AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್​​ಗೆ ಅಭಿನಂದನೆ ಸಲ್ಲಿಸುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚಂದ್ರಯಾನ ಯಶಸ್ವಿ ಆಗುವ ಮುನ್ನ ಕಾರ್ಯಕ್ರಮವೊಂದರಲ್ಲಿ ಚಂದ್ರಯಾನದ ಬಗ್ಗೆ ಗೊಂದಲದ ಮಾತುಗಳನ್ನು ಹಾಡಿದ್ದಾರೆ. ಗಗನಯಾತ್ರಿ ರಾಕೇಶ್ ಶರ್ಮಾ ಬದಲು ಬಾಲಿವುಡ್ ನಟ-ಚಿತ್ರ ನಿರ್ಮಾಪಕ ರಾಕೇಶ್ ರೋಷನ್ ಎಂದು ಹೇಳಿದ್ದಾರೆ.

ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್​​ಗೆ ಅಭಿನಂದನೆ ಸಲ್ಲಿಸುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: Aug 24, 2023 | 12:14 PM

ಭಾರತವು ಬುಧವಾರದಂದು (ಆ.23) ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 (Chandrayaan-3) ಮಿಷನ್ ಲ್ಯಾಂಡಿಂಗ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಇಸ್ರೋದ ಈ ಸಾಧನೆಗೆ ದೇಶದ ಅನೇಕ ಗಣ್ಯರು ಮತ್ತು ನಟ-ನಟಿಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಆದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಚಂದ್ರಯಾನ ಯಶಸ್ವಿ ಆಗುವ ಮುನ್ನ ಕಾರ್ಯಕ್ರಮವೊಂದರಲ್ಲಿ ಚಂದ್ರಯಾನದ ಬಗ್ಗೆ ಗೊಂದಲದ ಮಾತುಗಳನ್ನು ಹಾಡಿದ್ದಾರೆ. ಗಗನಯಾತ್ರಿ ರಾಕೇಶ್ ಶರ್ಮಾ ಬದಲು ಬಾಲಿವುಡ್ ನಟ-ಚಿತ್ರ ನಿರ್ಮಾಪಕ ರಾಕೇಶ್ ರೋಷನ್ ಎಂದು ಹೇಳಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗುತ್ತಿದೆ.

ವೈರಲ್​​ ವಿಡಿಯೋದಲ್ಲಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಜನರ ಪರವಾಗಿ, ನಾನು ಇಸ್ರೋಗೆ ಚಂದ್ರಯಾನ ಯಶಸ್ವಿಗೂ ಮುನ್ನ ಅಭಿನಂದನೆಗಳನ್ನು ತಿಳಿಸುತ್ತೇನೆ. ಈ ಸಾಧನೆಯ ಕ್ರೆಡಿಟ್ ವಿಜ್ಞಾನಿಗಳು ಮತ್ತು ದೇಶಕ್ಕೆ ಸಲ್ಲಬೇಕು. ರಾಕೇಶ್ ರೋಷನ್ ಚಂದ್ರನ ಮೇಲೆ ಇಳಿದಾಗ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜತೆಗೆ ಸಂವಾದ ನಡೆಸಿದ್ದಾರೆ ಎಂದು ಹೇಳುವ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ. ಇಲ್ಲಿ ಮಮತಾ ಬ್ಯಾನರ್ಜಿ ಅವರು ರಾಕೇಶ್ ಶರ್ಮಾ ಎಂದು ಹೇಳುವ ಬದಲು ರಾಕೇಶ್ ರೋಷನ್ ಎಂದು ಹೇಳಿದ್ದಾರೆ.

ರಾಕೇಶ್ ಶರ್ಮಾ, ಭಾರತೀಯ ವಾಯುಪಡೆಯ ಪೈಲಟ್, 1984ರಲ್ಲಿ ಸೋವಿಯತ್ ಒಕ್ಕೂಟದ ಸೋಯುಜ್ T-11 ಭಾಗವಾಗಿ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಮೊದಲ ಭಾರತೀಯರಾಗಿದ್ದರು. ದೂರದರ್ಶನದ ನೇರ ಪ್ರಸಾರದ ಮೂಲಕ ಗಗನಯಾತ್ರಿಗಳು ಬಾಹ್ಯಾಕಾಶದಿಂದ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಸಂವಹನ ನಡೆದಿದೆ; ಚಂದ್ರನಲ್ಲಿ ಇಳಿದ ನಂತರ ಮೊದಲ ಚಿತ್ರ ಹಂಚಿಕೊಂಡ ವಿಕ್ರಮ್ ಲ್ಯಾಂಡರ್

ಇಂದಿರಾ ಗಾಂಧಿಯವರು ರಾಕೇಶ್​​ ಶರ್ಮಾ ಅವರ ಜತೆಗೆ ಮಾತನಾಡಿದ್ದು ಹೀಗೆ “ಉಪರ್ ಸೆ ಭಾರತ್ ಕೈಸಾ ದಿಖ್ತಾ ಹೈ ಆಪ್ಕೋ?” (ಬಾಹ್ಯಾಕಾಶದಿಂದ ಭಾರತವು ಹೇಗೆ ಕಾಣುತ್ತದೆ?) ಎಂದು ಕೇಳುತ್ತಾರೆ. ಅದಕ್ಕೆ ಉತ್ತರಿಸಿದ ರಾಕೇಶ್​​ ಶರ್ಮಾ ಅವರು ಕವಿ ಇಕ್ಬಾಲ್ ಅವರನ್ನು ಉಲ್ಲೇಖಿಸಿ, “ಸಾರೆ ಜಹಾನ್ ಸೆ ಅಚ್ಚಾ” (ಇಡೀ ಪ್ರಪಂಚಕ್ಕಿಂತ ಉತ್ತಮ) ಎಂದು ಹೇಳುವ ಮೂಲಕ ಪ್ರತಿಕ್ರಿಯಿಸಿದರು. ಆದರೆ ಈ ಘಟನೆಯನ್ನು ಹೇಳುವ ಭರದಲ್ಲಿ ಮಮತಾ ಬ್ಯಾನರ್ಜಿ ಅವರು ರಾಕೇಶ್​​ ಶರ್ಮಾ ಹೇಳುವ ಬದಲು ರಾಕೇಶ್​​ ರೋಷನ್ ಎಂದು ಹೇಳಿ, ಎಲ್ಲ ಕಡೆ ಟ್ರೋಲ್​​ ಆಗಿದ್ದಾರೆ.

ಇನ್ನು ಚಂದ್ರಯಾನ-3 ಸಂಬಂಧಿತ ಗೂಫ್-ಅಪ್‌ನಲ್ಲಿ ಮಮತಾ ಬ್ಯಾನರ್ಜಿ ಮಾತ್ರವಲ್ಲ, ರಾಜಸ್ಥಾನದ ಸಚಿವರೊಬ್ಬರು ಕೂಡ ವೈರಲ್​​ ಆಗುತ್ತಿದ್ದಾರೆ. ಚಂದ್ರಯಾನ -3 ಮಿಷನ್‌ನ ಪ್ರಯಾಣಿಕರಿಗೆ ಅಭಿನಂದನೆ ಎಂದು ಹೇಳಿದ್ದಾರೆ. ಆದರೆ ಈ ಚಂದ್ರಯಾನ -3 ಮಾನವರಹಿತ ಮಿಷನ್ ಆಗಿರುವ ಕಾರಣ, ಮಾತಿನ ಭರದಲ್ಲಿ ಈ ಎಡವಟ್ಟು ಮಾಡಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ.

ಬುಧವಾರದಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್​​ ಆಗಿರುವ ಪ್ರಗ್ಯಾನ್ ರೋವರ್ ಮುಂದಿನ 14 ದಿನಗಳವರೆಗೆ ಚಂದ್ರನ ಮೇಲ್ಮೈಯನ್ನು ಅನ್ವೇಷಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ
ಧುಮ್ಮಿಕ್ಕಿ ಹರಿಯುತ್ತಿದೆ ಧನುಷ್ಕೋಟಿ ಜಲಪಾತ: ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಧನುಷ್ಕೋಟಿ ಜಲಪಾತ: ವಿಡಿಯೋ ನೋಡಿ