AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿ ಮುಖಕ್ಕೆ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ ಯುವಕ, ಯಾಕೆ?

ಚಂಡೀಗಢ: ಕೇವಲ 2,000 ರೂಪಾಯಿಗಾಗಿ ತನ್ನ ಗೆಳತಿಯ ಮುಖಕ್ಕೆ ಯುವಕನೊಬ್ಬ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿರುವ ಘಟನೆ ನಗರದಲ್ಲಿ ನಡೆದಿದೆ. ದೇಶದ ಈಶಾನ್ಯ ಭಾಗದ ಶಿಲ್ಲಾಂಗ್​ ಮೂಲದ 22 ವರ್ಷದ ಯುವತಿ ಕಳೆದ ವರ್ಷ ನೌಕರಿ ಅರಸಿ ನಗರಕ್ಕೆ ಬಂದು ನೆಲೆಸಿದ್ದಳು. ಈ ವೇಳೆ ಯುವತಿಗೆ ಆರೋಪಿಯ ಪರಿಚಯವಾಗಿ ಇಬ್ಬರೂ ಹತ್ತಿರವಾಗಿದ್ದರು. ಆದರೆ, ಇತ್ತೀಚೆಗೆ ಯುವಕನು ಆಕೆಯ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದನಂತೆ. ಅಂತೆಯೇ, ಈ ಬಾರಿಯೂ 2,000 ರೂಪಾಯಿ ಡಿಮ್ಯಾಂಡ್​ ಮಾಡಿದ್ದ. ಇವನ […]

ಗೆಳತಿ ಮುಖಕ್ಕೆ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ ಯುವಕ, ಯಾಕೆ?
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on:Jul 28, 2020 | 12:48 AM

Share

ಚಂಡೀಗಢ: ಕೇವಲ 2,000 ರೂಪಾಯಿಗಾಗಿ ತನ್ನ ಗೆಳತಿಯ ಮುಖಕ್ಕೆ ಯುವಕನೊಬ್ಬ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿರುವ ಘಟನೆ ನಗರದಲ್ಲಿ ನಡೆದಿದೆ.

ದೇಶದ ಈಶಾನ್ಯ ಭಾಗದ ಶಿಲ್ಲಾಂಗ್​ ಮೂಲದ 22 ವರ್ಷದ ಯುವತಿ ಕಳೆದ ವರ್ಷ ನೌಕರಿ ಅರಸಿ ನಗರಕ್ಕೆ ಬಂದು ನೆಲೆಸಿದ್ದಳು. ಈ ವೇಳೆ ಯುವತಿಗೆ ಆರೋಪಿಯ ಪರಿಚಯವಾಗಿ ಇಬ್ಬರೂ ಹತ್ತಿರವಾಗಿದ್ದರು. ಆದರೆ, ಇತ್ತೀಚೆಗೆ ಯುವಕನು ಆಕೆಯ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದನಂತೆ.

ಅಂತೆಯೇ, ಈ ಬಾರಿಯೂ 2,000 ರೂಪಾಯಿ ಡಿಮ್ಯಾಂಡ್​ ಮಾಡಿದ್ದ. ಇವನ ಕಾಟಕ್ಕೆ ರೋಸು ಹೋಗಿದ್ದ ಯುವತಿ ನಿರಾಕರಿಸಿದಳು. ಅಷ್ಟಕ್ಕೇ ಸಿಟ್ಟಾದ ಆರೋಪಿ ಅಲ್ಲೇ ಇದ್ದ ಸ್ಯಾನಿಟೈಸರ್​ನ ಅವಳ ಮುಖಕ್ಕೆ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ್ದಾನೆ. ಇದರಿಂದ ತೀವ್ರ ಸುಟ್ಟು ಗಾಯಗಳನ್ನ ಅನುಭವಿಸಿದ ಯುವತಿಯ ಚೀರಾಟ ಕೇಳಿ ಅಕ್ಕಪಕ್ಕದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇದೀಗ ಯುವತಿ ನೀಡಿದ ದೂರಿನನ್ವಯ ಪೊಲೀಸರು ಯುವಕನನ್ನ ಬಂಧಿಸಿದ್ದಾರೆ.

Published On - 4:38 pm, Mon, 27 July 20

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ