AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾಧಿಕಾರಿ ಹೆಸರಲ್ಲಿ ಮಹಿಳೆಯರನ್ನು ಮೆಚ್ಚಿಸಿ, ಡೇಟಿಂಗ್​​ಗೆ ಹೋಗುತ್ತಿದ್ದ ವ್ಯಕ್ತಿ ಬಂಧನ..

ಶುಕ್ರವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ, ಅರ್ಚನಾ ರೆಡ್​ ಲೈಟ್​ ಗ್ರೇಟರ್​ ಕೈಲಾಶ್​​ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯೊಬ್ಬರನ್ನು ಭೇಟಿಯಾಗಲು ಈ ಪ್ರದೇಶಕ್ಕೆ ಬಂದಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಸೇನಾಧಿಕಾರಿ ಹೆಸರಲ್ಲಿ ಮಹಿಳೆಯರನ್ನು ಮೆಚ್ಚಿಸಿ, ಡೇಟಿಂಗ್​​ಗೆ ಹೋಗುತ್ತಿದ್ದ ವ್ಯಕ್ತಿ ಬಂಧನ..
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 19, 2021 | 5:32 PM

Share

ದೆಹಲಿ: ತಾನೊಬ್ಬ ಸೇನಾಧಿಕಾರಿ ಎಂದು ಹೇಳಿಕೊಂಡು ಮಹಿಳೆಯರನ್ನು ವಂಚಿಸುತ್ತಿದ್ದ 40 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸೋಷಿಯಲ್ ಮೀಡಿಯಾಗಳಲ್ಲಿ ಅಕೌಂಟ್​ಗಳನ್ನು ಹೊಂದಿದ್ದ ಈ ವ್ಯಕ್ತಿ ತಾನೊಬ್ಬ ಆರ್ಮಿ ಆಫೀಸರ್​ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಈತನ ಹೆಸರು ದಿಲೀಪ್​ ಕುಮಾರ್​ ಎಂದಾಗಿದ್ದು ದೆಹಲಿಯ ಮೋಹನ್ ಗಾರ್ಡನ್​ನಲ್ಲಿರುವ ಸೈನಿಕ್ ಎನ್​ಕ್ಲೇವ್​ ನಿವಾಸಿಯಾಗಿದ್ದ. ಶಾಲೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶುಕ್ರವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ, ಅರ್ಚನಾ ರೆಡ್​ ಲೈಟ್​ ಗ್ರೇಟರ್​ ಕೈಲಾಶ್​​ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯೊಬ್ಬರನ್ನು ಭೇಟಿಯಾಗಲು ಈ ಪ್ರದೇಶಕ್ಕೆ ಬಂದಿದ್ದ ಎಂದು ಪೊಲೀಸರು ಹೇಳಿದ್ದಾರೆ. ಈ ವೇಳೆ ಈತ ಸೇನಾ ಸಮವಸ್ತ್ರದಲ್ಲಿಯೇ ಇದ್ದ. ಹಾಗೇ ಒಂದು ನಕಲಿ ಐಡಿಯನ್ನೂ ಹೊಂದಿದ್ದ. ಆತನ ಮೊಬೈಲ್​ ಜತೆಗೆ ಫೇಕ್​ ಐಡಿ ಕಾರ್ಡ್​ನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಸೌತ್​​ನ ಡಿಸಿಪಿ ಅತುಲ್​ ಕುಮಾರ್​ ಠಾಕೂರ್​ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ತಾನೊಬ್ಬ ಸೇನಾ ಅಧಿಕಾರಿ, ಕ್ಯಾಪ್ಟನ್ ಶೇಖರ್​ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಅನೇಕ ವಾಟ್ಸ್​ಆ್ಯಪ್ ಗ್ರೂಪ್​​ಗಳಲ್ಲಿ ಸಕ್ರಿಯನಾಗಿದ್ದ. ಅಲ್ಲದೆ, ಒಂದಷ್ಟು ಅಂತಾರಾಷ್ಟ್ರೀಯ ನಂಬರ್​ಗಳಿಗೂ ಆಗಾ ಕರೆ ಮಾಡುತ್ತಿದ್ದ ಎಂಬುದು ಮೊಬೈಲ್​ ಚೆಕ್​ ಮಾಡಿದಾಗ ಬೆಳಕಿಗೆ ಬಂದಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಒಂದೂವರೆ ತಿಂಗಳು ಕೊರೊನಾ ವಿರುದ್ಧ ಹೋರಾಡಿದ ಡಿಪಿಐಐಟಿ ಕಾರ್ಯದರ್ಶಿ ಡಾ. ಗುರುಪ್ರಸಾದ್ ಮೋಹಪಾತ್ರಾ ನಿಧನ; ಪ್ರಧಾನಿ ಮೋದಿಯವರಿಂದ ಸಂತಾಪ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ