AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಪ್​ ಮೂಲಕ ನೀಡುತ್ತಿದ್ದ ಸಾಲಕ್ಕೆ ಶೇ 35 ಬಡ್ಡಿ! ರೈಡ್​ ವೇಳೆ ಹೊರಬಿತ್ತು ಭಯಾನಕ ಸತ್ಯ

ವಂಚನೆಗೆ ಬಳಕೆಯಾದ 75 ಬ್ಯಾಂಕ್​ ಖಾತೆ ವಹಿವಾಟಿಗೆ ನಿರ್ಬಂಧ ಹೇರಲಾಗಿದೆ. ಈ 75 ಖಾತೆಗಳಲ್ಲಿ ಸುಮಾರು 423 ಕೋಟಿ ರೂಪಾಯಿ ಇತ್ತು ಎನ್ನಲಾಗಿದೆ. ಈ ರೀತಿ ವಂಚನೆಗೆ 30 ಆ್ಯಪ್​ಗಳು ಬಳಕೆ ಆಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಆ್ಯಪ್​ ಮೂಲಕ ನೀಡುತ್ತಿದ್ದ ಸಾಲಕ್ಕೆ ಶೇ 35 ಬಡ್ಡಿ! ರೈಡ್​ ವೇಳೆ ಹೊರಬಿತ್ತು ಭಯಾನಕ ಸತ್ಯ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ರಶ್ಮಿ ಕಲ್ಲಕಟ್ಟ|

Updated on:Dec 24, 2020 | 11:18 AM

Share

ಹೈದರಾಬಾದ್: ಆ್ಯಪ್​ ಮೂಲಕ ಸಾಲ ನೀಡಿ ಅದಕ್ಕೆ ಶೇ 35ರವರೆಗೆ ಬಡ್ಡಿ ವಿಧಿಸುತ್ತಿದ್ದ ಪ್ರಕರಣ ಗುರುಗ್ರಾಮ ಹಾಗೂ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅನೇಕರನ್ನು ಬಂಧಿಸಲಾಗಿದೆ. ವಂಚನೆಗೆ ಬಳಕೆಯಾದ 75 ಬ್ಯಾಂಕ್​ ಖಾತೆ ವಹಿವಾಟಿಗೆ ನಿರ್ಬಂಧ ಹೇರಲಾಗಿದೆ. ಈ 75 ಖಾತೆಗಳಲ್ಲಿ ಸುಮಾರು 423 ಕೋಟಿ ರೂಪಾಯಿ ಇತ್ತು ಎನ್ನಲಾಗಿದೆ. ಈ ರೀತಿ ವಂಚನೆಗೆ 30 ಆ್ಯಪ್​ಗಳು ಬಳಕೆ ಆಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಲ ನೀಡಿದವರು ಕಿರುಕುಳ ನೀಡಿದ ಪ್ರಕರಣದಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಹೀಗಾಗಿ, ಪೊಲೀಸರು ಹೈದರಾಬಾದ್​, ಗುರುಗ್ರಾಮ ಹಾಗೂ ಹರಿಯಾಣದಲ್ಲಿ ವಿವಿಧ ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ 16 ಜನರನ್ನು ಬಂಧಿಸಿದ್ದರು. ಈ ವೇಳೆ ನಿಜವಾದ ವಿಚಾರ ಹೊರ ಬಿದ್ದಿದೆ.

ಶರತ್​ ಚಂದ್ರ ಎಂಬಾತ ಆನಿಯನ್ ಕ್ರೆಡಿಟ್​ ಪ್ರೈವೇಟ್​ ಲಿಮಿಟೆಡ್​ ಮತ್ತು ಕ್ರೆಡ್​ ಫೋಕ್ಸ್ ಟೆಕ್ನಾಲಜಿ ಕಂಪೆನಿ ಸ್ಥಾಪನೆ ಮಾಡಿದ್ದ. ಈ ಸಂಸ್ಥೆ ಹೆಸರಲ್ಲಿ ಶರತ್​​ ಆ್ಯಪ್​ ಮೂಲಕ ಸಾಲ ನೀಡುತ್ತಿದ್ದ. ಬೆಂಗಳೂರಿನಲ್ಲಿ ಈ ಎರಡು ಕಂಪೆನಿಗಳು ನೋಂದಣಿ ಆಗಿದ್ದವು. ಗುರುಗ್ರಾಮ ಹಾಗೂ ಹೈದರಾಬಾದ್​ನಲ್ಲಿ ಕಾಲ್​ಸೆಂಟರ್​ಗಳನ್ನು ಇವನು ತೆರೆದಿದ್ದ. ಈ ಕಾಲ್​ ಸೆಂಟರ್​ ಮೂಲಕ ಸಾಲ ಪಡೆದವರಿಗೆ ಕಿರುಕುಳ ನೀಡುವ ಕೆಲಸ ನಡೆಯುತ್ತಿತ್ತು. ಈ ರೀತಿ ಕೆಲಸಕ್ಕಾಗಿಯೇ ಸಾವಿರಕ್ಕೂ ಅಧಿಕ ಜನರನ್ನು ನೇಮಕ ಮಾಡಿಕೊಳ್ಳಲಾಗಿತ್ತು.

ಈ ಘಟನೆ ಬೆನ್ನಲ್ಲೇ ಆರ್​ಬಿಐ ಕಠಿಣ ಸಂದೇಶವೊಂದನ್ನು ರವಾನೆ ಮಾಡಿದೆ. ಆ್ಯಪ್​ ಮೂಲಕ ಲೋನ್​ ನೀಡುವುದಾಗಿ ನಂಬಿಸಿ ಮೋಸ ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿವೆ. ಅಲ್ಲದೆ, ಈ ರೀತಿ ಆ್ಯಪ್​ಗಳನ್ನು ಬಳಕೆ ಮಾಡಿ ಮೋಸ ಹೋಗಬೇಡಿ ಎನ್ನುವ ಕಿವಿಮಾತನ್ನೂ ಹೇಳಿದೆ.

ಈ ಮಾಜಿ ಸಂಸದನ ಮನೆಯಲ್ಲಿರುವ ಕೆಲಸಗಾರರ ಹೆಸರಲ್ಲಿದೆ ಒಂಬತ್ತು ಕಂಪೆನಿ!

Published On - 9:53 pm, Wed, 23 December 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ