AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿ ಮುಖಕ್ಕೆ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ ಯುವಕ, ಯಾಕೆ?

ಚಂಡೀಗಢ: ಕೇವಲ 2,000 ರೂಪಾಯಿಗಾಗಿ ತನ್ನ ಗೆಳತಿಯ ಮುಖಕ್ಕೆ ಯುವಕನೊಬ್ಬ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿರುವ ಘಟನೆ ನಗರದಲ್ಲಿ ನಡೆದಿದೆ. ದೇಶದ ಈಶಾನ್ಯ ಭಾಗದ ಶಿಲ್ಲಾಂಗ್​ ಮೂಲದ 22 ವರ್ಷದ ಯುವತಿ ಕಳೆದ ವರ್ಷ ನೌಕರಿ ಅರಸಿ ನಗರಕ್ಕೆ ಬಂದು ನೆಲೆಸಿದ್ದಳು. ಈ ವೇಳೆ ಯುವತಿಗೆ ಆರೋಪಿಯ ಪರಿಚಯವಾಗಿ ಇಬ್ಬರೂ ಹತ್ತಿರವಾಗಿದ್ದರು. ಆದರೆ, ಇತ್ತೀಚೆಗೆ ಯುವಕನು ಆಕೆಯ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದನಂತೆ. ಅಂತೆಯೇ, ಈ ಬಾರಿಯೂ 2,000 ರೂಪಾಯಿ ಡಿಮ್ಯಾಂಡ್​ ಮಾಡಿದ್ದ. ಇವನ […]

ಗೆಳತಿ ಮುಖಕ್ಕೆ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ ಯುವಕ, ಯಾಕೆ?
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on:Jul 28, 2020 | 12:48 AM

Share

ಚಂಡೀಗಢ: ಕೇವಲ 2,000 ರೂಪಾಯಿಗಾಗಿ ತನ್ನ ಗೆಳತಿಯ ಮುಖಕ್ಕೆ ಯುವಕನೊಬ್ಬ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿರುವ ಘಟನೆ ನಗರದಲ್ಲಿ ನಡೆದಿದೆ.

ದೇಶದ ಈಶಾನ್ಯ ಭಾಗದ ಶಿಲ್ಲಾಂಗ್​ ಮೂಲದ 22 ವರ್ಷದ ಯುವತಿ ಕಳೆದ ವರ್ಷ ನೌಕರಿ ಅರಸಿ ನಗರಕ್ಕೆ ಬಂದು ನೆಲೆಸಿದ್ದಳು. ಈ ವೇಳೆ ಯುವತಿಗೆ ಆರೋಪಿಯ ಪರಿಚಯವಾಗಿ ಇಬ್ಬರೂ ಹತ್ತಿರವಾಗಿದ್ದರು. ಆದರೆ, ಇತ್ತೀಚೆಗೆ ಯುವಕನು ಆಕೆಯ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದನಂತೆ.

ಅಂತೆಯೇ, ಈ ಬಾರಿಯೂ 2,000 ರೂಪಾಯಿ ಡಿಮ್ಯಾಂಡ್​ ಮಾಡಿದ್ದ. ಇವನ ಕಾಟಕ್ಕೆ ರೋಸು ಹೋಗಿದ್ದ ಯುವತಿ ನಿರಾಕರಿಸಿದಳು. ಅಷ್ಟಕ್ಕೇ ಸಿಟ್ಟಾದ ಆರೋಪಿ ಅಲ್ಲೇ ಇದ್ದ ಸ್ಯಾನಿಟೈಸರ್​ನ ಅವಳ ಮುಖಕ್ಕೆ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ್ದಾನೆ. ಇದರಿಂದ ತೀವ್ರ ಸುಟ್ಟು ಗಾಯಗಳನ್ನ ಅನುಭವಿಸಿದ ಯುವತಿಯ ಚೀರಾಟ ಕೇಳಿ ಅಕ್ಕಪಕ್ಕದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇದೀಗ ಯುವತಿ ನೀಡಿದ ದೂರಿನನ್ವಯ ಪೊಲೀಸರು ಯುವಕನನ್ನ ಬಂಧಿಸಿದ್ದಾರೆ.

Published On - 4:38 pm, Mon, 27 July 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!