AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳವನ್ನು ಮುಸ್ಲಿಂ ರಾಜ್ಯ ಮಾಡಲು ಮಮತಾ ಬಯಸಿದ್ದಾರೆ: ಕೇಂದ್ರ ಸಚಿವ ಗಿರಿರಾಜ್ ಸಿಂಗ್

"ಕೇಂದ್ರದಲ್ಲಿ ಮತ್ತೆ ಮತ ಚಲಾಯಿಸಿದರೆ, ನಾವು ರಾಷ್ಟ್ರೀಯ ನಾಗರಿಕರ ನೋಂದಣಿ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಏಕರೂಪ ನಾಗರಿಕ ಸಂಹಿತೆ, ಜೊತೆಗೆ ಜನಸಂಖ್ಯೆ ನಿಯಂತ್ರಣದ ಕ್ರಮಗಳನ್ನು ಜಾರಿಗೊಳಿಸುತ್ತೇವೆ. ಕಿಮ್ ಜಾಂಗ್ ಉನ್ ಅವರಂತಹ (ಮಮತಾ) ಸರ್ವಾಧಿಕಾರವನ್ನು ನಾವು ಕೊನೆಗೊಳಿಸುತ್ತೇವೆ ಎಂದ ಕೇಂದ್ರ ಸಚಿವ ಗಿರಿರಾಜ್ ಸಿಂಗ್.

ಬಂಗಾಳವನ್ನು ಮುಸ್ಲಿಂ ರಾಜ್ಯ ಮಾಡಲು ಮಮತಾ ಬಯಸಿದ್ದಾರೆ: ಕೇಂದ್ರ ಸಚಿವ ಗಿರಿರಾಜ್ ಸಿಂಗ್
ಗಿರಿರಾಜ್ ಸಿಂಗ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 15, 2024 | 5:49 PM

Share

ದೆಹಲಿ ಮೇ 15: ಕೇಂದ್ರ ಸಚಿವ ಗಿರಿರಾಜ್ ಸಿಂಗ್ (Giriraj Singh) ಅವರು ಬುಧವಾರ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ವಾಗ್ದಾಳಿ ನಡೆಸಿದ್ದು, ಮಮತಾ ಪಶ್ಚಿಮ ಬಂಗಾಳವನ್ನು (West Bengal) ‘ಮುಸ್ಲಿಂ ರಾಜ್ಯ’ ಮಾಡಲು ಚಿಂತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಂಗಾಳವನ್ನು ಮುಸ್ಲಿಂ (ಬಹುಮತ) ರಾಜ್ಯವಾಗಬೇಕೆಂದು ಮಮತಾ ಬ್ಯಾನರ್ಜಿ ಬಯಸಿದ್ದಾರೆ. ಕಳೆದ ಚುನಾವಣೆಗಳಿಗೆ (2021ರ ವಿಧಾನಸಭೆ ಚುನಾವಣೆ) ಮುನ್ನ, ಅವರ ಸರ್ಕಾರದ ಸಚಿವರೊಬ್ಬರು ಪತ್ರಕರ್ತರಿಗೆ ‘ಮಿನಿ-ಪಾಕಿಸ್ತಾನ’ ಎಂದು ಕರೆಯುವ ಮಾರ್ಗದರ್ಶಕ ಪ್ರವಾಸವನ್ನು ನೀಡಿದರು. ಅವರು ಬಂಗಾಳವನ್ನು ಮಿನಿ-ಪಾಕಿಸ್ತಾನವನ್ನಾಗಿ ಮಾಡಲು ಬಯಸುತ್ತಾರೆ ಎಂಬುದನ್ನು ಇದು ತೋರಿಸುತ್ತದೆ ಎಂದು ಪಾಟ್ನಾದಲ್ಲಿ ಎಎನ್ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಸಿಂಗ್ ಹೇಳಿದ್ದಾರೆ.

“ಕೇಂದ್ರದಲ್ಲಿ ಮತ್ತೆ ಮತ ಚಲಾಯಿಸಿದರೆ, ನಾವು ರಾಷ್ಟ್ರೀಯ ನಾಗರಿಕರ ನೋಂದಣಿ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಏಕರೂಪ ನಾಗರಿಕ ಸಂಹಿತೆ, ಜೊತೆಗೆ ಜನಸಂಖ್ಯೆ ನಿಯಂತ್ರಣದ ಕ್ರಮಗಳನ್ನು ಜಾರಿಗೊಳಿಸುತ್ತೇವೆ. ಕಿಮ್ ಜಾಂಗ್ ಉನ್ ಅವರಂತಹ (ಮಮತಾ) ಸರ್ವಾಧಿಕಾರವನ್ನು ನಾವು ಕೊನೆಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ಬಿಹಾರದ ಬೇಗುಸರಾಯ್‌ನಿಂದ ಸತತ ಎರಡನೇ ಬಾರಿಗೆ ಲೋಕಸಭೆಗೆ ಸ್ಪರ್ಧಿಸಲು ಬಯಸುತ್ತಿರುವ ಬಿಜೆಪಿ ನಾಯಕ, ವಿರೋಧ ಪಕ್ಷದ ಇಂಡಿಯಾ ಬ್ಲಾಕ್ ಸದಸ್ಯರು ದೇಶದ ಮೇಲೆ ‘ಇಸ್ಲಾಮಿಕ್ ಆಡಳಿತ’ ಜಾರಿಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು (ಬಿಹಾರದ ಮಾಜಿ ಮುಖ್ಯಮಂತ್ರಿ) ಲಾಲು ಯಾದವ್ ಅವರು ತಮ್ಮನ್ನು ಹಿಂದುಳಿದ ಸಮುದಾಯಗಳ ಹಿತೈಷಿಗಳೆಂದು ಹೇಳಿಕೊಳ್ಳುತ್ತಾರೆ. ಆದರೆ, ಅವರು (ಕಾಂಗ್ರೆಸ್) ಮುಸ್ಲಿಮರಿಗೆ ಕರ್ನಾಟಕದಲ್ಲಿ ಒಬಿಸಿ ಸ್ಥಾನಮಾನ ನೀಡುವ ಮೂಲಕ ಅವರ ಪಾಲಿನ ಕೋಟಾದಿಂದ ವಂಚಿತರಾಗಿದ್ದಾರೆ. ಭಾರತವನ್ನು ಇಸ್ಲಾಮಿಕ್ ರಾಜ್ಯವನ್ನಾಗಿ ಮಾಡುವ ದೊಡ್ಡ ಯೋಜನೆಯನ್ನು ಸೂಚಿಸುತ್ತದೆ, ”ಎಂದಿದ್ದಾರೆ ಸಚಿವರು.

ಮಂಗಳವಾರ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಸಾರ್ವತ್ರಿಕ ಚುನಾವಣೆಯ ನಂತರ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದರು. “ಲೋಕಸಭಾ ಚುನಾವಣೆಯಲ್ಲಿ ಮೋದಿ ಅಧಿಕಾರಕ್ಕೆ ಮರಳುವುದಿಲ್ಲ ಎಂಬುದು ಒಂದೇ ಗ್ಯಾರಂಟಿ. ಇಂಡಿಯಾ ಬಣ 295 ರಿಂದ 315 ಸ್ಥಾನಗಳನ್ನು ಪಡೆಯುತ್ತದೆ ಮತ್ತು ಬಿಜೆಪಿ ಗರಿಷ್ಠ 200 ಕ್ಕೆ ಸೀಮಿತವಾಗಲಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: CAA ಅಡಿಯಲ್ಲಿ 14 ಜನರಿಗೆ ಪೌರತ್ವ ಪ್ರಮಾಣಪತ್ರ ಹಸ್ತಾಂತರಿಸಿದ ಕೇಂದ್ರ

ಪಶ್ಚಿಮ ಬಂಗಾಳದಲ್ಲಿ ಎಲ್ಲಾ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ. 2019 ರ ಚುನಾವಣೆಯಲ್ಲಿ, ಬಿಜೆಪಿ 18 ಸ್ಥಾನಗಳನ್ನು ಗೆದ್ದರೆ, ತೃಣಮೂಲ ಕಾಂಗ್ರೆಸ್ 22 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ ಕೇವಲ 2 ಸ್ಥಾನಗಳೊಂದಿಗೆ ಕಡಿಮೆ ಮೂರನೇ ಸ್ಥಾನದಲ್ಲಿದ್ದರೆ ಎಡರಂಗವು ಕೇವಲ ಒಂದು ಸ್ಥಾನಕ್ಕೆ ಇಳಿದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!