AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾಧಿಕಾರಿ ಹೆಸರಲ್ಲಿ ಮಹಿಳೆಯರನ್ನು ಮೆಚ್ಚಿಸಿ, ಡೇಟಿಂಗ್​​ಗೆ ಹೋಗುತ್ತಿದ್ದ ವ್ಯಕ್ತಿ ಬಂಧನ..

ಶುಕ್ರವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ, ಅರ್ಚನಾ ರೆಡ್​ ಲೈಟ್​ ಗ್ರೇಟರ್​ ಕೈಲಾಶ್​​ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯೊಬ್ಬರನ್ನು ಭೇಟಿಯಾಗಲು ಈ ಪ್ರದೇಶಕ್ಕೆ ಬಂದಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಸೇನಾಧಿಕಾರಿ ಹೆಸರಲ್ಲಿ ಮಹಿಳೆಯರನ್ನು ಮೆಚ್ಚಿಸಿ, ಡೇಟಿಂಗ್​​ಗೆ ಹೋಗುತ್ತಿದ್ದ ವ್ಯಕ್ತಿ ಬಂಧನ..
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 19, 2021 | 5:32 PM

Share

ದೆಹಲಿ: ತಾನೊಬ್ಬ ಸೇನಾಧಿಕಾರಿ ಎಂದು ಹೇಳಿಕೊಂಡು ಮಹಿಳೆಯರನ್ನು ವಂಚಿಸುತ್ತಿದ್ದ 40 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸೋಷಿಯಲ್ ಮೀಡಿಯಾಗಳಲ್ಲಿ ಅಕೌಂಟ್​ಗಳನ್ನು ಹೊಂದಿದ್ದ ಈ ವ್ಯಕ್ತಿ ತಾನೊಬ್ಬ ಆರ್ಮಿ ಆಫೀಸರ್​ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಈತನ ಹೆಸರು ದಿಲೀಪ್​ ಕುಮಾರ್​ ಎಂದಾಗಿದ್ದು ದೆಹಲಿಯ ಮೋಹನ್ ಗಾರ್ಡನ್​ನಲ್ಲಿರುವ ಸೈನಿಕ್ ಎನ್​ಕ್ಲೇವ್​ ನಿವಾಸಿಯಾಗಿದ್ದ. ಶಾಲೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶುಕ್ರವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ, ಅರ್ಚನಾ ರೆಡ್​ ಲೈಟ್​ ಗ್ರೇಟರ್​ ಕೈಲಾಶ್​​ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯೊಬ್ಬರನ್ನು ಭೇಟಿಯಾಗಲು ಈ ಪ್ರದೇಶಕ್ಕೆ ಬಂದಿದ್ದ ಎಂದು ಪೊಲೀಸರು ಹೇಳಿದ್ದಾರೆ. ಈ ವೇಳೆ ಈತ ಸೇನಾ ಸಮವಸ್ತ್ರದಲ್ಲಿಯೇ ಇದ್ದ. ಹಾಗೇ ಒಂದು ನಕಲಿ ಐಡಿಯನ್ನೂ ಹೊಂದಿದ್ದ. ಆತನ ಮೊಬೈಲ್​ ಜತೆಗೆ ಫೇಕ್​ ಐಡಿ ಕಾರ್ಡ್​ನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಸೌತ್​​ನ ಡಿಸಿಪಿ ಅತುಲ್​ ಕುಮಾರ್​ ಠಾಕೂರ್​ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ತಾನೊಬ್ಬ ಸೇನಾ ಅಧಿಕಾರಿ, ಕ್ಯಾಪ್ಟನ್ ಶೇಖರ್​ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಅನೇಕ ವಾಟ್ಸ್​ಆ್ಯಪ್ ಗ್ರೂಪ್​​ಗಳಲ್ಲಿ ಸಕ್ರಿಯನಾಗಿದ್ದ. ಅಲ್ಲದೆ, ಒಂದಷ್ಟು ಅಂತಾರಾಷ್ಟ್ರೀಯ ನಂಬರ್​ಗಳಿಗೂ ಆಗಾ ಕರೆ ಮಾಡುತ್ತಿದ್ದ ಎಂಬುದು ಮೊಬೈಲ್​ ಚೆಕ್​ ಮಾಡಿದಾಗ ಬೆಳಕಿಗೆ ಬಂದಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಒಂದೂವರೆ ತಿಂಗಳು ಕೊರೊನಾ ವಿರುದ್ಧ ಹೋರಾಡಿದ ಡಿಪಿಐಐಟಿ ಕಾರ್ಯದರ್ಶಿ ಡಾ. ಗುರುಪ್ರಸಾದ್ ಮೋಹಪಾತ್ರಾ ನಿಧನ; ಪ್ರಧಾನಿ ಮೋದಿಯವರಿಂದ ಸಂತಾಪ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್