AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಪ್​ ಮೂಲಕ ನೀಡುತ್ತಿದ್ದ ಸಾಲಕ್ಕೆ ಶೇ 35 ಬಡ್ಡಿ! ರೈಡ್​ ವೇಳೆ ಹೊರಬಿತ್ತು ಭಯಾನಕ ಸತ್ಯ

ವಂಚನೆಗೆ ಬಳಕೆಯಾದ 75 ಬ್ಯಾಂಕ್​ ಖಾತೆ ವಹಿವಾಟಿಗೆ ನಿರ್ಬಂಧ ಹೇರಲಾಗಿದೆ. ಈ 75 ಖಾತೆಗಳಲ್ಲಿ ಸುಮಾರು 423 ಕೋಟಿ ರೂಪಾಯಿ ಇತ್ತು ಎನ್ನಲಾಗಿದೆ. ಈ ರೀತಿ ವಂಚನೆಗೆ 30 ಆ್ಯಪ್​ಗಳು ಬಳಕೆ ಆಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಆ್ಯಪ್​ ಮೂಲಕ ನೀಡುತ್ತಿದ್ದ ಸಾಲಕ್ಕೆ ಶೇ 35 ಬಡ್ಡಿ! ರೈಡ್​ ವೇಳೆ ಹೊರಬಿತ್ತು ಭಯಾನಕ ಸತ್ಯ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: ರಶ್ಮಿ ಕಲ್ಲಕಟ್ಟ|

Updated on:Dec 24, 2020 | 11:18 AM

Share

ಹೈದರಾಬಾದ್: ಆ್ಯಪ್​ ಮೂಲಕ ಸಾಲ ನೀಡಿ ಅದಕ್ಕೆ ಶೇ 35ರವರೆಗೆ ಬಡ್ಡಿ ವಿಧಿಸುತ್ತಿದ್ದ ಪ್ರಕರಣ ಗುರುಗ್ರಾಮ ಹಾಗೂ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅನೇಕರನ್ನು ಬಂಧಿಸಲಾಗಿದೆ. ವಂಚನೆಗೆ ಬಳಕೆಯಾದ 75 ಬ್ಯಾಂಕ್​ ಖಾತೆ ವಹಿವಾಟಿಗೆ ನಿರ್ಬಂಧ ಹೇರಲಾಗಿದೆ. ಈ 75 ಖಾತೆಗಳಲ್ಲಿ ಸುಮಾರು 423 ಕೋಟಿ ರೂಪಾಯಿ ಇತ್ತು ಎನ್ನಲಾಗಿದೆ. ಈ ರೀತಿ ವಂಚನೆಗೆ 30 ಆ್ಯಪ್​ಗಳು ಬಳಕೆ ಆಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಲ ನೀಡಿದವರು ಕಿರುಕುಳ ನೀಡಿದ ಪ್ರಕರಣದಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಹೀಗಾಗಿ, ಪೊಲೀಸರು ಹೈದರಾಬಾದ್​, ಗುರುಗ್ರಾಮ ಹಾಗೂ ಹರಿಯಾಣದಲ್ಲಿ ವಿವಿಧ ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ 16 ಜನರನ್ನು ಬಂಧಿಸಿದ್ದರು. ಈ ವೇಳೆ ನಿಜವಾದ ವಿಚಾರ ಹೊರ ಬಿದ್ದಿದೆ.

ಶರತ್​ ಚಂದ್ರ ಎಂಬಾತ ಆನಿಯನ್ ಕ್ರೆಡಿಟ್​ ಪ್ರೈವೇಟ್​ ಲಿಮಿಟೆಡ್​ ಮತ್ತು ಕ್ರೆಡ್​ ಫೋಕ್ಸ್ ಟೆಕ್ನಾಲಜಿ ಕಂಪೆನಿ ಸ್ಥಾಪನೆ ಮಾಡಿದ್ದ. ಈ ಸಂಸ್ಥೆ ಹೆಸರಲ್ಲಿ ಶರತ್​​ ಆ್ಯಪ್​ ಮೂಲಕ ಸಾಲ ನೀಡುತ್ತಿದ್ದ. ಬೆಂಗಳೂರಿನಲ್ಲಿ ಈ ಎರಡು ಕಂಪೆನಿಗಳು ನೋಂದಣಿ ಆಗಿದ್ದವು. ಗುರುಗ್ರಾಮ ಹಾಗೂ ಹೈದರಾಬಾದ್​ನಲ್ಲಿ ಕಾಲ್​ಸೆಂಟರ್​ಗಳನ್ನು ಇವನು ತೆರೆದಿದ್ದ. ಈ ಕಾಲ್​ ಸೆಂಟರ್​ ಮೂಲಕ ಸಾಲ ಪಡೆದವರಿಗೆ ಕಿರುಕುಳ ನೀಡುವ ಕೆಲಸ ನಡೆಯುತ್ತಿತ್ತು. ಈ ರೀತಿ ಕೆಲಸಕ್ಕಾಗಿಯೇ ಸಾವಿರಕ್ಕೂ ಅಧಿಕ ಜನರನ್ನು ನೇಮಕ ಮಾಡಿಕೊಳ್ಳಲಾಗಿತ್ತು.

ಈ ಘಟನೆ ಬೆನ್ನಲ್ಲೇ ಆರ್​ಬಿಐ ಕಠಿಣ ಸಂದೇಶವೊಂದನ್ನು ರವಾನೆ ಮಾಡಿದೆ. ಆ್ಯಪ್​ ಮೂಲಕ ಲೋನ್​ ನೀಡುವುದಾಗಿ ನಂಬಿಸಿ ಮೋಸ ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿವೆ. ಅಲ್ಲದೆ, ಈ ರೀತಿ ಆ್ಯಪ್​ಗಳನ್ನು ಬಳಕೆ ಮಾಡಿ ಮೋಸ ಹೋಗಬೇಡಿ ಎನ್ನುವ ಕಿವಿಮಾತನ್ನೂ ಹೇಳಿದೆ.

ಈ ಮಾಜಿ ಸಂಸದನ ಮನೆಯಲ್ಲಿರುವ ಕೆಲಸಗಾರರ ಹೆಸರಲ್ಲಿದೆ ಒಂಬತ್ತು ಕಂಪೆನಿ!

Published On - 9:53 pm, Wed, 23 December 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ