಮತಾ ಬ್ಯಾನರ್ಜಿ-ಸುಬ್ರಹ್ಮಣಿಯನ್ ಸ್ವಾಮಿ ಭೇಟಿ; ಕುತೂಹಲ ಮೂಡಿಸಿದ ಬಿಜೆಪಿ ಮುಖಂಡನ ಮಾತುಗಳು

ಸುಬ್ರಹ್ಮಣಿಯನ್​ ಸ್ವಾಮಿಯವರು ಪ್ರಧಾನಿ ಮೋದಿ ಮತ್ತು ಅವರ ಸರ್ಕಾರದ ಕಟು ವಿಮರ್ಶಕರು. ಸದಾ ಒಂದಲ್ಲ ಒಂದು ಟೀಕೆಯನ್ನು ಬಹಿರಂಗವಾಗಿಯೇ ಮಾಡುತ್ತಾರೆ.

ದೆಹಲಿಯಲ್ಲಿ ಮಮತಾ ಬ್ಯಾನರ್ಜಿ-ಸುಬ್ರಹ್ಮಣಿಯನ್ ಸ್ವಾಮಿ ಭೇಟಿ; ಕುತೂಹಲ ಮೂಡಿಸಿದ ಬಿಜೆಪಿ ಮುಖಂಡನ ಮಾತುಗಳು
ಸುಬ್ರಹ್ಮಣಿಯನ್​ ಸ್ವಾಮಿ-ಮಮತಾ ಬ್ಯಾನರ್ಜಿ ಭೇಟಿ
TV9 Web
| Edited By: |

Updated on: Nov 24, 2021 | 5:14 PM

Share

ದೆಹಲಿ ಪ್ರವಾಸದಲ್ಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿಯವರನ್ನು ಭೇಟಿಯಾದರು. ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್​ ಬ್ಯಾನರ್ಜಿಯವರ ದೆಹಲಿಯಲ್ಲಿರುವ ನಿವಾಸದಲ್ಲಿ ಇಂದು ಮಧ್ಯಾಹ್ನ 3.30ರ ಹೊತ್ತಿಗೆ ಸಭೆ ನಡೆದಿತ್ತು.  ಸಭೆ ಬಳಿಕ, ‘ನೀವು ತೃಣಮೂಲ ಕಾಂಗ್ರೆಸ್ ಸೇರುತ್ತೀರಾ’ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಬ್ರಹ್ಮಣಿಯನ್ ಸ್ವಾಮಿ, ನಾನು ಈಗಾಗಲೇ ಮಮತಾ ಬ್ಯಾನರ್ಜಿ ಜತೆಗೆ ಇದ್ದೇನೆ. ಅವರಿಗೆ ಬೆಂಬಲ ನೀಡುತ್ತಿದ್ದೇನೆ. ಮತ್ತೆ ಆ ಪಕ್ಷವನ್ನು ಸೇರುವ ಅಗತ್ಯತೆ ನನಗೆ ಕಾಣುತ್ತಿಲ್ಲ ಎಂದು ಉತ್ತರಿಸಿದ್ದಾರೆ.  ಇನ್ನು ನಿನ್ನೆಯಷ್ಟೇ (ಮಂಗಳವಾರ) ಸುಬ್ರಹ್ಮಣಿಯನ್​ ಸ್ವಾಮಿ ಕೋಲ್ಕತ್ತಕ್ಕೆ ತೆರಳಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧಂಕರ್​​ರನ್ನು ಭೇಟಿಯಾಗಿದ್ದರು.

ಸುಬ್ರಹ್ಮಣಿಯನ್​ ಸ್ವಾಮಿಯವರು ಪ್ರಧಾನಿ ಮೋದಿ ಮತ್ತು ಅವರ ಸರ್ಕಾರದ ಕಟು ವಿಮರ್ಶಕರು. ಸದಾ ಒಂದಲ್ಲ ಒಂದು ಟೀಕೆಯನ್ನು ಬಹಿರಂಗವಾಗಿಯೇ ಮಾಡುತ್ತಾರೆ. ಅವರನ್ನು ಈ ಬಾರಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈಬಿಡಲಾಗಿದೆ. ಹಾಗಂತ ಪ್ರಧಾನಿ ಮೋದಿಯಾಗಲಿ, ಅಮಿತ್​ ಶಾ ಆಗಲೀ, ಜೆಪಿ ನಡ್ಡಾ ಆಗಲೀ ಇದುವರೆಗೂ ಸುಬ್ರಹ್ಮಣಿಯನ್​ ಸ್ವಾಮಿ ವಿರುದ್ಧ ಯಾವುದೇ ಮಾತುಗಳನ್ನೂ ಆಡಿಲ್ಲ. ಈ ಹಿಂದೆ ಹಲವು ಬಾರಿ ಕೂಡ ಮಮತಾ ಬ್ಯಾನರ್ಜಿಯವರನ್ನು ಹೊಗಳಿದ್ದಾರೆ. ಇತ್ತೀಚೆಗೆಷ್ಟೇ, ರೋಮ್​​ನಲ್ಲಿ ನಡೆಯಲಿದ್ದ ಶಾಂತಿ ಸಮಾವೇಶಕ್ಕೆ ಹೋಗಲು ಮಮತಾ ಬ್ಯಾನರ್ಜಿಯವರಿಗೆ ಅವಕಾಶ ಕೊಡಲಿಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರವನ್ನೇ ಟೀಕೆ ಮಾಡಿದ್ದಾರೆ.  ಅಷ್ಟೇ ಅಲ್ಲ ಪಶ್ಚಿಮ ಬಂಗಾಳದ ಕಳೆದ ವಿಧಾನಸಭೆ ಚುನಾವಣೆ ವೇಳೆಯಲ್ಲಿ ನಂದಿಗ್ರಾಮದಲ್ಲಿ ಪ್ರಚಾರ ಮಾಡುವಾಗ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದರು. ಆಗ ಸ್ವಾಮಿ ಟ್ವೀಟ್ ಮಾಡುವ ಮೂಲಕ ಶೀಘ್ರವೇ ಚೇತರಿಸಿಕೊಳ್ಳುವಂತೆ ಹಾರೈಸಿದ್ದರು. ಇನ್ನು ಮಮತಾ ಬ್ಯಾನರ್ಜಿ ಇಂದು 5ಗಂಟೆಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: ಯಾವ ಸಹಾಯವನ್ನೂ ಮಾಡದ ನಿಮ್ಮದು ಇದೆಂಥಾ ಸರ್ಕಾರ?- ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಶ್ನೆ

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್