AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಭೇಟಿಗೆ ಮುನ್ನ ತೃಣಮೂಲ ಕಾಂಗ್ರೆಸ್  ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಮಮತಾ ಬ್ಯಾನರ್ಜಿ ನೇಮಕ

Mamata Banerjee: ಸಂಸದ ಸುದೀಪ್ ಬಂಡೋಪಾಧ್ಯಾಯರಿಂದ ಅಧಿಕಾರ ವಹಿಸಿಕೊಂಡ ಮಮತಾ ಬ್ಯಾನರ್ಜಿ, ಸಂಸತ್ತಿಗೆ ಆಯ್ಕೆಯಾಗದೆ ತಮ್ಮ ಪಕ್ಷದ ಸಂಸದೀಯ ತುಕಡಿಯ ನೇತೃತ್ವ ವಹಿಸಿರುವ ಕೆಲವೇ ಕೆಲವು ರಾಜಕೀಯ ನಾಯಕರಲ್ಲಿ ಒಬ್ಬರಾಗಿದ್ದಾರೆ

ದೆಹಲಿ ಭೇಟಿಗೆ ಮುನ್ನ ತೃಣಮೂಲ ಕಾಂಗ್ರೆಸ್  ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಮಮತಾ ಬ್ಯಾನರ್ಜಿ ನೇಮಕ
ಮಮತಾ ಬ್ಯಾನರ್ಜಿ
TV9 Web
| Edited By: |

Updated on: Jul 23, 2021 | 7:39 PM

Share

ದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೃಣಮೂಲ ಕಾಂಗ್ರೆಸ್ ನ ಸಂಸದೀಯ ಪಕ್ಷದ ಹೊಸ ಅಧ್ಯಕ್ಷರಾಗಲಿದ್ದಾರೆ ಎಂದು ಸಂಸದ ಡೆರೆಕ್ ಒಬ್ರಿಯೆನ್ ಶುಕ್ರವಾರ ಹೇಳಿದ್ದಾರೆ. ಮುಂದಿನ ವಾರ ನವದೆಹಲಿ ಭೇಟಿಗೆ ಮುಂಚಿತವಾಗಿ ರಾಷ್ಟ್ರೀಯ ರಾಜಕಾರಣಕ್ಕೆ ಧುಮುಕಲು ಇದು ಅಡಿಪಾಯ ಆಗುವ ನಿರೀಕ್ಷೆ ಇದೆ. ಸಂಸದ ಸುದೀಪ್ ಬಂಡೋಪಾಧ್ಯಾಯರಿಂದ ಅಧಿಕಾರ ವಹಿಸಿಕೊಂಡ ಮಮತಾ ಬ್ಯಾನರ್ಜಿ, ಸಂಸತ್ತಿಗೆ ಆಯ್ಕೆಯಾಗದೆ ತಮ್ಮ ಪಕ್ಷದ ಸಂಸದೀಯ ತುಕಡಿಯ ನೇತೃತ್ವ ವಹಿಸಿರುವ ಕೆಲವೇ ಕೆಲವು ರಾಜಕೀಯ ನಾಯಕರಲ್ಲಿ ಒಬ್ಬರಾಗಿದ್ದಾರೆ. 1998 ರಲ್ಲಿ ಸೋನಿಯಾ ಗಾಂಧಿ ಅವರು ಪಕ್ಷದ ಮುಖ್ಯಸ್ಥರಾದಾಗ ಕಾಂಗ್ರೆಸ್ ಸಂಸದೀಯ ಪಕ್ಷವನ್ನು ಮುನ್ನಡೆಸಿದ್ದರು.

“ಮಮತಾ ಬ್ಯಾನರ್ಜಿ ನಮ್ಮ ತೃಣಮೂಲ ಸಂಸದೀಯ ಪಕ್ಷದ ಅಧ್ಯಕ್ಷರಾಗಲಿದ್ದಾರೆ.. ಮಮತಾ ಬ್ಯಾನರ್ಜಿ ಅವರು ಏಳು ಬಾರಿ ಸಂಸದರಾಗಿದ್ದಾರೆ. ಅವರು ಈಗಾಗಲೇ ಸಂಸದೀಯ ಪಕ್ಷಕ್ಕೆ ಮಾರ್ಗದರ್ಶನ ನೀಡುತ್ತಿದ್ದರು. ಇದು ಕಾರ್ಯತಂತ್ರದ ನಿರ್ಧಾರ” ಎಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಓಬ್ರಿಯೆನ್ ಹೇಳಿದರು.

ಪೆಗಾಸಸ್ ಕಣ್ಗಾವಲು ಹಗರಣದ ಬಗ್ಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರ ಪ್ರತಿಕ್ರಿಯೆಯನ್ನು ಹರಿದು ಹಾಕಿದ ತೃಣಮೂಲ ಸಂಸದ ಡಾ.ಸಂತನು ಸೇನ್ ವಿರುದ್ಧ ಕ್ರಮ ಕೈಗೊಂಡಿರುವ ಸಂಸತ್ತಿನ ಅಧಿವೇಶನದ ನಡುವೆಯೇ ಈ ಪ್ರಕಟಣೆ ಬಂದಿದೆ.

ಅಡೆತಡೆಗಳು ಮತ್ತು ವಿರೋಧ ಪಕ್ಷದ ಗದ್ದಲಗಳ ಕುರಿತು ಮಾತನಾಡಿದ ತೃಣಮೂಲ ನಾಯಕ, “ನಾವು ಸಂಸತ್ತು ನಡೆಸಬೇಕೆಂದು ಬಯಸುತ್ತೇವೆ. ಎರಡು ಅಥವಾ ಮೂರು ವಿಷಯಗಳ ಬಗ್ಗೆ ಚರ್ಚಿಸಬೇಕೆಂದು ನಾವು ಬಯಸುತ್ತೇವೆ. ಪೆಗಾಸಸ್ ಸಮಸ್ಯೆಯನ್ನು ಚರ್ಚಿಸಬೇಕಾಗಿದೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ನಾವು ಬಯಸುತ್ತೇವೆ” ಎಂದು ಹೇಳಿದರು.

ಡಾ. ಸೇನ್ ಅವರನ್ನು ಅಮಾನತುಗೊಳಿಸುವುದರಿಂದ ಪಕ್ಷವು “ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ಅವರು ಹೇಳಿದರು, “ಜನರು ಅವರನ್ನು (ಬಿಜೆಪಿ) ಅಮಾನತುಗೊಳಿಸುತ್ತಾರೆ. ನಮ್ಮ ಸಹೋದ್ಯೋಗಿ ಮೊಹುವಾ (ಮೊಯಿತ್ರಾ) ಹಕ್ಕುಚ್ಯುತಿ (ಅಮಾನತು ವಿರುದ್ಧ) ಮಂಡನೆ ಮಾಡಿದ್ದಾರೆ ” ಎಂದು ಹೇಳಿದರು.

ರಾಷ್ಟ್ರೀಯ ರಾಜಕಾರಣದಲ್ಲಿ ವ್ಯಾಪಕವಾದ ಪಾತ್ರವನ್ನು ವಹಿಸಿಕೊಳ್ಳುವ ಮತ್ತು ಬಿಜೆಪಿ ವಿರುದ್ಧ ದೇಶದ ಭಿನ್ನಾಭಿಪ್ರಾಯವನ್ನು ಒಗ್ಗೂಡಿಸುವ ಪ್ರಯತ್ನ ಇದು ಎಂದು ಹೇಳಲಾಗುತ್ತಿದೆ. ಸೋಮವಾರದಿಂದ ಪ್ರಾರಂಭವಾಗುವ ಮಮತಾ ಬ್ಯಾನರ್ಜಿ ದೆಹಲಿಗೆ ಪ್ರವಾಸವು ಸಾಕಷ್ಟು ಸಂಚಲನವನ್ನು ಸೃಷ್ಟಿಸಿದೆ.

ಭೇಟಿಯ ಪೂರ್ವಸಿದ್ಧತೆಗಾಗಿ ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರು ದೆಹಲಿಯಲ್ಲಿದ್ದಾರೆ. ಬಿಜೆಪಿ ವಿರುದ್ಧ ಬಂಗಾಳ ಚುನಾವಣೆಯಲ್ಲಿ ಭಾರಿ ಜಯಗಳಿಸಿದ ನಂತರ ಮಮತಾ ಅವರ ಮೊದಲ ಪ್ರವಾಸ ಇದಾಗಿದೆ. ಅವರು ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಸೋನಿಯಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ಇದನ್ನೂ ಓದಿ: Pegasus row ಭಾರತವನ್ನು ಕಣ್ಗಾವಲು ರಾಜ್ಯವನ್ನಾಗಿ ಮಾಡಲು ಬಿಜೆಪಿ ಬಯಸಿದೆ: ಮಮತಾ ಬ್ಯಾನರ್ಜಿ

ಇದನ್ನೂ ಓದಿ:  Monsoon Session 2021: ಕೇಂದ್ರ ಸಚಿವರ ಭಾಷಣದ ಪ್ರತಿಯನ್ನು ಹರಿದುಹಾಕಿದ್ದ ಟಿಎಂಸಿ ಸಂಸದ ರಾಜ್ಯಸಭೆಯಿಂದ ಅಮಾನತು

(Mamata Banerjee Named chairperson of the parliamentary party of the Trinamool Congress)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ