AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಪ್​ ಮೂಲಕ ನೀಡುತ್ತಿದ್ದ ಸಾಲಕ್ಕೆ ಶೇ 35 ಬಡ್ಡಿ! ರೈಡ್​ ವೇಳೆ ಹೊರಬಿತ್ತು ಭಯಾನಕ ಸತ್ಯ

ವಂಚನೆಗೆ ಬಳಕೆಯಾದ 75 ಬ್ಯಾಂಕ್​ ಖಾತೆ ವಹಿವಾಟಿಗೆ ನಿರ್ಬಂಧ ಹೇರಲಾಗಿದೆ. ಈ 75 ಖಾತೆಗಳಲ್ಲಿ ಸುಮಾರು 423 ಕೋಟಿ ರೂಪಾಯಿ ಇತ್ತು ಎನ್ನಲಾಗಿದೆ. ಈ ರೀತಿ ವಂಚನೆಗೆ 30 ಆ್ಯಪ್​ಗಳು ಬಳಕೆ ಆಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಆ್ಯಪ್​ ಮೂಲಕ ನೀಡುತ್ತಿದ್ದ ಸಾಲಕ್ಕೆ ಶೇ 35 ಬಡ್ಡಿ! ರೈಡ್​ ವೇಳೆ ಹೊರಬಿತ್ತು ಭಯಾನಕ ಸತ್ಯ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Dec 24, 2020 | 11:18 AM

Share

ಹೈದರಾಬಾದ್: ಆ್ಯಪ್​ ಮೂಲಕ ಸಾಲ ನೀಡಿ ಅದಕ್ಕೆ ಶೇ 35ರವರೆಗೆ ಬಡ್ಡಿ ವಿಧಿಸುತ್ತಿದ್ದ ಪ್ರಕರಣ ಗುರುಗ್ರಾಮ ಹಾಗೂ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅನೇಕರನ್ನು ಬಂಧಿಸಲಾಗಿದೆ. ವಂಚನೆಗೆ ಬಳಕೆಯಾದ 75 ಬ್ಯಾಂಕ್​ ಖಾತೆ ವಹಿವಾಟಿಗೆ ನಿರ್ಬಂಧ ಹೇರಲಾಗಿದೆ. ಈ 75 ಖಾತೆಗಳಲ್ಲಿ ಸುಮಾರು 423 ಕೋಟಿ ರೂಪಾಯಿ ಇತ್ತು ಎನ್ನಲಾಗಿದೆ. ಈ ರೀತಿ ವಂಚನೆಗೆ 30 ಆ್ಯಪ್​ಗಳು ಬಳಕೆ ಆಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಲ ನೀಡಿದವರು ಕಿರುಕುಳ ನೀಡಿದ ಪ್ರಕರಣದಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಹೀಗಾಗಿ, ಪೊಲೀಸರು ಹೈದರಾಬಾದ್​, ಗುರುಗ್ರಾಮ ಹಾಗೂ ಹರಿಯಾಣದಲ್ಲಿ ವಿವಿಧ ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ 16 ಜನರನ್ನು ಬಂಧಿಸಿದ್ದರು. ಈ ವೇಳೆ ನಿಜವಾದ ವಿಚಾರ ಹೊರ ಬಿದ್ದಿದೆ.

ಶರತ್​ ಚಂದ್ರ ಎಂಬಾತ ಆನಿಯನ್ ಕ್ರೆಡಿಟ್​ ಪ್ರೈವೇಟ್​ ಲಿಮಿಟೆಡ್​ ಮತ್ತು ಕ್ರೆಡ್​ ಫೋಕ್ಸ್ ಟೆಕ್ನಾಲಜಿ ಕಂಪೆನಿ ಸ್ಥಾಪನೆ ಮಾಡಿದ್ದ. ಈ ಸಂಸ್ಥೆ ಹೆಸರಲ್ಲಿ ಶರತ್​​ ಆ್ಯಪ್​ ಮೂಲಕ ಸಾಲ ನೀಡುತ್ತಿದ್ದ. ಬೆಂಗಳೂರಿನಲ್ಲಿ ಈ ಎರಡು ಕಂಪೆನಿಗಳು ನೋಂದಣಿ ಆಗಿದ್ದವು. ಗುರುಗ್ರಾಮ ಹಾಗೂ ಹೈದರಾಬಾದ್​ನಲ್ಲಿ ಕಾಲ್​ಸೆಂಟರ್​ಗಳನ್ನು ಇವನು ತೆರೆದಿದ್ದ. ಈ ಕಾಲ್​ ಸೆಂಟರ್​ ಮೂಲಕ ಸಾಲ ಪಡೆದವರಿಗೆ ಕಿರುಕುಳ ನೀಡುವ ಕೆಲಸ ನಡೆಯುತ್ತಿತ್ತು. ಈ ರೀತಿ ಕೆಲಸಕ್ಕಾಗಿಯೇ ಸಾವಿರಕ್ಕೂ ಅಧಿಕ ಜನರನ್ನು ನೇಮಕ ಮಾಡಿಕೊಳ್ಳಲಾಗಿತ್ತು.

ಈ ಘಟನೆ ಬೆನ್ನಲ್ಲೇ ಆರ್​ಬಿಐ ಕಠಿಣ ಸಂದೇಶವೊಂದನ್ನು ರವಾನೆ ಮಾಡಿದೆ. ಆ್ಯಪ್​ ಮೂಲಕ ಲೋನ್​ ನೀಡುವುದಾಗಿ ನಂಬಿಸಿ ಮೋಸ ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿವೆ. ಅಲ್ಲದೆ, ಈ ರೀತಿ ಆ್ಯಪ್​ಗಳನ್ನು ಬಳಕೆ ಮಾಡಿ ಮೋಸ ಹೋಗಬೇಡಿ ಎನ್ನುವ ಕಿವಿಮಾತನ್ನೂ ಹೇಳಿದೆ.

ಈ ಮಾಜಿ ಸಂಸದನ ಮನೆಯಲ್ಲಿರುವ ಕೆಲಸಗಾರರ ಹೆಸರಲ್ಲಿದೆ ಒಂಬತ್ತು ಕಂಪೆನಿ!

Published On - 9:53 pm, Wed, 23 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ