AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿ ಮುಖಕ್ಕೆ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ ಯುವಕ, ಯಾಕೆ?

ಚಂಡೀಗಢ: ಕೇವಲ 2,000 ರೂಪಾಯಿಗಾಗಿ ತನ್ನ ಗೆಳತಿಯ ಮುಖಕ್ಕೆ ಯುವಕನೊಬ್ಬ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿರುವ ಘಟನೆ ನಗರದಲ್ಲಿ ನಡೆದಿದೆ. ದೇಶದ ಈಶಾನ್ಯ ಭಾಗದ ಶಿಲ್ಲಾಂಗ್​ ಮೂಲದ 22 ವರ್ಷದ ಯುವತಿ ಕಳೆದ ವರ್ಷ ನೌಕರಿ ಅರಸಿ ನಗರಕ್ಕೆ ಬಂದು ನೆಲೆಸಿದ್ದಳು. ಈ ವೇಳೆ ಯುವತಿಗೆ ಆರೋಪಿಯ ಪರಿಚಯವಾಗಿ ಇಬ್ಬರೂ ಹತ್ತಿರವಾಗಿದ್ದರು. ಆದರೆ, ಇತ್ತೀಚೆಗೆ ಯುವಕನು ಆಕೆಯ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದನಂತೆ. ಅಂತೆಯೇ, ಈ ಬಾರಿಯೂ 2,000 ರೂಪಾಯಿ ಡಿಮ್ಯಾಂಡ್​ ಮಾಡಿದ್ದ. ಇವನ […]

ಗೆಳತಿ ಮುಖಕ್ಕೆ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ ಯುವಕ, ಯಾಕೆ?
ಪ್ರಾತಿನಿಧಿಕ ಚಿತ್ರ
KUSHAL V
| Updated By: |

Updated on:Jul 28, 2020 | 12:48 AM

Share

ಚಂಡೀಗಢ: ಕೇವಲ 2,000 ರೂಪಾಯಿಗಾಗಿ ತನ್ನ ಗೆಳತಿಯ ಮುಖಕ್ಕೆ ಯುವಕನೊಬ್ಬ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿರುವ ಘಟನೆ ನಗರದಲ್ಲಿ ನಡೆದಿದೆ.

ದೇಶದ ಈಶಾನ್ಯ ಭಾಗದ ಶಿಲ್ಲಾಂಗ್​ ಮೂಲದ 22 ವರ್ಷದ ಯುವತಿ ಕಳೆದ ವರ್ಷ ನೌಕರಿ ಅರಸಿ ನಗರಕ್ಕೆ ಬಂದು ನೆಲೆಸಿದ್ದಳು. ಈ ವೇಳೆ ಯುವತಿಗೆ ಆರೋಪಿಯ ಪರಿಚಯವಾಗಿ ಇಬ್ಬರೂ ಹತ್ತಿರವಾಗಿದ್ದರು. ಆದರೆ, ಇತ್ತೀಚೆಗೆ ಯುವಕನು ಆಕೆಯ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದನಂತೆ.

ಅಂತೆಯೇ, ಈ ಬಾರಿಯೂ 2,000 ರೂಪಾಯಿ ಡಿಮ್ಯಾಂಡ್​ ಮಾಡಿದ್ದ. ಇವನ ಕಾಟಕ್ಕೆ ರೋಸು ಹೋಗಿದ್ದ ಯುವತಿ ನಿರಾಕರಿಸಿದಳು. ಅಷ್ಟಕ್ಕೇ ಸಿಟ್ಟಾದ ಆರೋಪಿ ಅಲ್ಲೇ ಇದ್ದ ಸ್ಯಾನಿಟೈಸರ್​ನ ಅವಳ ಮುಖಕ್ಕೆ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ್ದಾನೆ. ಇದರಿಂದ ತೀವ್ರ ಸುಟ್ಟು ಗಾಯಗಳನ್ನ ಅನುಭವಿಸಿದ ಯುವತಿಯ ಚೀರಾಟ ಕೇಳಿ ಅಕ್ಕಪಕ್ಕದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇದೀಗ ಯುವತಿ ನೀಡಿದ ದೂರಿನನ್ವಯ ಪೊಲೀಸರು ಯುವಕನನ್ನ ಬಂಧಿಸಿದ್ದಾರೆ.

Published On - 4:38 pm, Mon, 27 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ