ಗಣರಾಜ್ಯೋತ್ಸವದ ಪರೇಡ್‌ನಿಂದ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರ ಔಟ್; ತೀವ್ರ ಆಘಾತವಾಗಿದೆ ಎಂದು ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು "ಮುಂಬರುವ ಗಣರಾಜ್ಯೋತ್ಸವ ಪರೇಡ್‌ಗೆ ಪಶ್ಚಿಮ ಬಂಗಾಳದ ಪ್ರಸ್ತಾವಿತ ಟ್ಯಾಬ್ಲೋವನ್ನು ತಿರಸ್ಕರಿಸಿದ" ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಗಣರಾಜ್ಯೋತ್ಸವದ ಪರೇಡ್‌ನಿಂದ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರ ಔಟ್; ತೀವ್ರ ಆಘಾತವಾಗಿದೆ ಎಂದು ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ
ನರೇಂದ್ರ ಮೋದಿ ಜತೆ ಮಮತಾ ಬ್ಯಾನರ್ಜಿ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jan 17, 2022 | 7:06 PM

ಕೊಲ್ಕತ್ತಾ: ಮುಂಬರುವ ಗಣರಾಜ್ಯೋತ್ಸವದ ಪರೇಡ್​​ನಲ್ಲಿ(Republic Day parade)  ಪಶ್ಚಿಮ ಬಂಗಾಳದ ಪ್ರಸ್ತಾವಿತ ಸ್ತಬ್ಧ ಚಿತ್ರ ತಿರಸ್ಕರಿಸಿದ್ದಕ್ಕಾಗಿ ಆಘಾತ ವ್ಯಕ್ತ ಪಡಿಸಿ ಪಶ್ಚಿಮ ಬಂಗಾಳದ ಪ್ರಧಾನಿ ಮಮತಾ ಬ್ಯಾನರ್ಜಿ (Mamata Banerjee) ಅವರು ಜನವರಿ 16 ರ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಪತ್ರ ಬರೆದಿದ್ದು, “ಪರೇಡ್‌ನಲ್ಲಿ ಪಶ್ಚಿಮ ಬಂಗಾಳದ ಸ್ವಾತಂತ್ರ್ಯ ಹೋರಾಟಗಾರರ ಟ್ಯಾಬ್ಲೋವನ್ನು ಸೇರಿಸಲು ವಿನಂತಿಸಿದ್ದಾರೆ.  ಸುಭಾಷ್ ಚಂದ್ರ ಬೋಸ್ ಕುರಿತ ಪಶ್ಚಿಮ ಬಂಗಾಳದ ಗಣರಾಜ್ಯೋತ್ಸವದ ಸ್ತಬ್ಧಚಿತ್ರವನ್ನು ಕೇಂದ್ರವು ತಿರಸ್ಕರಿಸಿದ ನಂತರ ಮಧ್ಯಪ್ರವೇಶಿಸುವಂತೆ ಕೋರಿ ಪ್ರಧಾನಿ ಮೋದಿಗೆ ಸಿಎಂ ಮಮತಾ ಪತ್ರ ಬರೆದಿದ್ದಾರೆ. ರಾಜ್ಯದ ಸ್ತಬ್ಧಚಿತ್ರವನ್ನು ತಿರಸ್ಕರಿಸಿದ ಬಗ್ಗೆ ಆಘಾತವನ್ನು ವ್ಯಕ್ತಪಡಿಸಿದ್ದು ಗಣರಾಜ್ಯೋತ್ಸವದ ಪರೇಡ್‌ನಿಂದ ಪಶ್ಚಿಮ ಬಂಗಾಳ ಸರ್ಕಾರದ ಉದ್ದೇಶಿತ ಸ್ತಬ್ಧಚಿತ್ರವನ್ನು ಹಠಾತ್ತನೆ ಹೊರಗಿಡುವ ಭಾರತ ಸರ್ಕಾರದ ನಿರ್ಧಾರದಿಂದ ನನಗೆ ನೋವಾಗಿದೆ ಎಂದು ಹೇಳಿದರು.  “ಯಾವುದೇ ಕಾರಣಗಳು ಅಥವಾ ಸಮರ್ಥನೆಗಳನ್ನು ನೀಡದೆ ಸ್ತಬ್ಧಚಿತ್ರವನ್ನು ತಿರಸ್ಕರಿಸಲಾಗಿದೆ ಎಂಬುದು ನಮಗೆ ಇನ್ನಷ್ಟು ಗೊಂದಲದ ಸಂಗತಿಯಾಗಿದೆ. ಪ್ರಸ್ತಾವಿತ ಸ್ತಬ್ಧ ಚಿತ್ರವು ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಅವರ ಐಎನ್ಒ ಬಗ್ಗೆ ಅವರ 125 ನೇ ಜನ್ಮ ವಾರ್ಷಿಕೋತ್ಸವದ ವರ್ಷದಲ್ಲಿ ಅವರ ಕೊಡುಗೆಗಳನ್ನು ಸ್ಮರಿಸುತ್ತಿದೆ. ಇದು ಕೆಲವು ಹೆಚ್ಚಿನವರ ಭಾವಚಿತ್ರಗಳನ್ನು ಹೊಂದಿತ್ತು. ಈಶ್ವರಚಂದ್ರ ವಿದ್ಯಾಸಾಗರ್, ರವೀಂದ್ರನಾಥ ಟ್ಯಾಗೋರ್, ಸ್ವಾಮಿ ವಿವೇಕಾನಂದ, ದೇಶಬಂಧು ಚಿತ್ತರಂಜನ್ ದಾಸ್, ಶ್ರೀ ಅರಬಿಂದೋ, ಮಾತಂಗಿನಿ ಹಜ್ರಾ, ನಜ್ರುಲ್, ಬಿರ್ಸಾ ಮುಂಡಾ ಮತ್ತು ಅನೇಕ ದೇಶಭಕ್ತರನ್ನು ಇದು ಹೊಂದಿತ್ತು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು “ಮುಂಬರುವ ಗಣರಾಜ್ಯೋತ್ಸವ ಪರೇಡ್‌ಗೆ ಪಶ್ಚಿಮ ಬಂಗಾಳದ ಪ್ರಸ್ತಾವಿತ ಟ್ಯಾಬ್ಲೋವನ್ನು ತಿರಸ್ಕರಿಸಿದ” ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ ಮತ್ತು “ಪರೇಡ್‌ನಲ್ಲಿ ಪಶ್ಚಿಮ ಬಂಗಾಳದ ಸ್ವಾತಂತ್ರ್ಯ ಹೋರಾಟಗಾರರ ಟ್ಯಾಬ್ಲೋವನ್ನು ಸೇರಿಸಲು ವಿನಂತಿಸಿದ್ದಾರೆ ಎಂದು ಎಎನ್ಐ ಟ್ವೀಟ್ ಮಾಡಿದೆ.

ಕೇಂದ್ರ ಸರ್ಕಾರದ ಈ ಧೋರಣೆಯಿಂದ ಪಶ್ಚಿಮ ಬಂಗಾಳದ ಜನರು ತೀವ್ರ ನೋವನ್ನು ಅನುಭವಿಸಿದ್ದಾರೆ ಮತ್ತು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಬಂಗಾಳವು ಮುಂಚೂಣಿಯಲ್ಲಿದೆ ಎಂದು ಪ್ರತಿಪಾದಿಸಿದ ಅವರು, ವಿಭಜನೆ ಮತ್ತು ಲಕ್ಷಾಂತರ ಜನರನ್ನು ಬೇರುಸಹಿತ ಕಿತ್ತುಹಾಕುವ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ಭಾರಿ ಬೆಲೆಯನ್ನು ಜನರು ಪಾವತಿಸಿದ್ದಾರೆ ಎಂದಿದ್ದಾರೆ.

“ನಮ್ಮ ಸ್ವಾತಂತ್ರ್ಯದ 75 ನೇ ವರ್ಷದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಆಚರಿಸಲು ರಾಷ್ಟ್ರದ ಸಮಾರಂಭದಲ್ಲಿ ಅದರ ವೀರ ಸ್ವಾತಂತ್ರ್ಯ ಹೋರಾಟಗಾರರ ಈ ಕೊಡುಗೆಗೆ ಯಾವುದೇ ಸ್ಥಾನವಿಲ್ಲ ಎಂದು ಕಂಡುಕೊಳ್ಳುವುದು ಆಘಾತಕಾರಿಯಾಗಿದೆ” ಎಂದು ಪತ್ರದಲ್ಲಿ ಹೇಳಿದ್ದಾರೆ.  ಏತನ್ಮಧ್ಯೆ, ಎಎನ್‌ಐ ಮೂಲಗಳ ಪ್ರಕಾರ, ಸುಭಾಸ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಒಳಗೊಂಡಂತೆ ಗಣರಾಜ್ಯೋತ್ಸವದ ಆಚರಣೆಗಳು ಈಗ ಪ್ರತಿ ವರ್ಷ ಜನವರಿ 24 ರ ಬದಲಿಗೆ ಜನವರಿ 23 ರಿಂದ ಪ್ರಾರಂಭವಾಗುತ್ತವೆ.

ಇದನ್ನೂ ಓದಿ: ಕಾನೂನು ಕುಣಿಕೆಯಿಂದ ಪಾರಾಗಲು ತನ್ನ ಸಾವಿನ ಕುರಿತೇ ಕತೆ ಕಟ್ಟಿ ಮತ್ತೊಂದು ದೇಶಕ್ಕೆ ಪಲಾಯನವಾದ ಅತ್ಯಾಚಾರ ಆರೋಪಿ

Published On - 6:32 pm, Sun, 16 January 22

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ