AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಪ್​ ಮೂಲಕ ನೀಡುತ್ತಿದ್ದ ಸಾಲಕ್ಕೆ ಶೇ 35 ಬಡ್ಡಿ! ರೈಡ್​ ವೇಳೆ ಹೊರಬಿತ್ತು ಭಯಾನಕ ಸತ್ಯ

ವಂಚನೆಗೆ ಬಳಕೆಯಾದ 75 ಬ್ಯಾಂಕ್​ ಖಾತೆ ವಹಿವಾಟಿಗೆ ನಿರ್ಬಂಧ ಹೇರಲಾಗಿದೆ. ಈ 75 ಖಾತೆಗಳಲ್ಲಿ ಸುಮಾರು 423 ಕೋಟಿ ರೂಪಾಯಿ ಇತ್ತು ಎನ್ನಲಾಗಿದೆ. ಈ ರೀತಿ ವಂಚನೆಗೆ 30 ಆ್ಯಪ್​ಗಳು ಬಳಕೆ ಆಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಆ್ಯಪ್​ ಮೂಲಕ ನೀಡುತ್ತಿದ್ದ ಸಾಲಕ್ಕೆ ಶೇ 35 ಬಡ್ಡಿ! ರೈಡ್​ ವೇಳೆ ಹೊರಬಿತ್ತು ಭಯಾನಕ ಸತ್ಯ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Dec 24, 2020 | 11:18 AM

Share

ಹೈದರಾಬಾದ್: ಆ್ಯಪ್​ ಮೂಲಕ ಸಾಲ ನೀಡಿ ಅದಕ್ಕೆ ಶೇ 35ರವರೆಗೆ ಬಡ್ಡಿ ವಿಧಿಸುತ್ತಿದ್ದ ಪ್ರಕರಣ ಗುರುಗ್ರಾಮ ಹಾಗೂ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅನೇಕರನ್ನು ಬಂಧಿಸಲಾಗಿದೆ. ವಂಚನೆಗೆ ಬಳಕೆಯಾದ 75 ಬ್ಯಾಂಕ್​ ಖಾತೆ ವಹಿವಾಟಿಗೆ ನಿರ್ಬಂಧ ಹೇರಲಾಗಿದೆ. ಈ 75 ಖಾತೆಗಳಲ್ಲಿ ಸುಮಾರು 423 ಕೋಟಿ ರೂಪಾಯಿ ಇತ್ತು ಎನ್ನಲಾಗಿದೆ. ಈ ರೀತಿ ವಂಚನೆಗೆ 30 ಆ್ಯಪ್​ಗಳು ಬಳಕೆ ಆಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಲ ನೀಡಿದವರು ಕಿರುಕುಳ ನೀಡಿದ ಪ್ರಕರಣದಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಹೀಗಾಗಿ, ಪೊಲೀಸರು ಹೈದರಾಬಾದ್​, ಗುರುಗ್ರಾಮ ಹಾಗೂ ಹರಿಯಾಣದಲ್ಲಿ ವಿವಿಧ ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ 16 ಜನರನ್ನು ಬಂಧಿಸಿದ್ದರು. ಈ ವೇಳೆ ನಿಜವಾದ ವಿಚಾರ ಹೊರ ಬಿದ್ದಿದೆ.

ಶರತ್​ ಚಂದ್ರ ಎಂಬಾತ ಆನಿಯನ್ ಕ್ರೆಡಿಟ್​ ಪ್ರೈವೇಟ್​ ಲಿಮಿಟೆಡ್​ ಮತ್ತು ಕ್ರೆಡ್​ ಫೋಕ್ಸ್ ಟೆಕ್ನಾಲಜಿ ಕಂಪೆನಿ ಸ್ಥಾಪನೆ ಮಾಡಿದ್ದ. ಈ ಸಂಸ್ಥೆ ಹೆಸರಲ್ಲಿ ಶರತ್​​ ಆ್ಯಪ್​ ಮೂಲಕ ಸಾಲ ನೀಡುತ್ತಿದ್ದ. ಬೆಂಗಳೂರಿನಲ್ಲಿ ಈ ಎರಡು ಕಂಪೆನಿಗಳು ನೋಂದಣಿ ಆಗಿದ್ದವು. ಗುರುಗ್ರಾಮ ಹಾಗೂ ಹೈದರಾಬಾದ್​ನಲ್ಲಿ ಕಾಲ್​ಸೆಂಟರ್​ಗಳನ್ನು ಇವನು ತೆರೆದಿದ್ದ. ಈ ಕಾಲ್​ ಸೆಂಟರ್​ ಮೂಲಕ ಸಾಲ ಪಡೆದವರಿಗೆ ಕಿರುಕುಳ ನೀಡುವ ಕೆಲಸ ನಡೆಯುತ್ತಿತ್ತು. ಈ ರೀತಿ ಕೆಲಸಕ್ಕಾಗಿಯೇ ಸಾವಿರಕ್ಕೂ ಅಧಿಕ ಜನರನ್ನು ನೇಮಕ ಮಾಡಿಕೊಳ್ಳಲಾಗಿತ್ತು.

ಈ ಘಟನೆ ಬೆನ್ನಲ್ಲೇ ಆರ್​ಬಿಐ ಕಠಿಣ ಸಂದೇಶವೊಂದನ್ನು ರವಾನೆ ಮಾಡಿದೆ. ಆ್ಯಪ್​ ಮೂಲಕ ಲೋನ್​ ನೀಡುವುದಾಗಿ ನಂಬಿಸಿ ಮೋಸ ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿವೆ. ಅಲ್ಲದೆ, ಈ ರೀತಿ ಆ್ಯಪ್​ಗಳನ್ನು ಬಳಕೆ ಮಾಡಿ ಮೋಸ ಹೋಗಬೇಡಿ ಎನ್ನುವ ಕಿವಿಮಾತನ್ನೂ ಹೇಳಿದೆ.

ಈ ಮಾಜಿ ಸಂಸದನ ಮನೆಯಲ್ಲಿರುವ ಕೆಲಸಗಾರರ ಹೆಸರಲ್ಲಿದೆ ಒಂಬತ್ತು ಕಂಪೆನಿ!

Published On - 9:53 pm, Wed, 23 December 20

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ