AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷಾಂತರ ಮಾಡಿರುವ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸುವೆ: ಮಮತಾ ಬ್ಯಾನರ್ಜಿ ಘೋಷಣೆ

ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲೇ ಸುವೇಂದು ಬಿಜೆಪಿ ಸೇರ್ಪಡೆ ಆಗಿದ್ದರು. ಅಂದಿನಿಂದಲೂ ಸುವೇಂದು ವಿರುದ್ಧ ಮಮತಾ ವಾಗ್ದಾಳಿ ನಡೆಸುತ್ತಲೇ ಇದ್ದಾರೆ.

ಪಕ್ಷಾಂತರ ಮಾಡಿರುವ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸುವೆ: ಮಮತಾ ಬ್ಯಾನರ್ಜಿ ಘೋಷಣೆ
ಮಮತಾ ಬ್ಯಾನರ್ಜಿ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 18, 2021 | 3:00 PM

Share

ಕೋಲ್ಕತ್ತಾ: ಮುಂಬರುವ ಪಶ್ಚಿಮ ಬಂಗಾಲ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿರುವ ಸುವೇಂದು ಅಧಿಕಾರಿ ವಿರುದ್ಧ  ನಂದಿಗ್ರಾಮದಲ್ಲಿ ಸ್ಪರ್ಧೆ ಮಾಡುವುದಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಘೋಷಣೆ ಮಾಡಿದ್ದಾರೆ.

ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲೇ ಸುವೇಂದು ಬಿಜೆಪಿ ಸೇರ್ಪಡೆ ಆಗಿದ್ದರು. ಅಂದಿನಿಂದಲೂ ಸುವೇಂದು ವಿರುದ್ಧ ಮಮತಾ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಈಗ ಅವರಿಗೆ ಪಾಠ ಕಲಿಸೋಕೆ ಮುಂದಾಗಿರುವ ಮಮತಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ನಂದಿಗ್ರಾಮದ ಜೊತೆಗೆ.. ಕೋಲ್ಕತ್ತಾದ ಭವಾನಿಪುರದಿಂದಲೂ ಮಮತಾ ಸ್ಪರ್ಧೆ ನಾನು ನಂದಿಗ್ರಾಮದಿಂದ ಸ್ಪರ್ಧೆ ಮಾಡುತ್ತೇನೆ. ನಂದಿಗ್ರಾಮ ನನ್ನ ಅದೃಷ್ಟದ ಜಾಗ ಎಂದು ಮಮತಾ ಇಂದಿನ ಚುನಾವಣಾ ಪ್ರಚಾರದ ವೇಳೆ ಹೇಳಿದ್ದಾರೆ. ಇದಲ್ಲದೆ, ಕೋಲ್ಕತ್ತಾದ ಭವಾನಿಪುರದಿಂದಲೂ ಮಮತಾ ಸ್ಪರ್ಧೆ ಮಾಡಲಿದ್ದಾರೆ.

ಈ ಹಿಂದೆಯೂ ನಂದಿಗ್ರಾಮದಿಂದ ಗೆದ್ದು ಬಂದಿದ್ದ ಮಮತಾ ಈ ಮೊದಲು ನಂದಿಗ್ರಾಮದ ನಂದಿರಂನಲ್ಲಿ ರೈತರ ಜಮೀನಿಗಾಗಿ ಮಮತಾ ಬ್ಯಾನರ್ಜಿ ಅಭಿಯಾನ ನಡೆಸಿದ್ದರು. ಇದರಿಂದಾಗಿಯೇ 2011 ರ ವಿಧಾನಸಭಾ ಚುನಾವಣೆಯಲ್ಲಿ ಅವರು ಅಧಿಕಾರಕ್ಕೆ ಬಂದಿದ್ದರು.

ಬಿಜೆಪಿ ಪಾಪಗಳನ್ನು ತೊಳೆಯುವ ವಾಶಿಂಗ್ ಮಶೀನ್.. ಭ್ರಷ್ಟರನ್ನೂ ಸಾಧುಗಳನ್ನಾಗಿಸುತ್ತದೆ: ಮಮತಾ ಬ್ಯಾನರ್ಜಿ ವ್ಯಂಗ್ಯ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ