AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿವೇಶನ ಜಾರಿಯಿರುವಾಗಲೇ ಮಮತಾ ಬ್ಯಾನರ್ಜಿ ದೆಹಲಿಯಲ್ಲಿ ಸೋನಿಯಾ ಮತ್ತು ಇತರ ವಿರೋಧ ಪಕ್ಷಗಳ ನಾಯಕರನ್ನು ಭೇಟಿಯಾಗಲಿದ್ದಾರೆ

ಚುನಾವಣಾ ರಣವ್ಯೂಹ ರಚಿಸುವುದರಲ್ಲಿ ಪರಿಣಿತ ಎನಿಸಿಕೊಂಡಿರುವ ಪ್ರಶಾಂತ್ ಕಿಶೋರ್ ಮತ್ತು ಶರದ್ ಪವಾರ್ ಅವರ ನಡುವೆ ಎರಡು ಸಭೆ ನಡೆದ ನಂತರ ಕಳೆದೊಂದು ತಿಂಗಳ ಆವಧಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಅಧಿವೇಶನ ಜಾರಿಯಿರುವಾಗಲೇ ಮಮತಾ ಬ್ಯಾನರ್ಜಿ ದೆಹಲಿಯಲ್ಲಿ ಸೋನಿಯಾ ಮತ್ತು ಇತರ ವಿರೋಧ ಪಕ್ಷಗಳ ನಾಯಕರನ್ನು ಭೇಟಿಯಾಗಲಿದ್ದಾರೆ
ಮಮತಾ ಬ್ಯಾನರ್ಜಿ ಮತ್ತು ಸೋನಿಯಾ ಗಾಂಧಿ
TV9 Web
| Edited By: |

Updated on: Jul 15, 2021 | 6:42 PM

Share

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ತಿಂಗಳ ಆಂತ್ಯದಲ್ಲಿ ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ವಿರೋಧ ಪಕ್ಷಗಳೆಲ್ಲ ಒಂದುಗೂಡಿ ಒಂದು ಸಂಯುಕ್ತ ರಂಗವನ್ನು ರಚಿಸಲು ನಡೆಸುತ್ತಿರುವ ಪ್ರಯತ್ನಗಳ ಹಿನ್ನೆಲೆಯಲ್ಲಿ ಮಮತಾ ಅವರ ದೆಹಲಿ ಭೇಟಿ ಬಹಳ ಮಹತ್ವದೆನಿಸಲಿದೆ. ಬಂಗಾಳದಲ್ಲಿ ಭರ್ಜರಿ ಜಯ ಸಾಧಿಸಿ ವಾಪಸ್ಸು ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಮಮತಾ ದೆಹಲಿಗೆ ಭೇಟಿ ನೀಡಲಿದ್ದಾರೆ. ಬಂಗಾಳದ ವಿಧಾನ ಸಭೆ ಚುನಾವಣೆ ಮೋದಿ ವರ್ಸಸ್ ದೀದಿ ಎಂದು ಬಿಂಬಿತವಾಗಿದ್ದರಿಂದ ಅವರು ಸಾಧಿಸಿದ ಜಯವು ಸಂಯುಕ್ತ ರಂಗ ರಚನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವಂಥ ಸ್ಥಿತಿ ಉಂಟುಮಾಡಿದೆ.

ಮೂಲಗಳ ಪ್ರಕಾರ ಮಮತಾ ಅವರ ಪ್ರವಾಸ ನಾಲ್ಕು ದಿನಳ ಅವಧಿಯದಾಗಿದ್ದು, ಸೋನಿಯಾ ಅವರಲ್ಲದೆ, ವಿರೋಧ ಪಕ್ಷಗಳ ಹಲವಾರು ನಾಯಕರನ್ನು ಅವರು ಭೇಟಿಯಾಗಲಿದ್ದಾರೆ. ಅವರಲ್ಲಿ ಪ್ರಮುಖರೆಂದರೆ, ಎನ್​ಸಿಪಿ ಮುಖಂಡ ಶರದ್ ಪವಾರ್, ಸಮಾಜವಾದಿ ಪಕ್ಷದ ಚೀಫ್ ಅಖಿಲೇಶ್ ಯಾದವ್ ಮತ್ತು ಆಪ್ ಪಕ್ಷದ ಧುರೀಣ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದ್ದಾರೆ.

ಗುರುವಾರದಂದು ಕೊಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಮಮತಾ, ‘ಚುನಾವಣೆಯ ನಂತರ ನಾನು ದೆಹಲಿಗೆ ಹೋಗಿಲ್ಲ. ಈಗ ಕೋವಿಡ್ ಸ್ಥಿತಿ ಸುಧಾರಿಸಿರಿವುದರಿಂದ, ಮಾನ್ಸೂನ್ ಅಧಿವೇಶನ ಜಾರಿಯಲ್ಲಿರುವಾಗಲೇ ದೆಹಲಿಗೆ ಹೋಗಿ ನನ್ನ ಸ್ನೇಹಿತರನ್ನು ಭೇಟಿಮಾಡುವೆ,’ ಎಂದು ಹೇಳಿದರು. ‘ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಸಮಯ ನೀಡಿದರೆ ಅವರನ್ನೂ ಭೇಟಿ ಮಾಡುವೆ,’ ಅಂತ ಹೇಳಿದ ಮಮತಾ, ಪ್ರವಾಸದ ದಿನಾಂಕವನ್ನು ಇನ್ನೂ ನಿಗದಿಪಡಿಸಿಲ್ಲ ಎಂದರು.

ಚುನಾವಣಾ ರಣವ್ಯೂಹ ರಚಿಸುವುದರಲ್ಲಿ ಪರಿಣಿತ ಎನಿಸಿಕೊಂಡಿರುವ ಪ್ರಶಾಂತ್ ಕಿಶೋರ್ ಮತ್ತು ಶರದ್ ಪವಾರ್ ಅವರ ನಡುವೆ ಎರಡು ಸಭೆ ನಡೆದ ನಂತರ ಕಳೆದೊಂದು ತಿಂಗಳ ಆವಧಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ತಾವು ರಾಜಕೀಯವನ್ನು ಚರ್ಚಿಸಲಿಲ್ಲ ಎಂದು ಪವಾರ್ ಆವರು ಹೇಳಿದ್ದರೂ ಈ ವಾರದ ಆರಂಭದಲ್ಲಿ ಕಿಶೋರ್ ಅವರು; ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾಗಿ ಸುಮಾರು ನಾಲ್ಕು ತಾಸು ಮಾತುಕತೆ ನಡೆಸಿದ್ದು ತೃತೀಯ ರಂಗದ ರಚನೆ ಬಗ್ಗೆ ಗುಮಾನಿಗಳು ದಟ್ಟವಾಗಿವೆ. ಕಿಶೋರ್ ಯಾವುದಾದರೂ ರಾಜಕೀಯ ಪಕ್ಷ ಸೇರುವುದು ಸಹ ಚರ್ಚೆಯಲ್ಲಿರುವ ವಿಷಯವಾಗಿದೆ.

ಮೂಲಗಳ ಪ್ರಕಾರ ಕಿಶೋರ್ ಮತ್ತು ಗಾಂಧಿಗಳ ನಡುವೆ ನಡೆದ ಸಭೆಯಲ್ಲಿ; ಮುಂದಿನ ವರ್ಷ ಸಾಲು ಸಾಲು ವಿಧಾನ ಸಭೆ ಚುನಾವಣೆ ಮತ್ತು ಮೂರು ವರ್ಷಗಳ ನಂತರ ಲೋಕ ಸಭಾ ಚುನಾವಣೆ ನಡೆಯಲಿರುವುದರಿಂದ ಕಿಶೋರ್ ಅವರಿಗೆ ಒಂದು ನಿರ್ಣಾಯಕ ಭೂಮಿಕೆಯನ್ನು ನೀಡುವ ಕುರಿತು ಚರ್ಚೆಯಾಗಿದೆ

ಏತನ್ಮಧ್ಯೆ, ಮಮತಾ ಅವರಿ ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗಲೇ, ದೆಹಲಿಗೆ ಹೋಗುವ ನಿರ್ಧಾರ ಮಾಡಿದ್ದಾರೆ. ಅವರ ಪ್ರವಾಸಕ್ಕೆ ಯಾಕೆ ಹೆಚ್ಚು ಮಹತ್ವ ಪಡೆದುಕೊಂಡಿದೆಯೆಂದರೆ, ಅಧಿವೇಶನದಲ್ಲಿ ವಿರೋಧ ಪಕ್ಷಗಳು ಕೋವಿಡ್​ ನಿರ್ವಹಣೆ ಮತ್ತು ಬೆಲೆಯೇರಿಕೆ ಸೇರಿದಂತೆ ಹಲವಾರು ವಿಷಯಗಳ ಮೇಲೆ ಸರ್ಕಾರವನ್ನು ಟಾರ್ಗೆಟ್ ಮಾಡಲು ನಿರ್ಧರಿಸಿವೆ.

ಕೋವಿಡ್​ ಹಿನ್ನೆಲೆಯಲ್ಲಿ ಅಧಿವೇಶನಕ್ಕೆ ಮೊದಲು ನಡೆಯಬೇಕಿದ್ದ ವಿರೋಧ ಪಕ್ಷಗಳ ಸಾಂಪ್ರದಾಯಿಕ ಸಭೆ ಈ ಬಾರಿ ನಡೆದಿಲ್ಲ.

ಇದನ್ನೂ ಓದಿ: ಶರದ್ ಪವಾರ್ ಭೇಟಿ ಮಾಡಿದ ಚುನಾವಣಾ ತಂತ್ರ ಪರಿಣತ ಪ್ರಶಾಂತ್ ಕಿಶೋರ್; 15 ದಿನಗಳಲ್ಲಿ ಇದು ಮೂರನೇ ಬಾರಿ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು